LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಟ್ವಿಟರ್‌’ಗೆ 50 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು: ‘ಅನಿಯಂತ್ರಿತ ಸಾಮಾಜಿಕ ಜಾಲತಾಣಗಳ ಬಳಕೆ ಪ್ರಜಾ ಪ್ರಭುತ್ವದ ಅಪಾಯಕ್ಕೆ ಕಾರಣ’ ಎಂಬ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿರುವ ಹೈಕೋರ್ಟ್‌, ಕೆಲವು ವೈಯಕ್ತಿಕ ಖಾತೆಗಳನ್ನು ನಿರ್ಬಂಧಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶಗಳನ್ನು ಪ್ರಶ್ನಿಸಿ ಟ್ವಿಟರ್ ಸಲ್ಲಿಸಿದ್ದ ರಿಟ್‌ ಅರ್ಜಿ ವಜಾಗೊಳಿಸಿದ್ದು, ಸಂಸ್ಥೆಗೆ 50 ಲಕ್ಷ ರೂ. ದಂಡ ವಿಧಿಸಿದೆ.

ಈ ಸಂಬಂಧ ಕೇಂದ್ರ ಸರ್ಕಾರ ನೀಡಿದ್ದ ನೋಟಿಸ್‌ ಗಳನ್ನು ಪ್ರಶ್ನಿಸಿ ಟ್ವಿಟರ್‌’ನ ಅಧಿಕೃತ ಪ್ರತಿನಿಧಿ ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆ ನಡೆಸಿ, ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಪ್ರಕಟಿಸಿದೆ. 50 ಲಕ್ಷ ರೂ. ದಂಡ: ‘ಅರ್ಜಿದಾರರು ಕಾರ್ಪೊರೇಟ್‌ ದಾವೆದಾರರಾಗಿದ್ದು ಸರಿಸುಮಾರು 5 ಬಿಲಿಯನ್‌ ಡಾಲರ್‌ ನಷ್ಟು ವಾರ್ಷಿಕ ವಹಿವಾಟು ಹೊಂದಿದವರಾಗಿದ್ದಾರೆ. ಈ ರಿಟ್‌ ಅರ್ಜಿಯ ಸುದೀರ್ಘ ವಿಚಾರಣೆ ವೇಳೆ ನಮ್ಮ ಸ್ಥಳೀಯ ಕಕ್ಷಿದಾರರಾದ ಕಾರ್ಮಿಕರು, ದಲಿತರು, ಬಡವರು, ಮಹಿಳೆಯರು ತಮ್ಮ ವ್ಯಾಜ್ಯಗಳ ವಿಚಾರಣೆಯಲ್ಲಿ ವಿಳಂಬ ಅನುಭವಿಸುವಂತಾಗಿದೆ.

https://bcsuddi.com/%e0%b2%87%e0%b2%82%e0%b2%a6%e0%b2%bf%e0%b2%a8%e0%b2%bf%e0%b2%82%e0%b2%a6-%e0%b2%85%e0%b2%a8%e0%b3%8d%e0%b2%a8%e0%b2%ad%e0%b2%be%e0%b2%97%e0%b3%8d%e0%b2%af-%e0%b2%97%e0%b3%83%e0%b2%b9%e0%b2%9c/

ಆದ್ದ ರಿಂದ, 50 ಲಕ್ಷ ರೂ. ದಂಡ ವಿಧಿಸಲಾಗುತ್ತಿದೆ’ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ. ‘ದಂಡದ ಮೊತ್ತವನ್ನು 45 ದಿನಗಳ ಒಳಗೆ ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೆ ಪಾವತಿಸಬೇಕು. ಒಂದೊಮ್ಮೆ ವಿಫಲವಾದರೆ 45 ದಿನಗಳ ಬಳಿಕ ಪ್ರತಿದಿನ ಹೆಚ್ಚುವರಿಯಾಗಿ 5 ಸಾವಿರ ರೂ. ನೀಡಬೇಕು’ ಎಂದು ಆದೇಶಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
Indian Navy Recruitment 2023: ಭಾರತೀಯ ನೌಕಾಪಡೆಯ 910 ಸೀನಿಯರ್ ಡ್ರಾಫ್ಟ್‌ಮ್ಯಾನ್ ಹುದ್ದೆಗಳಿಗೆ ಇಂದೇ ಅರ್ಜಿಯನ್ನು ಸಲ್ಲಿಸಿ.ಸಾಂತಾ ಕ್ಲಾಸ್ ಉಡುಪಿನಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ ಪ್ರಧಾನಿ ಮೋದಿ...!ನ್ಯಾಯಕ್ಕಾಗಿ ಠಾಣೆಗೆ ಬಂದ ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ - ಪಿಎಸ್ಐ ಅಮಾನತುSSLC, PUC ಹಾಗೂ Diploma ವನ್ನು ಓದಿದವರಿಗೆ ನ್ಯಾಯಾಲಯದಲ್ಲಿ ಹುದ್ದೆಗಳು..! ಇಂದೇ ಅರ್ಜಿಯನ್ನು ಸಲ್ಲಿಸಿಚಳಿಗಾಲದಲ್ಲಿ ಈ ಆಹಾರಗಳ ಸೇವನೆಯನ್ನು ಮಾತ್ರ ಎಂದಿಗೂ ಮರೆಯಬಾರದು..!ಹೆತ್ತ ತಾಯಿಯನ್ನೇ ಹಿಗ್ಗಾಮುಗ್ಗಾ ಥಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿದ ಪಾಪಿ ಪುತ್ರಮನೆಯ ಉತ್ತರ ದಿಕ್ಕಿನಲ್ಲಿ ಈ ವಸ್ತುಗಳನ್ನು ಇಟ್ಟರೆ ಧನ ಸಂಪತ್ತು ವೃದ್ಧಿಯಾಗಿ ಶ್ರೀಮಂತರಾಗುವ ಯೋಗ ಬರುತ್ತದೆ!ಸರ್ಕಾರ ಜಾತಿ ಗಣತಿಯ ಅಂಕಿ-ಅಂಶ ಬಿಡುಗಡೆ ಮಾಡಬಾರದು: ಶಾಮನೂರು ಶಿವಶಂಕರಪ್ಪ.!ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ : ಜಗದೀಶ್ ಶೆಟ್ಟರ್.!ರಾಜ್ಯಾಧ್ಯಂತ ಮುಂದಿನ ಎರಡು ದಿನಗಳಲ್ಲಿ ಭಯಂಕರ ಚಳಿ: ಹವಾಮಾನ ಇಲಾಖೆ.!