LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ತುಂತುರು ಮತ್ತು ಹನಿ ನೀರಾವರಿ ಘಟಕಗಳ ಉಪಯೋಗ ಮತ್ತು ನಿರ್ವಹಣೆ ಕುರಿತು ತರಬೇತಿ

 

ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿಕೇಂದ್ರದಲ್ಲಿ ಇದೇ ಅ.21 ಮತ್ತು 22ರಂದು ಬೆಳಿಗ್ಗೆ 10ಕ್ಕೆ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಕಸಬಾ ಮತ್ತು ರಾಂಪುರ ಹೋಬಳಿ ರೈತರಿಗೆ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತುಂತುರು ಮತ್ತು ಹನಿ ನೀರಾವರಿ ಘಟಕಗಳ ಉಪಯೋಗ ಮತ್ತು ನಿರ್ವಹಣೆ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.

ತರಬೇತಿ ಕಾರ್ಯಕ್ರಮದಲ್ಲಿ ಡಾ. ರಾಜಶೇಖರ ಡಿ ಭಾರ್ಕೆರ್ ಸಹ ಪ್ರಾಧ್ಯಪಕರು, ಇಂಜಿನಿಯರಿಂಗ್ ವಿಭಾಗ, ತೋಟಗಾರಿಕೆ ಮಹಾ ವಿದ್ಯಾಲಯ, ಬಬ್ಬೂರು ಇವರು ನೀರಿನ ಸಮರ್ಥ ಬಳಕೆ, ಹನಿ ನೀರಾವರಿ ಮತ್ತು ಸ್ಪ್ರೀಂಕ್ಲರ್ ಘಟಕಗಳ ಉಪಯೋಗ ಮತ್ತು ಅವುಗಳ ನಿರ್ವಹಣೆಯ ಕುರಿತು ವಿಷಯ ಮಂಡನೆ ಮತ್ತು ಪ್ರಾತ್ಯಕ್ಷಿಕೆ ನೀಡುವರು  ಹಾಗೂ ಡಾ.ಶಶಿಧರ ಬಿ.ಜಿ. ನಿವೃತ್ತ ಪ್ರಾಧ್ಯಪಕರು (ಬೇಸಾಯಶಾಸ್ತ್ರ), ನೀರಾವರಿ ತಜ್ಞರು ಮತ್ತು ಸಲಹೆಗಾರರು ಇವರು ಕೃಷಿ ಸಾಲು ಬೆಳೆಗಳಲ್ಲಿ ಹನಿ ನೀರಾವರಿ ಪದ್ದತಿಯ ಸಮರ್ಥ ಬಳಕೆ ಕುರಿತು ವಿಷಯ ಮಂಡನೆ ಮಾಡುವರು.

ಅ.21ರಂದು ಆಸಕ್ತ ಮೊಳಕಾಲ್ಮೂರು ತಾಲ್ಲೂಕಿನ ಕಸಬಾ ಹೋಬಳಿಯ  60 ಜನ ರೈತಭಾಂದವರು ಮತ್ತು ಅ.22ರಂದು ಆಸಕ್ತ ರಾಂಪುರ ಹೋಬಳಿಯ ರೈತಭಾಂದವರು ತರಬೇತಿಯಲ್ಲಿ ಭಾಗವಹಿಸಲು ಮೊಬೈಲ್ ಸಂಖ್ಯೆ 8277931058 ಗೆ ಕರೆ ಮಾಡಿ ನೊಂದಾಯಿಸಲು ಶ್ರೀ ರಜನೀಕಾಂತ. ಆರ್ ಸಹಾಯಕ ಕೃಷಿ ನಿರ್ದೇಶಕರು, ಜಿಲ್ಲಾ ಕೃಷಿ ತರಬೇತಿಕೇಂದ್ರ, ಬಬ್ಬೂರು ಫಾರಂ ಅವರು ಈ ತರಬೇತಿಯ ಸದುಪಯೋಗ ಪಡೆದುಕೊಳ್ಳುವಂತೆ ಕೋರಿದ್ದಾರೆ.

ಮೊದಲು ನೋಂದಣಿ ಮಾಡಿಕೊಂಡ 60 ಜನ ರೈತಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಹಾಗೂ ತರಬೇತಿಗೆ ಹಾಜರಾಗುವ ರೈತಬಾಂಧವರು ಕಡ್ಡಾಯವಾಗಿ ತಮ್ಮ ಎಫ್‍ಐಡಿ ಕಾರ್ಡ್, ರೇಷನ್ ಕಾರ್ಡ್ ಅಥವಾ ಚುನಾವಣೆ ಗುರುತಿನ ಚೀಟಿ ತರುವಂತೆ ಪ್ರಕಟಣೆ ತಿಳಿಸಿದೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಾಕ್ ಸೇನೆಗೆ ಪರಮಾಧಿಕಾರ ನೀಡಿದ ಪ್ರಧಾನಿ ಶೆಹಬಾಜ್ ಶರೀಫ್54 ವರ್ಷಗಳ ಬಳಿಕ ಬೆಂಗಳೂರಲ್ಲಿ ಮೊಳಗಿದ ಯುದ್ಧದ ಸೈರನ್‘ಭಾರತದ ಮೇಲೆ ಪ್ರತಿ ದಾಳಿಯ ಆಲೋಚನೆಯನ್ನೂ ಮಾಡಬೇಡಿ’- ಪಾಕ್‌ಗೆ ಅಮೆರಿಕ ಎಚ್ಚರಿಕೆ'ಸೇನೆ ಯಾವುದೇ ತಪ್ಪಿಲ್ಲದೆ ಕಾರ್ಯಾಚರಣೆ ನಡೆಸಿದೆ' - ಮೋದಿ ಶ್ಲಾಘನೆ“ಸೈನಿಕರ ಕಾರ್ಯದಕ್ಷತೆಗೆ ದೊಡ್ಡ ಸಲಾಂ” ಹಣೆಗೆ ಕುಂಕುಮವಿಟ್ಟು ತುರ್ತು ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯಆಪರೇಷನ್ ಸಿಂಧೂರ ಬಳಿಕ ನಾಳೆ ಬೆಳಗ್ಗೆ 11 ಗಂಟೆಗೆ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರಪ್ರಯಾಣಿಕರ ಗಮನಕ್ಕೆ: ವಿಮಾನಗಳ ವೇಳಾಪಟ್ಟಿಯಲ್ಲಿ ಬದಲಾವಣೆ'ಆಪರೇಷನ್‌ ಸಿಂಧೂರ್‌ʼ ಪಾಕ್‌ಗೆ ಎಚ್ಚರಿಕೆಯ ಗಂಟೆ- ಸಿಎಂಉಗ್ರ ಮಸೂದ್‌ ಅಜರ್‌ನ ಕುಟುಂಬದ ಹತ್ತು ಮಂದಿ ಸಾವು..!ಇದು ಹೆಮ್ಮೆಯ ಕ್ಷಣ ಸೇನಾಪಡೆಗಳಿಗೆ ಅಭಿನಂದನೆ ಸಲ್ಲಿಸಿದ ಮೋದಿ