LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ತೋಟಗಾರಿಕೆ ಇಲಾಖೆ ವತಿಯಿಂದ  ಸಹಾಯಧನ ಪಡೆಯಲು ಅರ್ಜಿ ಆಹ್ವಾನ

 

ಚಿತ್ರದುರ್ಗ: 2023-24ನೇ ಸಾಲಿನ ಹಿರಿಯೂರು ತಾಲ್ಲೂಕಿನ ತೋಟಗಾರಿಕೆ ಇಲಾಖೆ ವತಿಯಿಂದ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಸಹಾಯಧನ ಪಡೆಯಲು ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಗದಿತ ಅರ್ಜಿಗಳನ್ನು ಹಿರಿಯೂರು ತೋಟಗಾರಿಕೆ ಇಲಾಖೆಯಿಂದ ಪಡೆದು ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಸೆಪ್ಟೆಂಬರ್ 16 ರ ಒಳಗೆ ಸಲ್ಲಿಸಬೇಕು. ತದನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ಸೌಲಭ್ಯಗಳು: ತೋಟಗಾರಿಕೆ ಬೆಳೆಗಳಾದ ಬಾಳೆ, ದಾಳಿಂಬೆ, ಸೀಬೆ, ಬಿಡಿ ಹೂವು ಬೆಳೆಗಳನ್ನು ಹೊಸದಾಗಿ ಬೆಳೆಯಲು ಸಹಾಯಧನ ನೀಡಲಾಗುವುದು. ಸಂರಕ್ಷಿತ ಬೇಸಾಯ ಕಾರ್ಯಕ್ರಮ, ತೋಟಗಾರಿಕೆ ಬೆಳೆಗಳಿಗೆ ಪ್ಲಾಸ್ಟಿಕ್ ನೆಲಹೊಂದಿಕೆ, ವೈಯುಕ್ತಿಕ ಕೃಷಿಹೊಂಡ ಹಾಗೂ ಸಾಮೂಹಿಕ ಕೃಷಿಹೊಂಡ, ಕೊಯ್ಲೋತ್ತರ ನಿರ್ವಹಣೆಯಡಿ ಈರುಳ್ಳಿ ಸಂಗ್ರಹಣಾ ಘಟಕ, ಪ್ಯಾಕ್‌ಹೌಸ್‌ಗೆ ಸಹಾಯಧನ ನೀಡಲಾಗುವುದು. ಯೋಜನೆಯಡಿ ಕಾರ್ಯಕ್ರಮಗಳಿಗೆ ಈ ಹಿಂದೆ ಇಲಾಖೆಯಿಂದ ಸಹಾಯಧನ ಪಡೆಯದೇ ಇರುವ ಪರಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರಿಗೆ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ, ಅಲ್ಪಸಂಖ್ಯಾತರ, ಅಂಗವಿಕಲರಿಗೆ ಫಲಾನುಭವುಗಳಿಗೆ  ಆದ್ಯತೆ ನೀಡಲಾಗುವುದು. ಆಸಕ್ತ ರೈತರು ತೋಟಗಾರಿಕೆ ಇಲಾಖೆ ಹಿರಿಯೂರು ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಕೆ.ಲೋಕೇಶ್ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕ್ರಿಸ್‌ಮಸ್‌ ಸಂಭ್ರಮ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಬೈಕ್ ಅಪಘಾತ; ಇಬ್ಬರು ಯುವಕರ ದುರ್ಮರಣ..!ಕ್ರಿಸ್ಮಸ್ ದಿನವೇ ಮುದ್ದು ಮಗಳು ರಾಹಾಳ ಫೋಟೋ ಹಂಚಿಕೊಂಡ ಆಲಿಯಾ -ರಣಬೀರ್ ದಂಪತಿಮಾನವ ಕಳ್ಳಸಾಗಾಣಿಕೆಯಲ್ಲಿ ಬಂಧಿಯಾಗಿದ್ದ ಶಂಕೆ- ಮುಂಬೈ ತಲುಪಿದ ವಿಮಾನಗ್ಯಾಸ್ ಗೀಜರ್‌ನಿಂದ ಸ್ನಾನ ಮಾಡುವ ಮುನ್ನ ಇರಲಿ ಎಚ್ಚರ..! ಆರೋಗ್ಯ ಸಮಸ್ಯೆಗಳು ಉದ್ಭವವಾಗುತ್ತವೆ ಎನ್ನುತ್ತದೆ ಸಂಶೋಧನೆನಿರ್ಮಾಣ ಹಂತದ ಕಟ್ಟಡ ಕುಸಿತ - ಓರ್ವ ಕಾರ್ಮಿಕ ಸಾವು, ಹಲವರು ಗಂಭೀರ'ರಾಮಮಂದಿರದ ಇಡೀ ವಿಷಯ ಬಿಜೆಪಿಗೆ ಪ್ರದರ್ಶನವಾಗಿದೆ' - ಕಪಿಲ್‌ ಸಿಬಲ್‌'ರೈತರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿಲ್ಲ'- ಶಿವಾನಂದ ಪಾಟೀಲ್ ಸ್ಪಷ್ಟನೆಕೊರೊನಾ ಜೆಎನ್.1 ವೈರಸ್ -ಸಭೆ ನಡೆಸಿ ನಿಯಮ ಪಾಲನೆಯ ನಿರ್ಧಾರ - ದಿನೇಶ್ ಗುಂಡೂರಾವ್ಶಬರಿಮಲೆಯ ಅಯ್ಯಪ್ಪ ಭಕ್ತರಿಗೆ ನೀರು,ಆಹಾರ ಸೌಲಭ್ಯ ಒದಗಿಸುವಂತೆ ಹೈಕೋರ್ಟ್‌ ನಿರ್ದೇಶನದತ್ತಮಾಲೆ ಧರಿಸುವುದಾಗಿ ಘೋಷಣೆ ಮಾಡಿದ್ದ ಹೆಚ್ ಡಿ ಕೆ ಮಾತು ತಪ್ಪಿದ್ರಾ ?