ತೋಟಗಾರಿಕೆ ರೈತರಿಗೆ ಸಹಾಯಧನ ಪಡೆಯಲು ಅರ್ಜಿ ಅಹ್ವಾನ
ಚಿತ್ರದುರ್ಗ: 2023-24 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಘಟಕಗಳಿಗೆ ಸಹಾಯಧನ ಪಡೆಯಲು ಆಸಕ್ತ ರೈತ ಫಲಾನುಭವಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 16 ಕೊನೆ ದಿನಾಂಕ ಆಗಿರುತ್ತದೆ.
ದಾಳಿಂಬೆ, ಅಂಗಾAಶ ಬಾಳೆ, ಡ್ರಾಯಗನ್ ಪ್ಯೂಟ್ ಹಣ್ಣಿನ ಬೆಳೆಗಳ, ಹೈಬ್ರೆಡ್ ತರಕಾರಿ, ಸುಗಂಧರಾಜ ಹೂವುಗಳು, ಬಿಡಿ ಹೂವುಗಳ ಪ್ರದೇಶ ವಿಸ್ತರಣೆ ಕಾರ್ಯಕ್ರಮಕ್ಕೆ ಮತ್ತು ಸಮುದಾಯ ನೀರು ಸಂಗ್ರಹಣಾ ಘಟಕ, ವೈಯಕ್ತಿಕ ನೀರು ಸಂಗ್ರಹಣಾ ಘಟಕ, ಪ್ಲಾಸ್ಟಿಕ್ ಮಲ್ಟಿಂಗ್, ನೆರಳುಪರದೆ, ಪ್ಯಾಕ್ ಹೌಸ್ ಹಾಗೂ ಈರುಳ್ಳಿ ಶೇಖರಣ ಘಟಕಗಳಿಗೆ ಸಹಾಯಧನ ಪಡೆಯಲು ಆಸಕ್ತ ರೈತರು ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ ಅಥವಾ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಚಿತ್ರದುರ್ಗ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.