Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ದ್ವೈತ ಸಿದ್ಧಾಂತಕ್ಕೆ ವ್ಯವಸ್ಥಿತ ರೂಪ ನೀಡಿದ ಗುರುರಾಘವೇಂದ್ರರು: ಸಾಗರದಲ್ಲಿ ಡಾ.ಗುರುರಾಜ್ ಕಲ್ಲಾಪುರ ಅಭಿಪ್ರಾಯ

ಶಿವಮೊಗ್ಗ: ರಾಘವೇಂದ್ರ ಸ್ವಾಮಿಗಳು ಮಧ್ವಾಚಾರ್ಯರ ಅನುಯಾಯಿಯಾಗಿ ದ್ವೈತ ಸಿದ್ಧಾಂತದ ಮಹತ್ವವನ್ನು ವ್ಯವಸ್ಥಿತವಾಗಿ ಸಮಾಜಕ್ಕೆ ಪರಿಚಯಿಸಿದರು ಎಂದು ಸಾಗರದಲ್ಲಿ ಡಾ. ಗುರುರಾಜ್ ಕಲ್ಲಾಪುರ ಅಭಿಪ್ರಾಯಪಟ್ಟರು.

ಇಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಮಧ್ವಸಂಘದ ವತಿಯಿಂದ ಆಯೋಜಿಸಲಾಗಿರುವ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಗಾಯಕ ರಾಘವೇಂದ್ರ ಬೀಜಾಡಿ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು.

ಕಲಿಯುಗದ ಕಲ್ಪವೃಕ್ಷ, ಕಾಮಧೇನು ಎಂದೇ ಖ್ಯಾತರಾಗಿರುವ ರಾಯರು, ಸಶರೀರವಾಗಿ ಬೃಂದಾವನದಲ್ಲಿದ್ದುಕೊಂಡೇ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುತ್ತಿದ್ದಾರೆ. ತಮ್ಮ ಮಹಿಮೆಗಳ ಮೂಲಕವೇ ಭಕ್ತಿ ಹಾಗೂ ಭಗವಂತನ ಮಹತ್ವವನ್ನು ಜಗತ್ತಿಗೆ ಸಾರಿದ ರಾಯರ ಭಕ್ತವೃಂದ ವಿಶ್ವವ್ಯಾಪಿಯಾಗಿದೆ ಎಂದರು.

ಸ್ವಾಮೀಜಿಯವರು ರಚಿಸಿರುವ ಪ್ರಾತಃಸಂಕಲ್ಪಗದ್ಯ, ಭಾವದೀಪ, ನ್ಯಾಯದೀಪ, ಪರಿಮಳ ಸೇರಿದಂತೆ 48ಕ್ಕೂ ಹೆಚ್ಚು ಕೃತಿಗಳು ಹಾಗೂ ಗೀತೆಗಳು ಜನಮಾನಸದಲ್ಲಿವೆ. ಅವರ ಕೃತಿ ರತ್ನಗಳ ಅಭ್ಯಾಸ ಮತ್ತು ಅಧ್ಯಯನದ ಪರಂಪರೆ ನಿರಂತರವಾಗಿ ಮುಂದುವರಿಯಬೇಕಾದ ಅಗತ್ಯವಿದೆ ಎಂದು ತಿಳಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಗಾಯಕ ರಾಘವೇಂದ್ರ ಬೀಜಾಡಿ, ವಿಶ್ವದಾದ್ಯಂತ ಗುರುರಾಯರ ಆರಾಧನೆ ಸಂಭ್ರಮದಿಂದ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಗುರುಗಳ ಅನುಗ್ರಹ ಲಭಿಸಿರುವುದು ಸೌಭಾಗ್ಯ. 'ಹರಿಸರ್ವೋತ್ತಮ' ತತ್ವ ಸಾರುವ ಹರಿದಾಸರ ಕೀರ್ತನೆಗಳನ್ನು ಮುಂದಿನ ಪೀಳಿಗೆಗೆ ದಾಟಿಸುವ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಮಧ್ವಸಂಘದ ಅಧ್ಯಕ್ಷ ವೆಂಕಟೇಶ್ ಕಟ್ಟಿ ಮಾತನಾಡಿ, ಆರಾಧನೆ ಅಂಗವಾಗಿ 3 ದಿನಗಳ ಕಾಲ ರಾಯರ ಅಷ್ಟೋತ್ತರ ಪಾರಾಯಣ, ಭಜನೆ ಹಾಗೂ ಧಾರ್ಮಿಕ ಉಪನ್ಯಾಸಗಳು ನಡೆಯಲಿವೆ. ಭಾನುವಾರ ನಡೆಯುವ ಆರಾಧನಾ ಸಮಾರಂಭದಲ್ಲಿ ಅರ್ಚಕ ರಾಮಚಂದ್ರ ಭಟ್ ದಂಪತಿಗೆ 'ರಾಯರ ಅನುಗ್ರಹ' ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಮಾಹಿತಿ ನೀಡಿದರು.

ವೇದಿಕೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಶ್ರೀಶಾಚಾರ್, ವೈ. ಮೋಹನ್, ದೀಪಕ್ ಕಲ್ಯಾಣಿ, ಶ್ರೀಧರ್ ಬೋಜಾ, ಆನಂದ ಕಲ್ಯಾಣಿ, ಶಾಂತಮೂರ್ತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋರ್ಟ್ ಆದೇಶ ಉಲ್ಲಂಘನೆ: ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ FIR ದಾಖಲುದ್ವೈತ ಸಿದ್ಧಾಂತಕ್ಕೆ ವ್ಯವಸ್ಥಿತ ರೂಪ ನೀಡಿದ ಗುರುರಾಘವೇಂದ್ರರು: ಸಾಗರದಲ್ಲಿ ಡಾ.ಗುರುರಾಜ್ ಕಲ್ಲಾಪುರ ಅಭಿಪ್ರಾಯಬಿ.ನಾಗೇಂದ್ರ ರಾಜೀನಾಮೆ ದಲಿತ ಸಮುದಾಯಕ್ಕೆ ಸಂದ ಜಯ: ವಿಪಕ್ಷ ನಾಯಕ ಆರ್.ಅಶೋಕ್ಬಿಜೆಪಿ ಸಂಸದರಿಗೆ ಕಾಳಜಿ ಇದ್ದರೆ ಕಸ್ತೂರಿ ರಂಗನ್ ವರದಿ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಲಿ: ಸಚಿವ ಮಧು ಬಂಗಾರಪ್ಪ ಸವಾಲ್ನ್ಯಾಯಾಲಯಗಳ ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಂಪುಟ ಉಪ ಸಮಿತಿ ರಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇತೃತ್ವನಾಗೇಂದ್ರ ರಾಜೀನಾಮೆ ವೇಳೆ ಸುರಿಸಿದ ಕಣ್ಣೀರು ಬಿಜೆಪಿಯನ್ನು ನಾಶ ಮಾಡಲಿದೆ: ಸಚಿವ ಮಧು ಬಂಗಾರಪ್ಪಮಿ.ಡಿಸಿಪಿ ಯುನಿಫಾರ್ಮ್ ನಲ್ಲಿ ಇದ್ದ ಮಾತ್ರಕ್ಕೆ ಜನರ ಸ್ವಾತಂತ್ರ್ಯ ಕಸಿಯಲಾಗದು : ವೈಟ್ ಫೀಲ್ಡ್ ಡಿಸಿಪಿಗೆ ಹೈಕೋರ್ಟ್ ತರಾಟೆ!ಕಲಬುರ್ಗಿ ಪಾಲಿಕೆ ಕಾಂಗ್ರೆಸ್ ತೆಕ್ಕೆಗೆ : ನೂತನ ಮೇಯರ್ ಆಗಿ ಅಜ್ಜಲ್ ಅಹಮದ್, ಉಪಮೇಯರ್ ಆಗಿ ಫರ್ಹಾನಾಜ್ ಆಯ್ಕೆBREAKING : RSS ವಿರುದ್ಧ ಅವಹೇಳನಕಾರಿ ಹೇಳಿಕೆ ಕೇಸ್ : ಸಚಿವ ಪ್ರಿಯಾಂಕ್ ಖರ್ಗೆ ನಲಪಾಡ್ ಗೆ ಜಾಮೀನು ಮಂಜೂರು ನಾಗೇಂದ್ರ ರಾಜೀನಾಮೆ ನಡುವೆಯೂ 'ಬಿಜೆಪಿ ಪಾದಯಾತ್ರೆ' ಫಿಕ್ಸ್: ಶ್ರೀರಾಮುಲು 'ಬಳ್ಳಾರಿ ಚಲೋ' ಪೋಸ್ಟರ್ ರಿಲೀಸ್!