LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ದಸರಾ ಉದ್ಘಾಟನೆ ಬಿಡಿ, ಯಾವುದೇ ಸರ್ಕಾರಿ ಪತ್ರ-ಆದೇಶಕ್ಕೂ ಸಿಎಂ ಸಹಿ ಮಾಡಬಾರದು'- ಜೋಶಿ

ಹುಬ್ಬಳ್ಳಿ : ಎಫ್‌ಐಆರ್ ದಾಖಲಾಗಿರುವುದರಿಂದ ಸಿಎಂ ಸಿದ್ದರಾಮಯ್ಯ ಮೈಸೂರು ದಸರಾ ಉದ್ಘಾಟನೆ ಬಿಡಿ, ಯಾವುದೇ ಸರ್ಕಾರಿ ಪತ್ರ, ಆದೇಶಗಳಿಗೂ ಸಹಿ ಕೂಡ ಮಾಡಬಾರದು. ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನ್ಯಾಯಾಲಯ ತೀರ್ಪು ನೀಡಿದ ಬಳಿಕ ನಾವು ಎಂದಿಗೂ ಕಾಂಗ್ರೆಸ್ ಪಕ್ಷದಂತೆ ವರ್ತಿಸಿಲ್ಲ. ದಸರಾ ಪವಿತ್ರ ಆಚರಣೆಯಾಗಿದ್ದು, ದಸರಾ ಉದ್ಘಾಟನೆ ಅಲ್ಲ, ಸಿದ್ದರಾಮಯ್ಯ ಏನೂ ಮಾಡಬಾರದು. ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು ಎಂದು ಹೇಳಿದರು.

ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ್, ಸಚಿವ ಕುಮಾರಸ್ವಾಮಿ ವಿರುದ್ಧ ಹಂದಿ ಪದ ಬಳಸಿ ಪತ್ರ ಬರೆದಿರುವುದು ಕಾಂಗ್ರೆಸ್‌ಗೆ ಮುಳುವಾಗಲಿದೆ. ಗೌರವಯುತ ಪದ ಬಳಕೆ ಮಾಡುವುದು ಅಧಿಕಾರಿ ಕರ್ತವ್ಯ. ನಾನು ನೋಡಿದ ಹಾಗೆ ಕುಮಾರಸ್ವಾಮಿ ಅವರು ಏಕವಚನದಲ್ಲಿ ಮಾತನಾಡಿಲ್ಲ. ಆದರೆ, ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತ ಎಡಿಜಿಪಿ ಕೆಟ್ಟ ಪದ ಬಳಕೆ ಮಾಡಿದ್ದಾರೆ. ಇದು ಅಧಿಕಾರಿಯ ಅಹಂಕಾರದ ಪರಮಾವಧಿ. ಅವರು ಕುಮಾರಸ್ವಾಮಿ ಅವರಲ್ಲಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹ ಮಾಡಿದ್ದಾರೆ.

ನಾವು ಇದನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ಇದನ್ನು ಯಾವ ಕಾಲಕ್ಕೂ ಒಪ್ಪಿಕೊಳ್ಳಲು ಆಗುವುದಿಲ್ಲ. ಕೇಡರ್ ಕಂಟ್ರೋಲ್ ಮೂಲಕ ಕ್ರಮ ಕೈಗೊಳ್ಳಲಾಗುವುದು. ಈ ಸರ್ಕಾರವೇ ಕಾಯಂ ಅಧಿಕಾರದಲ್ಲಿ ಇರುತ್ತದೆ ಎಂಬ ಭ್ರಮೆಯಲ್ಲಿ ಅಧಿಕಾರಿಗಳು ಇದ್ದಲ್ಲಿ ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ. ಎಡಿಜಿಪಿ ಚಂದ್ರಶೇಖರ ಅವಹೇಳನಕಾರಿ ಪದ ಬಳಕೆ ಮಾಡಿರುವುದು ರಾಜ್ಯದ ಆಡಳಿತ ವ್ಯವಸ್ಥೆಗೆ ಹಿಡಿದ ಕೈಗನ್ನಡಿ. ರಾಜ್ಯದಲ್ಲಿ ಆಡಳಿತವೇ ಇಲ್ಲ. ಈ ಸರ್ಕಾರ ಯಾವುದಕ್ಕೂ ಸಹಕರಿಸುವುದಿಲ್ಲ ಎಂದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಗ್ಯಾರಂಟಿಗಳಿಗೆ ಮೀಸಲಿಟ್ಟ ಹಣ ಯಾರು ನುಂಗುತ್ತಿದ್ದಾರೆ'?- ಸರಕಾರಕ್ಕೆ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆಅನ್ನಭಾಗ್ಯದ ದುಡ್ಡೂ ಬಂದಿಲ್ಲ, ಗೃಹಲಕ್ಷ್ಮಿ ಹಣವೂ ಜಮೆಯಾಗಿಲ್ಲ- ಕೆಲವು ತಿಂಗಳಿಂದ ಸ್ಥಗಿತಗೊಂಡಿರುವ ಗ್ಯಾರಂಟಿಗಳುಆಂಧ್ರದಲ್ಲಿ GB (Guillain Barre) ಸಿಂಡ್ರೋಮ್ ಗೆ 2 ಬಲಿ …..!'ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆದ್ಯತೆ'- ಸಿ.ಎಂ.ಸಿದ್ದರಾಮಯ್ಯವೈಮಾನಿಕ ದಾಳಿ : ಅಲ್ ಖೈದಾ ಸದಸ್ಯನನ್ನು ಹೊಡೆದುರುಳಿಸಿದ ಅಮೆರಿಕ ಸೇನೆಸಿದ್ದರಾಮಯ್ಯ ಸಹಿ ನಕಲು ಮಾಡಿ ವಂಚನೆ: ಆರೋಪಿ ಬಂಧನ'ಕೇಂದ್ರದಲ್ಲಿ ಬಿಜೆಪಿಗೆ ಬಹುಮತವಿಲ್ಲ, ಮೋದಿ ಬದಲಾವಣೆ ಆಗಬಹುದು'- ಸಂತೋಷ್ ಲಾಡ್ಇಂದಿನಿಂದ ಫಾಸ್ಟ್‌ಟ್ಯಾಗ್‌ ಹೊಸ ನಿಯಮ ಜಾರಿ; ಕಡಿಮೆ ಬ್ಯಾಲೆನ್ಸ್ ಇದ್ರೆ ದುಪ್ಪಟ್ಟು ದಂಡರೈಲ್ವೆ ಮೆಗಾ ಸಬ್ ಅರ್ಬನ್ ಯೋಜನೆಗೆ ಪ್ಲ್ಯಾನ್ : ರೈತರಿಂದ ಆಕ್ರೋಶಫೆಬ್ರವರಿ 20ರಂದು ದೆಹಲಿ ಸಿಎಂ ಪ್ರಮಾಣವಚನ ಸ್ವೀಕಾರ ಸಾಧ್ಯತೆ