LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದಾವಣಗೆರೆ ಲೋಕಸಭಾ ಚುನಾವಣೆ : ಬಾನಂಗಳಲ್ಲಿ ಮತದಾನ ಅಭಿಯಾನ,

 

  ದಾವಣಗೆರೆ; ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಮೂಲಕ ಗುಣಾತ್ಮಕ ಪ್ರತಿನಿಧಿ ಆಯ್ಕೆಯಾಗಬೇಕೆಂದು ಸ್ವೀಪ್ ಸಮಿತಿ ನಿರಂತರ ಪ್ರಯತ್ನ ಮಾಡುತ್ತಿದ್ದು ಬಾನಂಗಳಲ್ಲಿ ಮತದಾನ ಜಾಗೃತಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಬಲೂನ್ ಹಾರಿಬಿಡುವ ಮೂಲಕ ಚಾಲನೆ ನೀಡಿದರು.

ಅವರು ಬುಧವಾರ ಜಿಲ್ಲಾ ಆಡಳಿತ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಪಾಲಿಕೆ ಕಟ್ಟಡದ ಮೇಲೆ ಮತದಾರರ ಜಾಗೃತಿಗಾಗಿ 12 ಅಡಿ ಸುತ್ತಳತೆಯುಳ್ಳ ಹೀಲಿಯಂ ತುಂಬಿದ ಬಲೂನ್ ಹಾರಿಬಿಡಲಾಯಿತು.

ಕಡ್ಡಾಯವಾಗಿ ಮತದಾನ ಮಾಡಿ, 2024 ರ ಮೇ 07 ರಂದು ಮಂಗಳವಾರ ಎಂಬ ಘೋಷದಡಿ ಬಲೂನ್ ಹಾರಿ ಬಿಡಲಾಯಿತು. ಈ ಬಲೂನ್ 100 ಅಡಿ ಎತ್ತರದಲ್ಲಿ ಹಾರಾಡುವ ಮೂಲಕ ದಾವಣಗೆರೆ ನಾಗರಿಕರು ಸೇರಿದಂತೆ ಸಾರ್ವಜನಿಕರಿಗೆ ಪ್ರದರ್ಶನವಾಗುವಂತೆ ಅನಾವರಣ ಮಾಡುವ ಮೂಲಕ ಚುನಾವಣಾ ಜಾಗೃತಿ ಮೂಡಿಸಲಾಗುತ್ತಿದೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ; ಷಣ್ಮುಖಪ್ಪ, ಆರೋಗ್ಯ ಇಲಾಖೆ ಕಾರ್ಯಕ್ರಮ ಅಧಿಕಾರಿಗಳಾದ ಡಾ; ಗಂಗಾಧರ್, ಡಾ; ರೇಣುಕಾರಾಧ್ಯ, ಡಾ; ಮಂಜುನಾಥ ಪಾಟೀಲ್, ಸುರೇಶ್ ಬಾರ್ಕಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪೊಲೀಸ್ ವಾಹನದಲ್ಲಿ ಗಣಪತಿ ಮೂರ್ತಿಯನ್ನ ಕೊಂಡೊಯ್ದ ಕ್ರಮಕ್ಕೆ ವಿಜಯೇಂದ್ರ ಕಿಡಿ..!'ಶಾಸಕ ಮುನಿರತ್ನ ವಿರುದ್ಧ ಸುಮೋಟೋ ಕೇಸ್ ದಾಖಲಿಸಬೇಕು'- ಡಿಕೆ ಸುರೇಶ್ಪೋರ್ಟ್‌ ಬ್ಲೇರ್ ಇನ್ಮುಂದೆ ‘ಶ್ರೀ ವಿಜಯಪುರಂ’: ಮರುನಾಮಕರಣ ಮಾಡಿದ ಕೇಂದ್ರ ಸರ್ಕಾರರಾಹುಲ್ ಗಾಂಧಿ ಪಪ್ಪು ಎಂದು ಜಿಲ್ಲಾಧಿಕಾರಿ ಪೋಸ್ಟ್‌- ಕಾಂಗ್ರೇಸ್‌ ಅಕ್ಷೇಪಉತ್ತರಾಖಂಡದಲ್ಲಿ ಭೂಕುಸಿತ: ಬದರಿನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಬಂದ್ಚಿಕಿತ್ಸೆ ಸಿಗದೆ ಸಾವನ್ನಪ್ಪಿದವರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಮಮತಾ'ಸರ್ ನಾನ್ ಏನ್‌ ಮಾಡಿದ್ರು ತಪ್ಪು ಅನ್ನೋದಾದ್ರೆ ನೀವು ನನಗೆ ಇನ್ನೇನ್ ಮಾಡೋಕ್ ಆಗುತ್ತೆ' - ದರ್ಶನ್ ಕಿರಿಕ್ಪತಿಯನ್ನು ಕೊಲ್ಲುವುದಾಗಿ ಬೆದರಿಸಿ ಮಹಿಳೆ ಮೇಲೆ ಪ್ರಜ್ವಲ್ ರೇವಣ್ಣನಿಂದ ಅತ್ಯಾಚಾರರುಚಿಕರವಾದ ಬೀಟ್ರೂಟ್ ಚಪಾತಿ ಮಾಡುವ ವಿಧಾನದೇಹದ ಮೂಳೆಗಳು ಗಟ್ಟಿಯಾಗಿರಲು ಈ ಆಹಾರ ಕ್ರಮ ಪಾಲಿಸಿ