LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದುರುದ್ದೇಶವಿಲ್ಲದೆ ಮಹಿಳೆಯರನ್ನು ತಬ್ಬಿಕೊಳ್ಳುವುದು ಅಪರಾಧವಲ್ಲ: ಬ್ರಿಜ್ ಭೂಷಣ್

ನವದೆಹಲಿ: ಲೈಂಗಿಕ ಉದ್ದೇಶವಿಲ್ಲದೆ ಮಹಿಳೆಯನ್ನು ತಬ್ಬಿಕೊಳ್ಳುವುದು ಅಪರಾಧವಲ್ಲ ಎಂದು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತ ಕುಸ್ತಿ ಫೆಡರೇಷನ್‌ನ ನಿರ್ಗಮಿತ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್‌ಭೂಷಣ್‌ ಶರಣ್ ಸಿಂಗ್‌ ನ್ಯಾಯಾಲಯದ ಮುಂದೆ ಹೇಳಿದ್ದಾರೆ. ಪ್ರಕರಣ ಸಂಬಂಧ ಬುಧವಾರ ದೆಹಲಿಯ ರೂಸ್​ ಅವೆನ್ಯೂ ನ್ಯಾಯಾಲಯಕ್ಕೆ ಹಾಜರಾದ ಬ್ರಿಜ್​ ಭೂಷಣ್​ ತಮ್ಮ ವಿರುದ್ಧ ಮಾಡಿರುವ ಆರೋಪಗಳನ್ನು ವಿರೋಧಿಸಿ ವಕೀಲರ ಮೂಲಕ ವಾದವನ್ನು ಮಂಡಿಸಿದ್ದಾರೆ. ಬ್ರಿಜ್​ ಭೂಷಣ್​ ಪರ ಹಿರಿಯ ವಕೀಲ್​ ರಾಜೀವ್​ ಮೋಹನ್ ವಕಾಲತ್ತು ವಹಿಸಿದ್ದಾರೆ. ನ್ಯಾಯಮೂರ್ತಿ ಹರ್ಜಿತ್​ಸಿಂಗ್​ ಜಸ್ಬಾಲ್​ ಅರ್ಜಿ ವಿಚಾರಣೆ ನಡೆಸುತ್ತಿದ್ದಾರೆ. ಕುಸ್ತಿ ಪಂದ್ಯಗಳು ಹೆಚ್ಚಾಗಿ ಪುರುಷ ತರಬೇತುದಾರರನ್ನೇ ಹೊಂದಿರುತ್ತವೆ ಎಂದು ಹೇಳಿದ ವಕೀಲರು. “ಆತಂಕದಿಂದ ಅಥವಾ ಉತ್ತಮ ಸಾಧನೆಗಾಗಿ ಆಟಗಾರನನ್ನು ಹುರಿದುಂಬಿಸುವ ಸಲುವಾಗಿ ಪುರುಷ ಕೋಚ್ ತಬ್ಬಿಕೊಂಡರೆ, ಅದು ಸಹಜ” ಎಂದು ಅವರು ಹೇಳಿದರು. ಈ ವೇಳೆ ವಾದ-ಪ್ರತಿವಾದವನ್ನೂ ಸುಧೀರ್ಘವಾಗಿ ಆಲಿಸಿದ ನ್ಯಾಯಾಲಯವೂ ವಿವಾರಣೆಯನ್ನೂ ಗುರುವಾರ ನಡೆಸುವುದಾಗಿ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರಸೇವಕರ ಬಂಧನ ಖಂಡಿಸಿ ನಾಳೆ ರಾಜ್ಯವ್ಯಾಪಿ ಪ್ರತಿಭಟನೆಇಬ್ಬರು ಮಕ್ಕಳೊಂದಿಗೆ ತಾಯಿ ನಿಗೂಢ ಸಾವು..!ಷರತ್ತು ಉಲ್ಲಂಘನೆ - ಭಾರತದ 71 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಅಕೌಂಟ್ ಬ್ಯಾನ್ಕರ್ನಾಟಕದಲ್ಲಿ ಇಂದಿನಿಂದ ಕೋವಿಡ್ ವ್ಯಾಕ್ಸಿನೇಷನ್ ಆರಂಭಶಬರಿಮಲೆ ಮಕರವಿಳಕ್ಕು ಉತ್ಸವ – ಮೊದಲ ದಿನವೇ ಭಕ್ತರ ಸಾಗರಸುಮ್ಮನೆ ICU ಗೆ ದಾಖಲು ಮಾಡುವ ಹಾಗಿಲ್ಲ….ಮೊದಲ ಬಾರಿಗೆ ಕೇಂದ್ರ ಸರಕಾರದಿಂದ ನಿಯಮಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನ ಸಾರ್ವತ್ರಿಕ ರಜೆ ಘೋಷಣೆಗೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ..!ರಾಜ್ಯದ ಪ್ರತಿ ಮನೆಗಳಿಗೆ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ ವಿತರಣೆ: ಶರಣ್ ಪಂಪ್‌ವೆಲ್ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ - ನಾಲ್ಕು ಮಂದಿ ಮೃತ್ಯುಏರ್ ಗನ್, ಚಾಕು ಹಿಡಿದು ಪ್ರಾರ್ಥಮಿಕ ಶಾಲಾ ಮಕ್ಕಳ ಹೊಡೆದಾಟಕ್ಕೆ ಶಿಕ್ಷಕ ವರ್ಗ ತಲ್ಲಣ..!