LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ದೊಡ್ಡದಾಗುತ್ತಿದೆ ಸಿಎಂ ಆಕಾಂಕ್ಷಿಗಳ ಪಟ್ಟಿ'- ವಿಜಯೇಂದ್ರ

ಬೆಂಗಳೂರು :ರಾಜ್ಯದ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕಾದ ಸಂದರ್ಭದಲ್ಲಿ ಬಂದು ನಿಂತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.

ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಕಾಂಗ್ರೆಸ್ ಸರಕಾರದ ಬೆದರಿಕೆಗಳು, ಬೆದರಿಕೆ ತಂತ್ರಗಳು, ಕುತಂತ್ರ ಇದ್ಯಾವುದಕ್ಕೂ ಕೂಡ ಭಯ ಪಡುವ ಪ್ರಶ್ನೆಯೇ ಇಲ್ಲ ಎಂದು ಅವರು ತಿಳಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹಗರಣ ಸೇರಿ ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಕಳೆದ ಕೆಲವು ದಿನಗಳಿಂದ ಹೋರಾಟ ಮಾಡುತ್ತ ಬಂದಿದೆ. ಮುಖ್ಯಮಂತ್ರಿಗಳ ಪರಿಸ್ಥಿತಿ, ಸಚಿವರ ಪರಿಸ್ಥಿತಿ ಸಹಜವಾಗಿಯೇ ನಮಗೆ ಅರ್ಥವಾಗುತ್ತಿದೆ. ಸಿಎಂ ರಾಜೀನಾಮೆ ಕೊಡಬೇಕಾದ ಸಂದರ್ಭ ಬಂದಿದ್ದು, ಅದನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಇದಕ್ಕಾಗಿಯೇ ಪಿತೂರಿ ನಡೆದಿದೆ. ಸಂದರ್ಭ ಬಂದಾಗ ಅದಕ್ಕೆ ಸೂಕ್ತ ಉತ್ತರ ಕೊಡಲಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಎತ್ತಿನಹೊಳೆ ಯೋಜನೆ: ಕಳೆದ ಹಲವಾರು ದಶಕಗಳಿಂದ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಭಾಗಕ್ಕೆ ನೀರು ಕೊಡುವ ಯೋಜನೆ ಇದಾಗಿದೆ. ಇದರ ಆರಂಭದಲ್ಲಿ ಸುಮಾರು 8,500 ಕೋಟಿ ಯೋಜನಾ ವೆಚ್ಚ ಇದ್ದುದು ಈಗ ಅದು 20-22,500 ಕೋಟಿಗೆ ಏರಿದೆ. ಈ ಯೋಜನೆಗೆ ಚಾಲನೆ ನೀಡಿದ್ದು ಸಂತೋಷ; ಆದರೆ, ಅದರ ಮೂಲ ಉದ್ದೇಶ ಈಡೇರಲಿದೆಯೇ ಎಂಬ ಪ್ರಶ್ನೆ ಸಾಕಷ್ಟು ಜನರಲ್ಲಿದೆ ಎಂದು ತಿಳಿಸಿದರು.

ಸಿಎಂ, ಡಿಸಿಎಂ ಕ್ರೆಡಿಟ್ ವಾರ್: ಸಿಎಂ, ಡಿಸಿಎಂ ಕ್ರೆಡಿಟ್ ವಾರ್ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಮುಖ್ಯಮಂತ್ರಿಗಳು ಹೋಗುವ ಮುಂಚಿತವಾಗಿಯೇ ನಿನ್ನೆ ದಿನ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪೂಜೆ ಪುನಸ್ಕಾರ ಮಾಡಿದ್ದನ್ನು ಗಮನಿಸಿದ್ದೇನೆ. ಮುಖ್ಯಮಂತ್ರಿ ಸ್ಥಾನ ಅಲುಗಾಡುವ ಸಂದರ್ಭ ಇದಾಗಿದೆ. ಮುಖ್ಯಮಂತ್ರಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗುತ್ತಿದೆ. ಡಿ.ಕೆ. ಶಿವಕುಮಾರ್ ಕೂಡ ಆ ಪಟ್ಟಿಯಲ್ಲಿ ಮುಂಚೂಣಿಯಲ್ಲಿ ಇರುವವರು ಎಂದು ವಿಶ್ಲೇಷಿಸಿದರು. ಕ್ರೆಡಿಟ್ ತೆಗೆದುಕೊಳ್ಳುವುದು ದೊಡ್ಡ ವಿಚಾರವಲ್ಲ; ಎತ್ತಿನಹೊಳೆ ಯೋಜನೆ ಆ ಭಾಗದ ಜನರಿಗೆ ಅನುಕೂಲ ಆಗಬೇಕು. ಅದರಲ್ಲಿ ಪ್ರಾಮಾಣಿಕತೆ ತೋರಿಸಿದರೆ ಸಾಕು ಎಂದರು.

ಇದೇ 2ರಂದು ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರು ದೆಹಲಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ರಾಜ್ಯದಲ್ಲೂ ಸದಸ್ಯತ್ವ ಅಭಿಯಾನವು ದೊಡ್ಡ ಮಟ್ಟದಲ್ಲಿ ನಡೆದಿದೆ ಎಂದು ವಿವರಿಸಿದರು.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೇಷನ್‌ ಕಾರ್ಡ್‌ ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೊಮ್ಮೆ ಅವಕಾಶಪತ್ನಿ ಅನುಮತಿ ಇಲ್ಲದೆ, ಆಕೆಗೆ ಗೊತ್ತಿಲ್ಲದೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವುದು ಅಪರಾಧವಲ್ಲ: ಹೈಕೋರ್ಟ್ಮೈಸೂರು ಗಲಭೆ ಹಿಂದೆ RSS ಕೈವಾಡ: ಲಕ್ಷ್ಮಣ್ ಆರೋಪಬೈಕ್ ಚಲಾಯಿಸಿದ ಅಪ್ರಾಪ್ತನ ಪೋಷಕರಿಗೆ 25 ಸಾವಿರ ರೂಪಾಯಿ ದಂಡಬಿಸಿಲಿನ ತಾಪಕ್ಕೆ ಹೊಸ ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಸರ್ಕಾರಕ್ರಿಕೆಟ್‌ನಲ್ಲಿ ಬಳಸಲಾಗುವ ಕ್ಯಾಮೆರಾಗಳ ಬೆಲೆ ಎಷ್ಟು ಗೊತ್ತಾ?ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನಭಾರತ ತಂಡಕ್ಕೆ ಮೊಹಮ್ಮದ್ ಸಿರಾಜ್ ಮತ್ತೆ ಆಯ್ಕೆವಿಶ್ವದ 10 ಅತ್ಯಂತ ಭ್ರಷ್ಟ ದೇಶಗಳು ಯಾವುವು? - ಭಾರತ ಎಷ್ಟೇ ಸ್ಥಾನದಲ್ಲಿದೆ ಗೊತ್ತಾ?2025ರ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಫೈನಲ್ - ಜಸ್ಪ್ರೀತ್ ಬುಮ್ರಾ ಔಟ್