LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೊಡ್ಡವರ ಅಕ್ರಮ, ಅನಾಚಾರಗಳಿಗೆ ಕಠಿಣ ಶಿಕ್ಷೆ ಕೊಡಿಸುವ ವಿಶೇಷ ಕಾನೂನು ರೂಪಿಸುವ ಅಗತ್ಯವಿದೆ : ಸಚಿವ ಎಚ್.ಕೆ. ಪಾಟೀಲ್

ಬೆಂಗಳೂರು; ಕಳೆದ ಒಂದು ಸಾವಿರ ವರ್ಷಗಳಲ್ಲಿ ಆಗದ ಆಕ್ರಮಗಳು, ಆಕ್ರಮಣಗಳು ಕೇವಲ ಒಂದೇ ವರ್ಷದಲ್ಲಿ ನಡೆದಿದೆ. ದೊಡ್ಡ ದೊಡ್ಡ ವ್ಯಕ್ತಿಗಳ ಅಕ್ರಮಗಳು, ಅನಾಚಾರ, ದೌರ್ಜನ್ಯಗಳಿಗೆ ಕಠಿಣ ಶಿಕ್ಷೆ ಕೊಡಿಸುವ ಬಗ್ಗೆ ವಿಶೇಷ ಕಾನೂನು ರೂಪಿಸಬೇಕಾಗಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ. ಪಾಟೀಲ ಹೇಳಿದ್ದಾರೆ.

ಡಾ.ಶಿವಕುಮಾರ ಸ್ವಾಮಿಗಳ 118ನೇ ಜಯಂತೋತ್ಸವ : ನ್ಯಾ.ಡಾ.ಶಿವರಾಜ್ ಪಾಟೀಲರಿಗೆ ಅಭಿನಂದನಾ ಸಮಾರಂಭ

ಭಾರತೀಯ ವಿದ್ಯಾಭವನದಲ್ಲಿ. ಶ್ರೀ ಶ್ರೀ ಡಾ. ಶಿವಕುಮಾರ್ ಸ್ವಾಮೀಜಿಗಳ ಜಯಂತೋತ್ಸವ ಹಾಗೂ ಗೌ. ನ್ಯಾ. ಶಿವರಾಜ್ ಎಸ್ ಪಾಟೀಲ್ ಅಭಿನಂದನಾ ಸಮಿತಿಯಿಂದ ಆಯೋಜಿಸಿದ್ದ ಕರ್ನಾಟಕ ರತ್ನ, ಡಾ. ಶಿವಕುಮಾರ ಸ್ವಾಮಿಗಳ 118ನೇ ಜಯಂತೋತ್ಸವ ಹಾಗೂ ಜಸ್ಟೀಸ್ ಡಾ. ಶಿವರಾಜ್ ಪಾಟೀಲರಿಗೆ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸಾವಿರ ವರ್ಷಗಳಲ್ಲಿ ಆದ ಆಕ್ರಮಗಳು ಕೇವಲ ಒಂದೇ ವರ್ಷದಲ್ಲಿ ಎಲ್ಲರೂ ಘಟಿಸಿವೆ. ಮಾನವೀಯತೆ ಮರೆತಂತೆ ವರ್ತಿಸುತ್ತಿದ್ದಾರೆ. ಸಮಾಜಕ್ಕೆ ನೈತಿಕತೆ ಬೋಧಿಸುವವರು, ಕಾನೂನು, ನ್ಯಾಯಾಂಗ ವ್ಯವಸ್ಥೆಯನ್ನು ಎತ್ತಿ ಹಿಡಿಯುವರು, ರಾಜಕೀಯ ಕ್ಷೇತ್ರ, ಆಡಳಿತ ವ್ಯವಸ್ಥೆಯ ಮೊದಲ ಆರೇಳು ಆಗ್ರಪಂಕ್ತಿಯ ವ್ಯಕ್ತಿಗಳು ಇಂತಹ ಹೇಯ ಕೃತ್ಯಗಳಲ್ಲಿ ತೊಡಗಿದ್ದಾರೆ. ಈಗಿರುವುದು ಸಣ್ಣ ಸಣ್ಣ ಅಪರಾಧಗಳಿಗೆ ಶಿಕ್ಷಿಸುವ ಕಾನೂನುಗಳಾಗಿವೆ. ಹೀಗಾಗಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಒಳಗೊಂಡಂತೆ ದೊಡ್ಡ ವ್ಯಕ್ತಿಗಳಿಗೆ ಕಾನೂನಿನ ಮೂಲಕ ಬಿಸಿ ಮುಟ್ಟಿಸಿ ಸರ್ಕಾರ, ಸಮಾಜಕ್ಕೆ ವಿಶೇಷ ಸಂದೇಶ ರವಾನಿಸಬೇಕಾಗಿದೆ. ಇದಕ್ಕಾಗಿ ನ್ಯಾಯಾಂಗ ಕ್ಷೇತ್ರದ ಗಣ್ಯರು ಸೂಕ್ತ ಮಾರ್ಗದರ್ಶನ ಮಾಡಬೇಕು ಎಂದು ಮನವಿ ಮಾಡಿದರು.

ಪರಮೋಚ್ಛ ಶಿಷ್ಟಾಚಾರ ಅನುಭವಿಸುವವರೇ ಕೃತ್ಯಗಳಲ್ಲಿ ಭಾಗಿ

ದೊಡ್ಡ ಅಪರಾಧಗಳನ್ನು ನೋಡಲಾಗದೇ ನಾವು ಟಿವಿ ಬಂದ್ ಮಾಡುತ್ತೇವೆ. ಪರಮೋಚ್ಛ ಶಿಷ್ಟಾಚಾರ ಅನುಭವಿಸುವವರೇ ಇಂತಹ ಕೃತ್ಯಗಳಲ್ಲಿ ತೊಡಗುತ್ತಾರೆ. ಪೊಲೀಸರು ಪಿಕ್ ಪಾಕೆಟ್ ಮಾಡುವವರನ್ನು, ಸಂಚಾರಿ ನಿಯಮ ಉಲ್ಲಂಘಿಸುವವರ ಮೇಲೆ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ನಾವು ಆರೋಪಿಸುತ್ತೇವೆ. ದೊಡ್ಡ ದೊಡ್ಡ ಅಪರಾಧ ಪ್ರಕರಣಗಳಲ್ಲಿ ಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದರೆ ತಪ್ಪಾಗುತ್ತದೆ. ಈಗ ದೊಡ್ಡವರು ಮಾಡುವ ತಪ್ಪುಗಳನ್ನು ಸಣ್ಣವರು ಸಹ ಮಾಡಿದರೆ ನಮ್ಮ ಸಮಾಜ ಎಲ್ಲಿಗೆ ತಲುಪುತ್ತದೆ. ದೊಡ್ಡ ವಿಕೃತ ಮನಸ್ಸಿನವರಿಗೆ, ದುರಾಸೆಯವರಿಗೆ ಸರಿಯಾದ ಪಾಠ ಕಲಿಸುವ ನ್ಯಾಯ ವ್ಯವಸ್ಥೆಯನ್ನು ಸ್ಥಾಪಿಸಬೇಕಾಗಿದೆ ಎಂದು ಎಚ್.ಕೆ. ಪಾಟೀಲ್ ಬಲವಾಗಿ ಪ್ರತಿಪಾದಿಸಿದರು.

ನ್ಯಾಯಾಂಗ ವ್ಯವಸ್ಥೆಯಲ್ಲಿ ಜಸ್ಟೀಸ್ ಶಿವರಾಜ್ ಪಾಟೀಲ್ ಅವರಂತಹ ಗಣ್ಯರು ಸೂಕ್ತ ಮಾರ್ಗದರ್ಶನ ಮಾಡಬೇಕು. ಇವರಿಂದಾಗಿಯೇ ರಾಜ್ಯದಲ್ಲಿ ಮಾನವ ಹಕ್ಕುಗಳ ಆಯೋಗ ಸ್ಥಾಪನೆಯಾಯಿತು. ಜಸ್ಟೀಸ್ ಪಾಟೀಲರು ಸೂಕ್ತ ಮಾರ್ಗದರ್ಶಕರು. ಸಕಾರಾತ್ಮಕ ಚಿಂತನೆಯುಳ್ಳವರು. ಅವರು ಸರ್ಕಾರ ಮತ್ತು ಸಮಾಜಕ್ಕೆ ಬಹುದೊಡ್ಡ ಆಸ್ತಿ ಎಂದು ಹೇಳಿದರು.

ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ನಾಡು ಕಂಡ ನಡೆದಾಡುವ ಪವಾಡ ಪುರುಷ. ತಮ್ಮ ಕೆಲಸಗಳ ಮೂಲಕ ಸಮಾಜ ಮತ್ತು ದೇಶಕ್ಕೆ ಕೊಡುಗೆ ನೀಡುವ ವ್ಯಕ್ತಿಗಳನ್ನು ರೂಪಿಸಿದ್ದಾರೆ. ಸಿದ್ಧಗಂಗಾ ಮಠದಲ್ಲಿ ಶಾಲೆಗೆ ರಜೆ ಇದ್ದರೂ ಸಹ ಸಹಸ್ರಾರು ಮಂದಿ ಮಕ್ಕಳು ಉಳಿಯುತ್ತಿದ್ದರು. ಹೀಗೆ ಉಳಿಯುತ್ತಿದ್ದವರೆಲ್ಲರೂ ತಂದೆ, ತಾಯಿ ಇಲ್ಲದ ಅನಾಥರು. ಜಾತಿ, ಬೇಧ ಮಾಡದೇ ಪ್ರತಿಯೊಬ್ಬರನ್ನು ಒಪ್ಪಿಕೊಂಡು, ಅಪ್ಪಿಕೊಂಡ ಮಹಾನ್ ಸಂತ ಎಂದು ಸಚಿವ ಎಚ್.ಕೆ. ಪಾಟೀಲ್ ಬಣ್ಣಿಸಿದರು.

ಸಿದ್ದಗಂಗಾ ಶ್ರೀಗಳನ್ನು ನೆನಪಿಸಿಕೊಳ್ಳುವುದು ಅನಿವಾರ್ಯ: ಶಿವರಾಜ್ ಎಸ್ ಪಾಟೀಲ್

ಅಭಿನಂದನೆ ಸ್ವೀಕರಿಸಿ ನಾಡೋಜ ನ್ಯಾ. ಡಾ. ಶಿವರಾಜ್ ಎಸ್ ಪಾಟೀಲ್ ಮಾತನಾಡಿ, ಸಿದ್ದಗಂಗೆ ಮಠದ ಶ್ರೀ ಶ್ರೀ ಶಿವಕುಮಾರ್ ಮಹಾಸ್ವಾಮೀಜಿಗಳು ಎಂದೆಂದಿಗೂ ಪ್ರಸ್ತುತನೇ ಎಲ್ಲರೂ ಅವರನ್ನು ನೆನೆಸಿಕೊಳ್ಳಬೇಕಾದ ಅನಿವಾರ್ಯತೆ ಇಂದಿಗೂ ಇದೆ, ತ್ರಿವಿಧ ದಾಸೋಹಗಳ ಮೂಲಕ ನಾಡು ಸೇರಿದಂತೆ ದೇಶದಲ್ಲಿ ಇವರ ಚಾಕು ಹಚ್ಚ ಹಳಿಯದಾಗಿ ಉಳಿದಿದೆ. ಶಿವಕುಮಾರ ಮಹಾಸ್ವಾಮಿಗಳು ಕಾಯಕಯೋಗಿಯಾಗಿ ಜೀವನದಲ್ಲಿ ನಿತ್ಯ ಕ್ರಮದ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳುವುದರ ಮೂಲಕ ಸಮಾಜದ ಅಂಕುಡೊಂಕಗಳನ್ನು ತಿದ್ದುವ ಹಾಗೂ ಎಲ್ಲಾ ಧರ್ಮಿಯರಿಗೂ ಸಹ ಮಠದಲ್ಲಿ ಸ್ಥಾನಮಾನವನ್ನು ಕಲ್ಪಿಸಿ ಕೊಟ್ಟ ಏಕೈಕ ಸ್ವಾಮೀಜಿಗಳಲ್ಲಿ ಸಿದ್ದಗಂಗಾ ಶ್ರೀಗಳು ಪ್ರಥಮ ಸ್ಥಾನದಲ್ಲಿ ನೋಡಬಹುದಾಗಿದೆ.

ಕರ್ನಾಟಕದಾದ್ಯಂತ ಯಾರು ಕಡು ಬಡತನದಲ್ಲಿ ಇರುತ್ತಾರೋ ಅಂತವರಿಗೆ ಆಶ್ರಯವನ್ನು ನೀಡಿದಂತಹ ಮಹಾನ್ ಪುರುಷ ಶ್ರೀಗಳು ದೈಹಿಕವಾಗಿ ಇಲ್ಲದಿದ್ದರೂ ಸಹ ಅವರ ಆಚಾರ ವಿಚಾರಗಳು ನಡೆ-ನುಡಿಗಳು ಸಮಾಜಕ್ಕೆ ನೀಡಿದ ಕೊಡುಗೆಗಳು ಎಂದೆಂದಿಗೂ ಅಜರಾಮರವಾಗಿರುತ್ತದೆ. ಸಿದ್ದಗಂಗಾ ಮಠದಿಂದ ಲಕ್ಷಾಂತರ ಮಂದಿ ಪ್ರಯೋಜನಗಳನ್ನು ಪಡೆದುಕೊಂಡಿದ್ದಾರೆ. ಅನೇಕ ದೊಡ್ಡ ದೊಡ್ಡ ಹುದ್ದೆಗಳಲ್ಲಿಯೂ ಸಹ ಇಂದಿಗೂ ಅವರ ಹೆಸರಿನಲ್ಲಿ ಬದುಕುತ್ತಿದ್ದಾರೆ. ಅಂತವರು ಮಠಗಳಿಗೆ ಯಾವ ರೂಪದಲ್ಲಾದರೂ ಸಹ ಗುರು ಕಾಣಿಕೆ ನೀಡುವ ಮೂಲಕ ಸಹಾಯ ಮಾಡಿದರೆ  ಒಂದು ರೀತಿಯಲ್ಲಿ ಸಹ ಸಮಾಜ ಸೇವೆಯಾಗುತ್ತದೆ ಎಂದರು. ನನಗೆ ಜೀವನದಲ್ಲಿ ಎರಡು ಆಸೆಗಳಿವೆ, ದೇವರಲ್ಲಿ ಪ್ರಾರ್ಥನೆ ಮಾಡಿಕೊಳ್ಳುವುದೇನೆಂದರೆ ಮೊದಲನೆಯದು ನನಗೆ ಉತ್ತಮ ಆರೋಗ್ಯ ಬೇಕು ಹಾಗೂ ಸಮಾಜ ಸೇವೆ ಮಾಡಲು ಶಕ್ತಿ ಕೊಡಬೇಕು, ದೇವರು ಇಲ್ಲಿಯವರೆಗೆ ನನ್ನನ್ನು ಕರೆದೊಯುತ್ತಾನೋ ಅಲ್ಲಿಯವರೆಗೂ ನಾನು ನಿತ್ಯ ನಿರಂತರವಾಗಿ ಸಮಾಜ ಸೇವೆಯಲ್ಲಿ ತೊಡೆಯುಕೊಳ್ಳುತ್ತೇನೆ ಎಂದು ವಿಶ್ವಾಸದಿಂದ ವ್ಯಕ್ತಪಡಿಸಿದರು.

ಬೆಂಗಳೂರು ಕರ್ನಾಟಕ ಉಚ್ಚನ್ಯಾಯಾಲಯ ಹೆಚ್ಚುವರಿ ಅಡ್ವಿಕೇಟ್ ಜನರಲ್ ಎನ್. ದೇವದಾಸ್ ಅಧ್ಯಕ್ಷತೆ ವಹಿಸಿದ್ದರು. ಧರ್ಮಗುರು, ನಿಡುಮಾಮಿಡಿ ಮಹಾ ಸಂಸ್ಥಾನದ ವೀರಭದ್ರ ಚನ್ನಮಲ್ಲ ದೇಶಿಕೇಂದ್ರ ಮಹಾಸ್ವಾಮೀಜಿ ಆಶೀರ್ಚನ ನೀಡಿದರು.

ಜಸ್ಟೀಸ್ ಅಶೋಕ ಹಿಂಚಗೇರಿ, ಹಿರಿಯ ವಕೀಲರಾದ ಉದಯ ಹೊಳ್ಳ, ಭಾರತೀಯ ವಿದ್ಯಾಭವನದ ಅಧ್ಯಕ್ಷರಾದ ಕೆ.ಜಿ. ರಾಘವನ್, ಅಡ್ವೋಕೆಟ್ ಜನರಲ್ ಕೆ. ಶಶಿಕಿರಣ ಶೆಟ್ಟಿ, ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷ ಎಸ್.ಎಸ್. ಮಿತ್ತಲಕೋಡ, ಹಿರಿಯ ವಕೀಲರು, ಶ್ರೀ ಶ್ರೀ ಡಾ. ಶಿವಕುಮಾರ್ ಸ್ವಾಮೀಜಿಗಳ ಜಯಂತೋತ್ಸವ ಹಾಗೂ ಗೌ. ನ್ಯಾ. ಶಿವರಾಜು ಎಸ್ ಪಾಟೀಲ್ ಅಭಿನಂದನಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಆರ್.ಆರ್. ಹಿರೇಮಠ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ