LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನವದೆಹಲಿ : ಪ್ರಧಾನಿ ಪಲಾಯನ ಮಾಡದಿರಲಿ - ಮಣಿಪುರ ಹಿಂಸಾಚಾರ ಸದನದಲ್ಲಿ ಚರ್ಚೆಯಾಗಲಿ ಮಲ್ಲಿಕಾರ್ಜುನ ಖರ್ಗೆ

ಸಂಸತ್‌ನ ಮುಂಗಾರು ಅಧಿವೇಶನದಲ್ಲಿ ಮಹಾಘಟಬಂಧನದ ನಾಯಕರು ಒಟ್ಟಾಗಿ ಆಡಳಿತ ಪಕ್ಷದ ವಿರುದ್ಧ ಮುಗಿಬಿದ್ದರು. ಮಣಿಪುರದಲ್ಲಿನ ಹಿಂಸಾಚಾರ ಎಲ್ಲೆ ಮೀರಿದ್ದು, ಕಾನೂನು ಸುವ್ಯವಸ್ಥೆ ತೀರ ಹದಗೆಟ್ಟಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಗಲಭೆ ಹಿಂಸಾಚಾರವನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಈ ಬಗ್ಗೆ ಉಭಯ ಸದನಗಳಲ್ಲಿ ಚರ್ಚೆಯಾಗಬೇಕು ಅಂತಾ ಪಟ್ಟು ಹಿಡಿದರು. ಈ ವೇಳೆ ಆಡಳಿತರೂಢ ಎನ್‌ಡಿಎ ಮತ್ತು ಪ್ರತಿಪಕ್ಷಗಳ ನಡುವೆ ಕೆಲಕಾಲ ಗದ್ದಲ ಏರ್ಪಟ್ಟಿತು. ಇತ್ತ, ರಾಜ್ಯಸಭೆಯಲ್ಲೂ ಮಣಿಪುರದ ಹಿಂಸಾಚಾರವೇ ಪ್ರತಿಧ್ವನಿಸಿದ್ದು, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಣಿಪುರ ಬಗ್ಗೆ ನಿಯಮ 267 ರ ಅಡಿಯಲ್ಲಿ ವಿಸ್ತೃತ ಚರ್ಚೆಯಾಗಬೇಕೆಂದು ಒತ್ತಾಯಿಸಿದರು. ಪ್ರಧಾನಿ ಇದಕ್ಕೆ ಉತ್ತರ ನೀಡಬೇಕೆಂದು ಪಟ್ಟು ಹಿಡಿದರು. ಈ ವೇಳೆ ಖರ್ಗೆಯವರ ವಾದಕ್ಕೆ ಇತರ ಪ್ರತಿಪಕ್ಷಗಳು ಧ್ವನಿಗೂಡಿಸಿದವು. ಈ ವೇಳೆ ಬಿಜೆಪಿ ಮತ್ತು I.N.D.I.A. ಗಳ ಮಧ್ಯೆ ವಾಕ್ಸಮರವೇ ನಡೆಯಿತು. ಪ್ರಧಾನಿ ಮೋದಿ ಸದನದ ಹೊರಗೆ ಸುದ್ದಿಗೋಷ್ಟಿಯಲ್ಲಿ ಹೇಳಿದರೆ ಮುಗಿಯಲ್ಲ. ಬದಲಾಗಿ ಸದನದ ಒಳಗೂ ಮಣಿಪುರದ ವಿಷಯವಾಗಿ ವಿವರ ಒದಗಿಸಬೇಕು ಎಂದರು. ಮಣಿಪುರದಲ್ಲಿ ಇಡಿ ದೇಶವೇ ತಲೆ ತಗ್ಗಿಸುವ ಹಾಗೆ ಹೆಣ್ಣು ಮಕ್ಕಳನ್ನು ಬೆತ್ತಲೆಗೊಳಿಸಿ ಅಮಾನವೀಯವಾಗಿ ಮೆರವಣಿಗೆ ನಡೆಸಿ ಅತ್ಯಾಚಾರ ಮಾಡಲಾಗಿದೆ. ಇದನ್ನೆಲ್ಲ ಪ್ರಶ್ನಿಸಿದ ಆ ಹೆಣ್ಣುಮಕ್ಕಳ ತಂದೆ, ಸಹೋದರರನ್ನು ಅಮಾನುಷ ರೀತಿಯಲ್ಲಿ ಕೊಲೆ ಮಾಡಲಾಗಿದೆ. ಇದೆಲ್ಲವೂ ಅಲ್ಲಿನ ಪೊಲೀಸರ ಕಣ್ಣೆದುರಲ್ಲೇ ನಡೆದಿದೆ ಅಂತಾ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಯಕ್ಕಾಗಿ ಠಾಣೆಗೆ ಬಂದ ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ - ಪಿಎಸ್ಐ ಅಮಾನತುSSLC, PUC ಹಾಗೂ Diploma ವನ್ನು ಓದಿದವರಿಗೆ ನ್ಯಾಯಾಲಯದಲ್ಲಿ ಹುದ್ದೆಗಳು..! ಇಂದೇ ಅರ್ಜಿಯನ್ನು ಸಲ್ಲಿಸಿಚಳಿಗಾಲದಲ್ಲಿ ಈ ಆಹಾರಗಳ ಸೇವನೆಯನ್ನು ಮಾತ್ರ ಎಂದಿಗೂ ಮರೆಯಬಾರದು..!ಹೆತ್ತ ತಾಯಿಯನ್ನೇ ಹಿಗ್ಗಾಮುಗ್ಗಾ ಥಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿದ ಪಾಪಿ ಪುತ್ರಮನೆಯ ಉತ್ತರ ದಿಕ್ಕಿನಲ್ಲಿ ಈ ವಸ್ತುಗಳನ್ನು ಇಟ್ಟರೆ ಧನ ಸಂಪತ್ತು ವೃದ್ಧಿಯಾಗಿ ಶ್ರೀಮಂತರಾಗುವ ಯೋಗ ಬರುತ್ತದೆ!ಸರ್ಕಾರ ಜಾತಿ ಗಣತಿಯ ಅಂಕಿ-ಅಂಶ ಬಿಡುಗಡೆ ಮಾಡಬಾರದು: ಶಾಮನೂರು ಶಿವಶಂಕರಪ್ಪ.!ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ : ಜಗದೀಶ್ ಶೆಟ್ಟರ್.!ರಾಜ್ಯಾಧ್ಯಂತ ಮುಂದಿನ ಎರಡು ದಿನಗಳಲ್ಲಿ ಭಯಂಕರ ಚಳಿ: ಹವಾಮಾನ ಇಲಾಖೆ.!ಕ್ರಿಸ್​ಮಸ್ ಹಬ್ಬ ಹಿನ್ನೆಲೆ: ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ.!ಒನಕೆ ಓಬವ್ವ ವೃತ್ತದಲ್ಲಿ ಬಸವಣ್ಣನವರ ಪ್ರತಿಮೆ: ಪ್ರತಿಭಟನೆ.!