LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನವದೆಹಲಿ: ಸಾವಿನ ಸಂದರ್ಭ ನೀಡುವ ಹೇಳಿಕೆಯೇ ಅಪರಾಧ ನಿರ್ಣಯಕ್ಕೆ ಅಂತಿವಾಗದು: ಸುಪ್ರೀಂ

ನವದೆಹಲಿ: ಸಾಯುವ ಸಮಯದಲ್ಲಿ ನೀಡುವ ಹೇಳಿಕೆಗಳೇ ಅಪರಾಧ ನಿರ್ಣಯಕ್ಕೆ ಪ್ರಮುಖವಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಮಹತ್ವದ ಹೇಳಿಕೆ ನೀಡಿದೆ. ಇಂತಹ ನಿರ್ಣಯಗಳನ್ನು ಕೈಗೊಳ್ಳುವ ಸಂದರ್ಭದಲ್ಲಿ ನ್ಯಾಯಾಲಯಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಹೇಳಿಕೆಯ ನಿಖರತೆಗೆ ಸಂಬಂಧಿಸಿದಂತೆ ಸಂಶಯವಿದ್ದು ಕೊಲೆ ಪ್ರಕರಣದಲ್ಲಿ ಸಾಯುವ ಮುನ್ನ ಸಂತ್ರಸ್ತರು ನೀಡುವ ಹೇಳಿಕೆ ಆರೋಪಿಯ ಶಿಕ್ಷೆಗೆ ಏಕೈಕ ಆಧಾರವಾಗಿರಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

2014ರಲ್ಲಿ ಉತ್ತರಪ್ರದೇಶದಲ್ಲಿ ನಡೆದಿದ್ದ ಮೂವರ ಹತ್ಯೆ ಪ್ರಕರಣದಲ್ಲಿ ವ್ಯಕ್ತಿಯೋರ್ವನಿಗೆ ತಪ್ಪಿತಸ್ಥನೆಂದು ಪರಿಗಣಿಸಿ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ಇರ್ಫಾನ್ ತನ್ನ ಇಬ್ಬರು ಸಹೋದರರು ಮತ್ತು ಅವನ ಮಗನನ್ನು ಕೊಲೆ ಮಾಡಿದ ಆರೋಪದಲ್ಲಿ ಶಿಕ್ಷೆಗೊಳಗಾದ್ದನು. ಅವರು ಮಲಗಿದ್ದಾಗ ಬೆಂಕಿ ಹಚ್ಚಿ ಕೊಠಡಿಗೆ ಬೀಗ ಹಾಕಿದ್ದರು ಎನ್ನಲಾಗಿದೆ. ಇರ್ಫಾನ್ ಎರಡನೇ ಮದುವೆಯಾಗುವ ಇಚ್ಛೆಗೆ ಭಿನ್ನಾಭಿಪ್ರಾಯವೇ ಕಾರಣ ಎಂದು ಪ್ರಾಸಿಕ್ಯೂಷನ್ ವಾದಿಸಿತ್ತು.

ಇನ್ನು ನೆರೆಹೊರೆಯವರು ಮತ್ತು ಇತರ ಕುಟುಂಬ ಸದಸ್ಯರು ಮೂವರನ್ನೂ ರಕ್ಷಿಸಲು ಪ್ರಯತ್ನಿಸಿದ್ದರು. ಆದರೆ ಅಂತಿಮವಾಗಿ ಆಸ್ಪತ್ರೆಯಲ್ಲಿ ಅವರು ಸಾವನ್ನಪ್ಪಿದರು. ಈ ಮಧ್ಯೆ ಪೊಲೀಸರು ಮೂರು ಬಲಿಪಶುಗಳಲ್ಲಿ ಇಬ್ಬರ ಮರಣದಂಡನೆ ಹೇಳಿಕೆಗಳನ್ನು ದಾಖಲಿಸುವಲ್ಲಿ ಯಶಸ್ವಿಯಾಗಿದ್ದರು. ಇದು ಪ್ರಕರಣಕ್ಕೆ ಮುಖ್ಯ ಆಧಾರವಾಯಿತು. ಇಬ್ಬರು ಸಾಯುವ ಮುನ್ನ ನೀಡಿದ್ದ ಹೇಳಿಕೆ ಆಧಾರದ ಮೇಲೆ, ಸೆಷನ್ಸ್ ನ್ಯಾಯಾಲಯವು ಶಿಕ್ಷೆಗೆ ವಿಧಿಸಿತ್ತು. ನಂತರ ಅಲಹಾಬಾದ್ ಹೈಕೋರ್ಟ್ 2018ರಲ್ಲಿ ಈ ತೀರ್ಪನ್ನು ಎತ್ತಿಹಿಡಿದಿತ್ತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಂಗಳೂರು: ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಕೆನಡಾ: ದೇವಸ್ಥಾನದ ಅಧ್ಯಕ್ಷ್ಯರ ಪುತ್ರನ ಮನೆಯ ಮೇಲೆ ಗುಂಡಿನ ದಾಳಿ - ಖಲಿಸ್ತಾನಿಗಳ ಕೈವಾಡ ಶಂಕೆಕನ್ನಡ ಹೋರಾಟಗಾರರ ಬಂಧನದಿಂದ ದುಃಖ ತಂದಿದೆ : ಬಸವರಾಜ ಬೊಮ್ಮಾಯಿಅತಿಥಿ ಉಪನ್ಯಾಸಕರ ವೇತನ ಹೆಚ್ಚಳ: ರಾಜ್ಯ ಸರ್ಕಾರ ಘೋಷಣೆ'ಲೋಕಾಯುಕ್ತ ವಿಚಾರಣೆಗೆ ಅನುಮತಿ: ವಿಳಂಬ ಸಲ್ಲದು'- ಸಿಎಂ ಕಟ್ಟುನಿಟ್ಟಿನ ಸೂಚನೆಬೆಂಗಳೂರು ಏರ್ ಪೋರ್ಟ್ ಟರ್ಮಿನಲ್ - 2ರಲ್ಲಿ ಹೈಟೆಕ್ ಬಸ್ ನಿಲ್ದಾಣಕ್ಕೆ ಚಾಲನೆಐಫೋನ್ ಹ್ಯಾಕ್ ಆರೋಪವನ್ನು ನಿರಾಕರಿಸಿದ ಸಚಿವ ರಾಜೀವ್ ಚಂದ್ರಶೇಖರ್ಜೆಡಿಯು ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತೀಶ್ ಕುಮಾರ್ ನೇಮಕಪರೀಕ್ಷಾರ್ಥವಾಗಿ ಸಂಚರಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿಯರು ಮೃತ್ಯುಎಸ್‌ಯುವಿ ರೂಫ್ ನಲ್ಲಿ ಮಕ್ಕಳನ್ನು ಮಲಗಿಸಿ ಕಾರು ಚಾಲನೆ: ಪ್ರಕರಣ ದಾಖಲು