LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಾನು ನಂದಿನಿ ಖ್ಯಾತಿಯ ವಿಕ್ಕಿಪೀಡಿಯಾ ವಿಕಾಸ್‌ ಪೊಲೀಸರ ವಶಕ್ಕೆ..! ಕಾರಣವೇನು?

ಬೆಂಗಳೂರು: ಸೋಶಿಯಲ್‌ ಮೀಡಿಯಾದಲ್ಲಿ ತಮ್ಮದೇ ಆದ ಡಿಫರೆಂಟ್‌ ಶೈಲಿಯ ವಿಡಿಯೋ ಮಾಡುತ್ತಿದ್ದ ನಾನು ನಂದಿನಿ ಖ್ಯಾತಿಯ ವಿಕ್ಕಿಪೀಡಿಯಾ ವಿಕಾಸ್‌ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ವಿಡಿಯೋವೊಂದರಲ್ಲಿ ಮಾದಕ ವಸ್ತು ವ್ಯಸನದ ಬಗ್ಗೆ ಮಾತನಾಡಿದ ಆರೋಪದ ಮೇಲೆ ವಿಕಾಸ್‌ ಅವರನ್ನು ಬೈಯಪ್ಪನಹಳ್ಳಿ ಪೊಲೀಸರು, ಠಾಣೆಗೆ ಕರೆದು ವಿಚಾರಣೆ ನಡೆಸಿ ಬಳಿಕ ಎಚ್ಚರಿಕೆಯನ್ನು ನೀಡಿ ವಾಪಸ್‌ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೇ ವಿಡಿಯೋ ಮಾಡುವಾಗ ಅನುಸರಿಸಬೇಕಾದ ಕೆಲವು ಸೂಚನೆಗಳನ್ನು ಪೊಲೀಸರು ವಿಕಾಸ್‌ಗೆ ನೀಡಿದ್ದಾರೆ ಎನ್ನಲಾಗಿದೆ.

 

ಸಾಮಾಜಿಕ ಜಾಲತಾಣದಲ್ಲಿ ತಮ್ಮದೇ ಆದ ಖ್ಯಾತಿ ಪಡೆದಿರುವ ವಿಕಾಸ್‌, ವಿಕ್ಕಿಪೀಡಿಯಾ ಅಂತಾಲೇ ಫುಲ್ ಫೇಮಸ್‌ ಆಗಿದ್ದಾರೆ. ಕಾಮಿಡಿ ವಿಡಿಯೋಗಳು, ಹಾಡುಗಳು ಹಾಗೂ ಸಾಮಾಜಿಕ ಕಳಕಳಿ ಇರುವಂತಹ ವಿಡಿಯೋಗಳನ್ನು ಮಾಡುವ ಇವರು ನಾನು ನಂದಿನಿ ಬೆಂಗಳೂರಿಗೆ ಬಂದಿನಿ ಎನ್ನುವ ಹಾಡಿನ ಮೂಲಕ ಸಖತ್‌ ವೈರಲ್‌ ಆಗಿದ್ದರು. ಜೊತೆಗೆ ಕರಿಮಣಿ ಮಾಲೀಕ ರಾಹುಲ್ಲಾ ಎನ್ನುವ ಇವರ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ನಿರೀಕ್ಷೆಗೂ ಮೀರಿ ಹಿಟ್‌ ಆಗಿತ್ತು.

 

ಸಿನಿಮಾ ಹಾಗೂ ಕೆಲವು ಪ್ರಾಡೆಕ್ಟ್‌ಗಳ ಪ್ರಮೋಷನ್‌ ಅನ್ನು ಬಹಳ ಡಿಫರೆಂಟ್‌ ಆಗಿ ಮಾಡುವ ವಿಕ್ಕಿಪೀಡಿಯಾ ಹಾಗೂ ಅವರ ತಂಡ ಸಾಮಾಜಿಕ ಜಾಲತಾಣ ಬಳಸುವವರ ಫೇವರೇಟ್‌ ಕಟೆಂಟ್‌ ಟೀಂ ಆಗಿದ್ದರು. ಇವರ ಕಾಮಿಡಿ ಕಟೆಂಟ್‌ಗಳನ್ನು ನೋಡದವರಿಲ್ಲ, ನೋಡಿ ನಗದವರಿಲ್ಲ ಎನ್ನುವಷ್ಟರ ಮಟ್ಟಿಗೆ ಇವರ ವಿಡಿಯೋಗಳು ವೈರಲ್‌ ಆಗಿ ಟ್ರೆಂಡಿಂಗ್ ಆಗುತ್ತದೆ.

 

ಇದೀಗ ಅದೇ ರೀತಿ ಜನರನ್ನು ನಗಿಸಲು ಹೋಗಿ ವಿಕ್ಕಿಪೀಡಿಯಾ ವಿಕಾಸ್‌ ಪೊಲೀಸ್‌ ಠಾಣೆ ಮೆಟ್ಟಿಲೇರುವಂತೆ ಆಗಿದೆ. ಅಮಿತ್ ಜೊತೆಗೆ ವಿಕಾಸ್‌ ಮಾಡಿದ್ದ ಹೊಸ ವಿಡಿಯೋವನ್ನು ಎರಡು ಮೂರು ದಿನಗಳ ಹಿಂದೆ ಅಪ್ಲೋಡ್‌ ಮಾಡಲಾಗಿತ್ತು. ಈ ವಿಡಿಯೋದಲ್ಲಿ ಖುಷಿಗಾಗಿ ಡ್ರಗ್ಸ್‌ ಎನ್ನುವ ವಾಕ್ಯವೊಂದನ್ನು ಬಳಸಲಾಗಿತ್ತು. ಸದ್ಯ ಆ ವಿಡಿಯೋವನ್ನು ಡಿಲೀಟ್‌ ಮಾಡಲಾಗಿದ್ದು, ಪೊಲೀಸರು ವಿಕಾಸ್‌ಗೆ ಎಚ್ಚರಿಕೆ ಕೊಟ್ಟು ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಮಧ್ಯಮವರ್ಗದವರಿಗೆ ಸ್ನೇಹಪೂರಿತ ಬಜೆಟ್' - ಪ್ರಧಾನಿ ಮೋದಿಕಾರ್ಮಿಕರಿಗೆ ಗುಡ್‌ ನ್ಯೂಸ್‌: ಮದುವೆಗೆ ಸಿಗಲಿದೆ 60,000 ರೂ.ಸಹಾಯಧನರೇಷನ್‌ ಕಾರ್ಡ್‌ ಹೊಂದಿರುವವರಿಗೆ ಸರ್ಕಾರದಿಂದ ಭಾರೀ ಸೌಲಭ್ಯಗಳುಪತಂಜಲಿ ಬಾಬಾ ರಾಮ್‌ದೇವ್‌ ವಿರುದ್ದ ಜಾಮೀನು ರಹಿತ ಬಂಧನ ವಾರಂಟ್‌!!ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ವೃದ್ಧಿಮಾನ್ ಸಾಹಾಮಹಿಳೆಯ ಮೇಲೆ ಕರಡಿ ದಾಳಿ!!'ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ'- ಬಿಆರ್ ಪಾಟೀಲ್ಆಳವಾದ ಕಂದಕಕ್ಕೆ ಉರುಳಿಬಿದ್ದ ಬಸ್, 5 ಮಂದಿ ಯಾತ್ರಿಕರು ಸಾವು, 35 ಮಂದಿಗೆ ಗಾಯಎಚ್ಚರ ಯುವಕರೇ: ಕನ್ಯಾ ತೋರಿಸುವ ನೆಪದಲ್ಲಿ ಯುವಕನನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿ ಸುಲಿಗೆ..!!ಉಡುಪಿ: ನಕ್ಸಲ್ ತೊಂಬಟ್ಟು ಲಕ್ಷ್ಮಿ ಉಡುಪಿ ಎಸ್ಪಿ ಕಚೇರಿಯಲ್ಲಿ ಶರಣಾಗತಿ