LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು, ನಿಮಗೂ ಭಯವಿದೆ ಎಂದು ಸಿಎಂ ಕಾಲೆಳೆದ HDK

ಬೆಂಗಳೂರು: ರಾಜ್ಯದಲ್ಲಿ ಸಿಬಿಐಗೆ ಇದ್ದ ಮುಕ್ತ ಅಧಿಕಾರವನ್ನ ಹಿಂಪಡೆಯಲಾಗಿದೆ, ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಸಂಪುಟ ನಿರ್ಣಯವನ್ನವನ್ನ ಟೀಕಿಸಿರುವ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರು ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು ನಿಮಗೂ ಭಯವಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕುಟ್ಟುಕಿದ್ದಾರೆ. ತಮ್ಮ X ಖಾತೆಯ ಮೂಲಕ ರಾಜ್ಯ ಸಂಪುಟ ಸಭೆಯ ನಿರ್ಣಯವನ್ನ ವ್ಯಂಗ್ಯವಾಗಿ ಟೀಕಿಸಿದ್ದಾರೆ ಶ್ರೀಮಾನ್ ಸಿದ್ದರಾಮಯ್ಯನವರೇ ನಿಮ್ಮ 'ಸಿದ್ವಿಲಾಸ'ಕ್ಕೆ ಉಘೇಉಘೇ ಎನ್ನಲೇಬೇಕು.ಅಂದು ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ! ಇಂದು ಮೂಡಾಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇ ಗತಿ ಎಂದು ಲೇವಡಿ ಮಾಡಿದ್ದಾರೆ. ಕರ್ಮ ಹಿಟ್ ಬ್ಯಾಕ್ ಎಂದರೇ ಇದೇ ಅಲ್ಲವೇ ಸಿದ್ದರಾಮಯ್ಯನವರೇ ಎಂದು ಪ್ರಶ್ನೆ ಮಾಡಿರುವ ಕುಮಾರಸ್ವಾಮಿ,ನಿಮ್ಮ ಗ್ರಹಚಾರಕ್ಕೆ ಎಸಿಬಿಯನ್ನೂ ಹೈಕೋರ್ಟ್ ಬರ್ಖಾಸ್ತು ಮಾಡಿಬಿಟ್ಟಿತು. ಈಗ ಲೋಕಾಯುಕ್ತವನ್ನೇ ಗುರಾಣಿ ಮಾಡಿಕೊಂಡು ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್ ಮಾಡಿಸಿದ್ದೀರಿ.ಅಲ್ಲಿಗೆ ಆರೋಪಿ ಅಪರಾಧಿಯಾದ ಎಂದೇ ಲೆಕ್ಕ. 'ಸಿದ್ದಾಪರಾದ' ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ ಎಂದು ಹೇಳಿದ್ದಾರೆ. ಮುಡಾ ಹಗರಣವನ್ನ ಸಿಬಿಐ ತನಿಖೆ ಮಾಡಿಸಬೇಕು ಎಂಬ ವಿಪಕ್ಷಗಳ ಆಗ್ರಹಕ್ಕೆ ರಾಜ್ಯದಲ್ಲಿ ಮುಕ್ತ ಸಿಬಿಐ ಮೂಲಕ ತನಿಖೆಗೆ ಬ್ರೇಕ್ ಹಾಕಿದ್ದೀರಾ ಅಲ್ವಾ ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು.ನಿಮಗೂ ಭಯವಿದೆ ಅದೇ ಈ ನೆಲದ ಕಾನೂನಿನ ಶಕ್ತಿ ಏನಂತೀರಿ ಎಂದು ಸಿಎಂಗೆ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈಲಿನಿಂದ ಇಳಿಯುವಾಗ ಆಯತಪ್ಪಿ ಬಿದ್ದ ಮಹಿಳೆಯನ್ನು ರಕ್ಷಿಸಿದ ಭದ್ರತಾ ಸಿಬ್ಬಂದಿ - ವೀಡಿಯೋ ವೈರಲ್‌ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಆಸ್ಪತ್ರೆಗೆ ದಾಖಲುಪತ್ರಕರ್ತನನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳುಮಾ. 11 ರಿಂದ ರಾಜ್ಯದಲ್ಲಿ ಗುಡುಗು ಸಹಿತ ಮಳೆ ಆರಂಭಹುಡುಗಿಯರನ್ನು ಇಸ್ಲಾಂಗೆ ಮತಾಂತರಿಸುವವರಿಗೆ ಮರಣದಂಡನೆ ವಿಧಿಸಲು ಕಾನೂನಿನಲ್ಲಿ ತಿದ್ದುಪಡಿ..!ಮಂಗಳೂರು: ನಾಪತ್ತೆಯಾಗಿದ್ದ ದಿಗಂತ್ 10 ದಿನಗಳ ಬಳಿಕ ಪತ್ತೆ..! ಪೋಲೀಸ್ ತನಿಖೆಯಲ್ಲಿ ದಿಗಂತ್ ಹೇಳಿದ್ದೆನು?? ನಾಪತ್ತೆ ಪ್ರಕರಣದ ಹಿಂದಿನ ರೋಚಕ ಕಥೆಗುಂಡು ಹಾರಿಸಿಕೊಂಡು ಮಹಿಳಾ ಹೆಡ್ ಕಾನ್ಸ್‌ಟೇಬಲ್ ಆತ್ಮಹತ್ಯೆ..!ಕರಾವಳಿಗೆ ವಾಟರ್ ಮೆಟ್ರೋ..! ಮಂಗಳೂರಿಗೆ ಅಂತರಾಷ್ಟ್ರೀಯ ಕ್ರೂಸ್ ಯೋಜನೆ ಘೋಷಣೆಸೋಲನ್ನು ಮೆಟ್ಟಿ ನಿಂತು ಐಪಿಎಸ್ ಅಧಿಕಾರಿಯಾದ ಆಶ್ನಾ ಚೌಧರಿನೀವು ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ʼನಲ್ಲಿಟ್ಟು ತಿನ್ನುತ್ತೀರಾ..? ಹಾಗಾದ್ರೆ ಎಚ್ಚರ