LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ನಾವು ಬಿತ್ತಿರುವ ಬೀಜದ ಮರದ ಹಣ್ಣನ್ನು ಬಿಜೆಪಿಯವರು ತಿನ್ನುತ್ತಿದ್ದಾರೆ'-ಬಿಕೆ ಹರಿಪ್ರಸಾದ್​

ಕಲಬುರಗಿ: ಬೆಂಗಳೂರಿನಲ್ಲಿ ಇಸ್ರೋ ಸಂಸ್ಥೆಗೆ ಜಾಗ ನೀಡಿದ್ದು ಕಾಂಗ್ರೆಸ್ ಸರ್ಕಾರ. ನಾವು ಬಿತ್ತಿರುವ ಬೀಜದ ಮರದ ಹಣ್ಣನ್ನು ಬಿಜೆಪಿಯವರು ತಿನ್ನುತ್ತಿದ್ದಾರೆ ಎಂದು ವಿಧಾನ್ ಪರಿಷತ್​ ಸದಸ್ಯ ಬಿ.ಕೆ.ಹರಿಪ್ರಸಾದ್​ ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಅವರ, ಇಂದು ಇಸ್ರೋದ ಮಹತ್ವಾಕಾಂಕ್ಷಿ ಆದಿತ್ಯ L-1​​​​ ನೌಕೆ ಉಡಾವಣೆಯಾಗಿದೆ. ಕಾಂಗ್ರೆಸ್ ವೈಜ್ಞಾನಿಕ ನೆಲಗಟ್ಟಿನಲ್ಲಿ ಅಚಲ ನಂಬಿಕೆ ಇಟ್ಟುಕೊಂಡಿದೆ. ನಾವು ಬಿಜೆಪಿಯವರ ರೀತಿ ಮೂಢನಂಬಿಕೆ ಇಟ್ಟುಕೊಂಡಿಲ್ಲ. ಇಸ್ರೋ ಸಂಸ್ಥೆಗೆ ಜಾಗ ನೀಡಿದ್ದು ಕಾಂಗ್ರೆಸ್ ಸರ್ಕಾರ. ನಾವು ಬಿತ್ತಿರುವ ಬೀಜದ ಮರದ ಹಣ್ಣನ್ನು ಬಿಜೆಪಿಯವರು ತಿನ್ನುತ್ತಿದ್ದಾರೆ ಎಂದರು .

ಇದೇ ವೇಳೆ ಒನ್ ನೇಷನ್ ಒನ್ ಎಲೆಕ್ಷನ್ ವಿಚಾರವಾಗಿ ಮಾತನಾಡಿದ ಅವರು ಬಿಜೆಪಿ ಬಂದ ಮೇಲೆ ಘೋಷಣೆಗಳಿಗೆ ಏನು ಕಡಿಮೆ ಇಲ್ಲ. ರಾಷ್ಟ್ರದಲ್ಲಿನ ವೈವಿದ್ಯತೆಯನ್ನು ಹಾಳು ಮಾಡುತ್ತಿದ್ದಾರೆ. ವಿವೇಕಾನಂದರ ಆಶಯದ ವಿರುದ್ಧ ಬಿಜೆಪಿ ನಿರ್ಧಾರ ಕೈಗೊಳ್ಳುತ್ತದೆ. ಮುಂದೆ ಒನ್ ನೇಷನ್ ಒನ್ ಲೀಡರ್ ಅಂದರೂ ಅನ್ನಬಹುದು. ದೇಶದಲ್ಲಿ ಚುನಾವಣೆಯನ್ನು ಇಡಿ ಬಳಸದೆ ನಡೆಸಬೇಕಿದೆ ಎಂದರು.

ಇನ್ನು ತಮಗೆ ಅವರಿಗೆ ಮಂತ್ರಿಸ್ಥಾನ ಸಿಗದೆ ಇರುವ ವಿಚಾರವಾಗಿ ಮಾತನಾಡಿದ ಅವರು ನಾನು ಪಕ್ಕಾ ಕಾಂಗ್ರೆಸ್​ನವನು. ನನ್ನ ಹೋರಾಟ ನನ್ನ ಮಂತ್ರಿ ಮಾಡಿಲ್ಲ ಅಂತ ಅಲ್ಲ. ಸಣ್ಣ ಸಮುದಾಯಗಳಿಗೆ ಅವಕಾಶ‌ ಸಿಗಬೇಕು ಅನ್ನೋದು ನಮ್ಮ ಹೋರಾಟ. ಅದಕ್ಕಾಗಿ ನಾನು ಬೀದಿಗಳಿದು ಹೋರಾಟಕ್ಕೂ ಕೂಡಾ ಸಿದ್ದನಿದ್ದೇನೆ. ಇಂದಿರಾಗಾಂಧಿ ಅವರನ್ನು ನೋಡಿ ಇಂದಿನವರು ಕಲಿಬೇಕು. ಜವಾನನಿಂದ ದಿವಾನವರಗೆ ಒಂದೇ ಜಾತಿಯವರನ್ನು ಹಾಕಿಕೊಳ್ಳಲು ಆಗಲ್ಲ. ಎಲ್ಲ ವರ್ಗದವರಿಗೂ ಅವಕಾಶ ನೀಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿ.ಎಲ್ ಸಂತೋಷ. ಆಪರೇಷನ್ ಕಮಲದಲ್ಲಿ ಡಾಕ್ಟರೇಟ್ ತಗೆದುಕೊಂಡಿದ್ದಾರೆ ಎಂದುಲೇವಡಿ ಮಾಡಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ರಾಮ ಮಂದಿರ ವಿಚಾರವನ್ನು ಯಾರೂ ರಾಜಕೀಯಕ್ಕೆ ಬಳಸಿಕೊಳ್ಳುವುದಿಲ್ಲ'- ಪ್ರಹ್ಲಾದ್ ಜೋಶಿಅಯೋಧ್ಯೆ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಚಾಲನೆದಕ್ಷಿಣ ಕನ್ನಡದ ನ್ಯಾಶನಲ್ ಹೈವೇ ಅಭಿವೃದ್ದಿ , 957.39 ಕೋ.ರೂ.ವೆಚ್ಚದ 2 ಯೋಜನೆಗಳಿಗೆ ಅನುಮೋದನೆ..!ಬೆಂಗಳೂರು-ಅಯೋಧ್ಯೆಗೆ ಏರ್ ಇಂಡಿಯಾ ವಿಮಾನ ಸೇವೆ ಜ. 17ರಿಂದ ಆರಂಭಕೋವಿಡ್ ನ ಜೆಎನ್1 ರೂಪಾಂತರಿ ಸೋಂಕು :ರಾಜ್ಯದಲ್ಲಿ ಜ.2 ರಿಂದ ಲಸಿಕಾ ಅಭಿಯಾನವಿಜಯನಗರ ಜಿಲ್ಲೆಯ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿ..!ಇಂದೇ ಅರ್ಜಿಯನ್ನು ಸಲ್ಲಿಸಿಚಹಾದಂಗಡಿಗೆ ನುಗ್ಗಿದ ಟ್ರಕ್: 5 ಮಂದಿ ದುರ್ಮರಣ, ಹಲವರಿಗೆ ಗಾಯಮನೆಯಲ್ಲೇ ತಯಾರಿಸಿ ಇನ್ ಸ್ಟಂಟ್ ‘ಜಿಲೇಬಿ’ರಾಯರ ಮಠದಲ್ಲಿ ನಡೀತು ಪವಾಡ, ವೀಲ್ ಚೇರಲ್ಲಿ ಬಂದವಳು, ನಡೆದು ಹೋದಳು.!ಉಕ್ರೇನ್ ಮೇಲೆ 158 ಡ್ರೋನ್‌ ದಾಳಿ ನಡೆಸಿದ ರಷ್ಯಾ ಸೇನೆ