ನಿನ್ನೆ ಶುಕ್ರವಾರ ಸುರಿದ ಮಳೆಗೆ ನಾಲ್ವರ ಸಾವು.! ಎಲ್ಲೆಲ್ಲಿ ಮಳೆ ಆಗಿದೆ.
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳ ಶುಕ್ರವಾರ ಮಳೆಯಾಗಿದೆ. ವಿವಿಧಡೆ ಮಳೆ ಸಂಬಂಧಿತ ಅವಘಡಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಇನ್ನೂ ಮೂರು ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ ಸಿಡಿಲು ಬಡಿದು ಯುವಕ ಮೃತಪಟ್ಟಿದ್ದಾರೆ. ಶಿವಮೊಗ್ಗ ತಾಲೂಕಿನ ಹರಮಘಟ್ಟ ಗ್ರಾಮದಲ್ಲಿ ಗುರುವಾರ ಗುಡುಗು ಬಿರುಗಾಳಿ ಸಹಿತ ಮಳೆಯಾಗಿದ್ದು ಸಿಡಿಲು ಬಡಿದು ರಾಕೇಶ್(28) ಮೃತಪಟ್ಟಿದ್ದಾರೆ.
ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಹರಾಳು ಗ್ರಾಮದಲ್ಲಿ ಬಿರುಗಾಳಿ ಸಹಿತ ಮಳೆಗೆ ಮನೆಯ ಛಾವಣಿಯ ಕಬ್ಬಿಣದ ರಾಡ್, ತಗಡು ಮತ್ತು ಕಲ್ಲು ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ದಡ್ಡಿ ನಾಗಮ್ಮ(48) ಮೃತಪಟ್ಟಿದ್ದಾರೆ.
ಬೀದರ್ ಜಿಲ್ಲೆಯಲ್ಲಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಶುಕ್ರವಾರ ಮಳೆಯಾಗಿದ್ದು, ಶನಿವಾರ ಬೆಳಗ್ಗೆಯೂ ಭದ್ರಾವತಿ, ಶಿವಮೊಗ್ಗ ಸೇರಿ ಹಲವು ಕಡೆ ಮಳೆಯಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.