LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನ್ಯಾಯಕ್ಕಾಗಿ ಠಾಣೆಗೆ ಬಂದ ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ - ಪಿಎಸ್ಐ ಅಮಾನತು

ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣದಲ್ಲಿ ಕರ್ತವ್ಯ ಲೋಪದಡಿ ಸಿಪಿಐ ಅಮಾನತು ಮಾಡಲಾಗಿದ್ದ ಪ್ರಕರಣ ಕಣ್ಣುಂದೆ ಇರುವಾಗಲೆ, ಮಹಿಳೆಯೊಂದಿಗೆ ದುರ್ನಡತೆ ಆರೋಪದಡಿ ಪಿಎಸ್ಐ ಅಮಾನತ್ತಾದ ಘಟನೆ ಬೆಳಗಾವಿ ಜಿಲ್ಲೆಯ ಸಂಕೇಶ್ವರದಲ್ಲಿ ನಡೆದಿದೆ.

ಮಹಿಳೆಯೋರ್ವಳಿಗೆ ಕಿರುಕುಳ ಆರೋಪದಡಿ ಮಹಿಳೆಯ ದೂರಿನ ಮೆರೆಗೆ ಸಂಕೇಶ್ವರ ಪೊಲೀಸ್ ಠಾಣೆಯ ಪಿಎಸ್‌ಐ ನರಸಿಂಹರಾಜು ಜೆ. ಡಿ. ಅವರನ್ನು ಅಮಾನತು ಮಾಡಿ ಬೆಳಗಾವಿ ಜಿಲ್ಲಾ ಎಸ್‌ಪಿ ಭೀಮಾಶಂಕರ ಗುಳೇದ್ ಆದೇಶ ಹೊರಡಿಸಿದ್ದಾರೆ. ಕರ್ತವ್ಯ ಲೋಪ, ಅಶಿಸ್ತು ಹಾಗೂ ದುರ್ನಡೆಯನ್ನು ಆಧರಿಸಿ ಅವರನ್ನು ಅಮಾನತು ಮಾಡಲಾಗಿದೆ. ಸಂಕೇಶ್ವರ ಪೊಲೀಸ ಠಾಣೆಗೆ ತಮ್ಮ ಕೌಟುಂಬಿಕ ಸಮಸ್ಯೆ ಕುರಿತು ತಮ್ಮ ಪತಿಯ ವಿರುದ್ಧ ದೂರು ನೀಡಿದ್ದ ಮಹಿಳೆಗೆ ನ್ಯಾಯ ಕೊಡಿಸಬೇಕಿದ್ದ ಪೊಲೀಸ್ ಅಧಿಕಾರಿ ಪಿಎಸ್‌ಐ ನರಸಿಂಹರಾಜು ಜೆ.ಡಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ.

 

ಅವಳ ದೂರವಾಣಿ ಸಂಖ್ಯೆ ಪಡೆದು ಅವಳ ಸಂಪರ್ಕ ಬೆಳೆಸಿ ಅವಳನ್ನ ಕರೆದುಕೊಂಡು ತಿರುಗಾಡಿದ್ದಾರೆ ಎಂದು ಆರೋಪಿಸಲಾಗಿದೆ. ಪತಿ ಪತ್ನಿ ಕೌಟುಂಬಿಕ ಜಗಳದಲ್ಲಿ ನ್ಯಾಯ ಕೊಡಿಸಬೇಕಿದ್ದ ಪಿಎಸ್‌ಐ ಮಹಿಳೆಯ ಗಂಡನನ್ನೇ ಬೆದರಿಸಿದ್ದಾರೆ ಎಂದು ನೊಂದ ಮಹಿಳೆ ನ್ಯಾಯಕ್ಕಾಗಿ, ಪಿಎಸ್‌ಐ ಅವರ ವರ್ತನೆಗೆ ಬೆಸತ್ತ ಮಹಿಳೆ ನ್ಯಾಯ ಕೊಡಿಸುವಂತೆ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾಳೆ. ಮಹಿಳೆಯ ದೂರಿನನ್ವಯ ವಿಚಾರಣೆ ನಡೆಸಿದ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿಗಳು ಪಿಎಸ್‌ಐ ನರಸಿಂಹರಾಜು ಅವರನ್ನ ಕರ್ತವ್ಯ ಲೋಪ, ಮಹಿಳೆಯೊಂದಿಗೆ ದುರ್ನಡತೆ ಹಾಗೂ ಅಶಿಸ್ತು ಎಂದು ನರಸಿಂಹರಾಜು ಅವರನ್ನ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಶೀಘ್ರದಲ್ಲೇ ಮತ್ತೊಂದು ಸಿಡಿ ಫ್ಯಾಕ್ಟರಿ ಓಪನ್ ಆಗಲಿದೆ'- ಯತ್ನಾಳ್ಮನೆ ಕೆಲಸದಾತನ ಮನೆಯಲ್ಲಿ 30 ಕೋಟಿ ರು. ನಗದು ಪತ್ತೆಮೇ 9ಕ್ಕೆ SSLC ಫಲಿತಾಂಶ ಪ್ರಕಟಮತದಾನ ಮಾಡಿದ ಮಾಜಿ ಸಿಎಂ ಬಿಎಸ್ ವೈ, ಸಂಸದ ಬಿವೈ ರಾಘವೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಅಹಮದಾಬಾದ್ ನಲ್ಲಿ ಮತದಾನ ಮಾಡಿದ ಪ್ರಧಾನಿ ನರೇಂದ್ರ ಮೋದಿಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಮೊದಲ ಬಾರಿ ಮಾತನಾಡಿದ ಮೋದಿ : ಈ ಬಗ್ಗೆ ಏನಂದ್ರು..!?ರಾಜ್ಯದ 14 ಕ್ಷೇತ್ರಗಳು ಸೇರಿ 94 ಕ್ಷೇತ್ರಗಳಲ್ಲಿ ಮತದಾನ ಆರಂಭರುಚಿಕರವಾದ ಪುದೀನಾ ಸೂಪ್ ಮಾಡುವ ವಿಧಾನನೀವು ಪ್ರೀತಿ ಪ್ರೇಮಿಸಿದ ವ್ಯಕ್ತಿಗಳು ನಿಮ್ಮಂತೆ ಆಗಲು ಎರಡು ಲವಂಗಗಳಿಂದ ಈ ಶಕ್ತಿಶಾಲಿ ತಂತ್ರ ಮಾಡಿ ಸಾಕು!ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆ ತಿಂದರೆ ಆರೋಗ್ಯಕ್ಕೆ ಸಿಗುವ ಲಾಭಗಳು