LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನ. 26ರಂದು ಕೆಸೆಟ್ ಪರೀಕ್ಷೆ ನಿಗದಿ

ಬೆಂಗಳೂರು: ನವೆಂಬರ್ 26ರಂದು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2023 ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚನೆ ಪ್ರಕಟನೆ ಹೊರಡಿಸಲಾಗಿದೆ.ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗೆ ಆಹ್ವಾನಿಸಲಾಗಿದೆ.

ಮೊದಲ ಪತ್ರಿಕೆ-I:ಸಾಮಾನ್ಯ ಪತ್ರಿಕೆಯು ಬೋಧನೆ ಮತ್ತು ಬುದ್ಧಿ ಸಾಮರ್ಥ್ಯ.ಈ ಪತ್ರಿಕೆಯು ಅಭ್ಯರ್ಥಿಗಳ ಸಾಮಾನ್ಯ ಪತ್ರಿಕೆಯಾಗಿದ್ದು, ಸಾಮಾನ್ಯ ಜ್ಞಾನ ಬೋಧನೆ ಹಾಗೂ ಸಂಶೋಧನೆಯ ಅಭಿರುಚಿಗೆ ಸಂಬಂಧಿಸಿರುತ್ತದೆ. ಅಭ್ಯರ್ಥಿಗಳ ಸಾಮಾನ್ಯ ತಿಳಿವಳಿಕೆಗಳನ್ನು ಗ್ರಹಿಸುವ ಹಾಗೂ ಯೋಚನಾ ಸಾಮರ್ಥ್ಯವನ್ನು ಆಳೆಯುವಂತಹದ್ದಾಗಿರುತ್ತದೆ.

ಈ ಪತ್ರಿಕೆಯು 50 ಬಹುಸಂಖ್ಯಾ ಆಯ್ಕೆಯ ಪ್ರಶ್ನೆಗಳನ್ನು ಒಳಗೊಂಡಿದ್ದು, ಪ್ರತಿ ಪ್ರಶ್ನೆಗೆ ಎರಡು ಅಂಕಗಳಿರುತ್ತದೆ. ಹಾಗೂ ಎಲ್ಲಾ ಪ್ರಶ್ನೆಗಳಿಗೂ ಕಡ್ಡಾಯವಾಗಿ ಉತ್ತರಿಸಬೇಕು.

ಎರಡನೇ ಪತ್ರಿಕೆ-II:ವಿಷಯ ಪತ್ರಿಕೆ. ಅಭ್ಯರ್ಥಿಯು ಆಯ್ಕೆ ಮಾಡಿದ ವಿಷಯದ ಸಾಮಾನ್ಯ ಜ್ಞಾನದಲ್ಲಿ ಈ ಪತ್ರಿಕೆ ಇರುತ್ತದೆ. ಈ ಪತ್ರಿಕೆಯು 100 ಕಡ್ಡಾಯ ಬಹುಸಂಖ್ಯಾ ಆಯ್ಕೆ ಪಶ್ನೆಗಳನ್ನು ಒಳಗೊಂಡಿದ್ದು, ಪ್ರತಿ ಪಶ್ನೆಗೂ 2 ಅಂಕಗಳಿರುತ್ತವೆ, ಗರಿಷ್ಠ 200 ಅಂಕಗಳಿರುತ್ತವೆ.

ಅರ್ಹ ಅಭ್ಯರ್ಥಿಗಳು https://kea.kar.nic.in ಜಾಲತಾಣಕ್ಕೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.ಅಲ್ಲದೇ ಕೇವಲ ಗಣಕೀಕೃತ ಅಂಚೆ ಕಚೇರಿಯ ಶಾಖೆಗಳಲ್ಲಿ ಮಾತ್ರ ಅರ್ಜಿ ಶುಲ್ಕ ಪಾವತಿಸುವಂತೆ ತಿಳಿಸಿದೆ.

ಕೆಸೆಟ್-2023ರ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ದಿನಾಂಕ 11-09-2023ರ ಇಂದಿನಿಂದ ಆರಂಭಗೊಳ್ಳಲಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್​​ 30 ಕೊನೆಯ ದಿನವಾಗಿದೆ. ಇ-ಪೋಸ್ಟ್ ಆಫೀಸ್​ನಲ್ಲಿ ಶುಲ್ಕ ಪಾವತಿಸಲು 03- 10-2023 ಕೊನೆಯ ದಿನವಾಗಿದೆ.

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಸಾಮಾನ್ಯ ವರ್ಗ, ಪ್ರವರ್ಗ-2ಎ, 2ಬಿ, 3ಎ, 3ಬಿ ಅವರಿಗೆ 1000 ಸಾವಿರ ರೂ.
ಪ್ರವರ್ಗ-1, ಎಸ್ಸಿ, ಎಸ್ಟಿ, ಪಿಡಬ್ಲೂಡಿ, ಲಿಂಗ ಅಲ್ಪಸಂಖ್ಯಾತರಿಗೆ 700 ರೂ. ಶುಲ್ಕ ನಿಗದಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೆಇಎ ವೆಬ್ ಸೈಟ್​ಗೆ ಭೇಟಿ ನೀಡಲು ಸೂಚನೆ ನೀಡಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಸ್ರೋ - 'ಸ್ಪೇಸ್‌ಎಕ್ಸ್' ಸಹಯೋಗ: ಫಾಲ್ಕನ್‌- 9 ರಾಕೆಟ್ ನಲ್ಲಿ ಜಿಸ್ಯಾಟ್‌-20 ಉಪಗ್ರಹ ಉಡಾವಣೆ5 ರೂ ನಾಣ್ಯ ಅದರಿಂದ ಲಕ್ಷಗಟ್ಟಲೆ ಆದಾಯ..!ನಿಮ್ಮಲ್ಲೂ ಇದೆಯೇ ಈ ನಾಣ್ಯ?ಕೇಜ್ರಿವಾಲ್ ಬಂಧನದ ಸುಳುವು ಕೊಟ್ಟ ಎಎಪಿ ನಾಯಕರುಕರ್ನಾಟಕದಲ್ಲಿ 260 ಕೋವಿಡ್ ಪ್ರಕರಣ ದೃಢ - ಓರ್ವ ಮೃತ್ಯುಸ್ತ್ರೀ ಶಾಪ ಯಾವ ರೂಪದಲ್ಲಿ ಅಂಟಿಕೊಳ್ಳುತ್ತದೆ ಸ್ತ್ರೀ ಶಾಪದಿಂದ ಆಗುವಂತಹ ಸಮಸ್ಯೆಗಳನ್ನು ತಿಳಿದುಕೊಳ್ಳಿ ಸ್ತ್ರೀ ಶಾಪಕ್ಕೆ ಒಳಗಾದರೆ ನರಕ ಯಾಚನೆ ಖಂಡಿತ!ಹಸಿ ಕೊಬ್ಬರಿ ತಿನ್ನುವುದರಿಂದ ಆರೋಗ್ಯಕ್ಕೆ ಇಷ್ಟೊಂದು ಲಾಭವ?ಜನವರಿ 13ರಂದು ಕೆ-ಸೆಟ್ ಪರೀಕ್ಷೆ .!ಕಾಲುಂಗುರಕ್ಕೆ ಮುಕ್ತಿ.!ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಖುಷಿ ಸುದ್ದಿ.!ಪದವಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್‌!ಶುಲ್ಕ ಹೆಚ್ಚಳ ಇಷ್ಟು.!ರೈಲ್ವೆ ಪ್ರಯಾಣಿಕರಿಗೆ ಮುಖ್ಯವಾದ ಮಾಹಿತಿ.!