LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

  ಪರಿಶಿಷ್ಟ ಜಾತಿ ಒಳ ಮೀಸಲಾತಿ : ಸಮೀಕ್ಷಾ ಕಾರ್ಯ ಅವಧಿ ಮರು ವಿಸ್ತರಣೆ

 

ಚಿತ್ರದುರ್ಗ: ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಕುರಿತು ನಿವೃತ್ತ ನ್ಯಾಯಮೂರ್ತಿ ಡಾ.ಹೆಚ್.ಎನ್.ನಾಗಮೋಹನದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗವನ್ನು ಸರ್ಕಾರ ರಚಿಸಿದ್ದು, ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಂಬಂಧದ ವಿವಿಧ ಅಂಶಗಳ ಬಗ್ಗೆ ದತ್ತಾಂಶ ಸಂಗ್ರಹಣೆಗಾಗಿ ಜಿಲ್ಲೆಯಲ್ಲಿ ನಡೆದಿರುವ ಸಮೀಕ್ಷೆ ಕಾರ್ಯದ ಅವಧಿಯನ್ನು ಜೂನ್ 08 ರವರೆಗೆ ಮರು ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ ಒಳಮೀಸಲಾತಿ ಸಂಬಂಧ ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ ಕಾರ್ಯ ಕಳೆದ ಮೇ 05 ರಿಂದ ಆರಂಭಗೊಂಡಿದ್ದು, ಕಾರ್ಯದರ್ಶಿಗಳು, ಏಕ ಸದಸ್ಯ ಆಯೋಗ, ಬೆಂಗಳೂರು ಅವರ ಆದೇಶದಂತೆ ಸಮೀಕ್ಷಾ ಕಾರ್ಯವನ್ನು ಜೂನ್ 8 ರವರೆಗೆ ಕೈಗೊಳ್ಳಲು ಮರು ವಿಸ್ತರಿಸಲಾಗಿದೆ.

ಪರಿಷ್ಕøತ ವೇಳಾಪಟ್ಟಿಯಂತೆ ಎರಡನೆ ಹಂತದಲ್ಲಿ, ಸಮೀಕ್ಷೆ ಬ್ಲಾಕ್‍ಗಳಲ್ಲಿ ವಿಶೇಷ ಶಿಬಿರಗಳನ್ನು ಕೈಗೊಂಡು, ಮನೆ-ಮನೆ ಭೇಟಿ ಅವಧಿಯಲ್ಲಿ ಬಿಟ್ಟುಹೋದ ಪರಿಶಿಷ್ಟ ಜಾತಿ ಕುಟುಂಬಗಳ ಮಾಹಿತಿಯನ್ನು ಸಂಗ್ರಹಿಸುವ ಕಾರ್ಯ ಜೂನ್ 08 ರವರೆಗೆ ಜರುಗಲಿದ್ದು, ಮೂರನೆ ಹಂತದಲ್ಲಿ ಸ್ವಯಂ ಘೋಷಣೆ ಮಾಡಿ, ಆನ್‍ಲೈನ್ ಮೂಲಕ ಸಮೀಕ್ಷೆ ಕಾರ್ಯವು ಕೂಡ ಜೂನ್ 08 ರವರೆಗೆ ಜರುಗಲಿದೆ.

ಪರಿಷ್ಕøತ ವೇಳಾಪಟ್ಟಿಯನ್ವಯ ಸಮೀಕ್ಷೆ ಸಂದರ್ಭದಲ್ಲಿ ಗಣತಿದಾರರಿಗೆ ಮತ್ತು ಮೇಲ್ವಿಚಾರಕರಿಗೆ ಕುಟುಂಬದ ಸಂಪೂರ್ಣ ಮಾಹಿತಿ ನೀಡಿ ಸಮೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು  ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಕೋರಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026