LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪವಾರ್ 'ಹಗರಣಗಳ ಸರದಾರ,' ಉದ್ಧವ್ ಠಾಕ್ರೆ 'ಔರಂಗಜೇಬ ಅಭಿಮಾನಿಗಳ ಸಂಘದ ಲೀಡರ್' : ಶಾ ಕಿಡಿ

ಮುಂಬೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉದ್ಧವ್ ಠಾಕ್ರೆ 'ಔರಂಗಜೇಬ್ ಅಭಿಮಾನಿಗಳ ಸಂಘದ ನಾಯಕ' ಎಂದು ಕರೆದಿದ್ದಾರೆ. ಭಾನುವಾರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಬಿಜೆಪಿಯ ಸಿದ್ಧತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಿ, ಮಾತನಾಡಿದರು.

ಶರದ್‌ ಹಗರಣಗಳ ಸರದಾರ, ದೇಶದಲ್ಲಿ ಭ್ರಷ್ಟಾಚಾರವನ್ನು ಸಾಂಸ್ಥೀಕರಣಗೊಳಿಸಿದ ಯಾರಾದರೂ ನಾಯಕರಿದ್ದರೆ, ಅದು ಪವಾರ್...‘ಈ ಹಿಂದೆ ಬಿಜೆಪಿ ಜೊತೆಗೆ ಮೈತ್ರಿಯನ್ನು ಹೊಂದಿದ್ದ ಉದ್ಧವ್‌ ಠಾಕ್ರೆ ಅವರನ್ನೂ ಗುರಿಯಾಗಿಸಿದ ಶಾ, ‘ಇಲ್ಲಿ, ಔರಂಗಜೇಬ್‌ ಅಭಿಮಾನಿಗಳ ಸಂಘವಿದೆ. ಅದು, ಭಾರತಕ್ಕೆ ರಕ್ಷಣೆಯ ಭರವಸೆ ನೀಡುವುದಿಲ್ಲ. ಅದರ ಬಗ್ಗೆ ನಿಮಗೆ ಗೊತ್ತಿದೆಯಾ? ಉದ್ಧವ್‌ ಠಾಕ್ರೆ ಆ ಅಭಿಮಾನಿಗಳ ಸಂಘದ ನಾಯಕರು’ ಎಂದು ಟೀಕಿಸಿದರು.

‘ಮೊಹಮ್ಮದ್‌ ಅಜ್ಮಲ್‌ ಕಸಬ್ (ಮುಂಬೈ ಉಗ್ರರ ದಾಳಿ ಕೃತ್ಯದ ಆರೋಪಿ) ಜೊತೆಗೆ ಗುರುತಿಸಿಕೊಂಡಿದ್ದವರ ಜೊತೆಗೂಡಿ ಉದ್ಧವ್‌ ಊಟ ಮಾಡುತ್ತಾರೆ. ವಿವಾದಿತ ಇಸ್ಲಾಮಿಕ್‌ ಬೋಧಕ ಝಾಕೀರ್ ನಾಯ್ಕಗೆ ಶಾಂತಿಧೂತ ಪ್ರಶಸ್ತಿ ನೀಡಿದವರಿಗೆ ಅವರು ಬೆಂಬಲಿಸುತ್ತಾರೆ. ಪಿಎಫ್‌ಐ ಬೆಂಬಲಿಸಿದವರಿಗೂ ಬೆಂಬಲಿಸುತ್ತಾರೆ. ಅಭಿಮಾನಿಗಳ ಸಂಘವು ಮಹಾರಾಷ್ಟ್ರ ಅಥವಾ ಭಾರತ ಸುರಕ್ಷಿತವಾಗಿ ಇರಲು ಅವಕಾಶ ನೀಡುವುದಿಲ್ಲ. ಅಂತಹ ಭದ್ರತೆ ನೀಡಲು ಶಕ್ತವಾಗಿರುವುದು ಬಿಜೆಪಿ ಮಾತ್ರ’ ಎಂದು ಹೇಳಿದರು. ‘ಮಹಾರಾಷ್ಟ್ರ, ಹರಿಯಾಣ ಮತ್ತು ಜಾರ್ಖಂಡ್‌ ರಾಜ್ಯಗಳಲ್ಲಿ ಕಾಂಗ್ರೆಸ್‌ ಪಕ್ಷದ ಪರಾಭವದ ಬಳಿಕ ವಿರೋಧಪಕ್ಷದ ನಾಯಕ ರಾಹುಲ್‌ಗಾಂಧಿ ಅವರ ಅಹಂಕಾರವೂ ಪತನವಾಗಲಿದೆ’ ಎಂದು ಹರಿಹಾಯ್ದದರು..
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಾ ಕುಂಭ ಮೇಳದಲ್ಲಿ 'ಅಮೃತ ಸ್ನಾನ' ಕ್ಕಾಗಿ 'ಆಪರೇಷನ್ ಇಲೆವೆನ್'ಸಂಗೀತ ಕಾರ್ಯಕ್ರಮದಲ್ಲೇ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲುನ್ಯಾಕ್ ಗ್ರೇಡ್ ಕೊಡಲು ಲಂಚ ಪಡೆದ ವಿವಿ ಪ್ರಾಧ್ಯಾಪಕಿ ಬಂಧನಕಾಲೇಜು ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿ ಶಿಶುವನ್ನು ಕಸದ ಬುಟ್ಟಿಯಲ್ಲಿ ಬಚ್ಚಿಟ್ಟು ಕ್ಲಾಸಿಗೆ ಹಾಜರ್!ವಸಂತ ಪಂಚಮಿಯ ಪವಿತ್ರ ದಿನ- ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ 3ನೇ ಅಮೃತಸ್ನಾನಐರ್ಲೆಂಡ್‌ನಲ್ಲಿ ಕಾರು ಅಪಘಾತದಲ್ಲಿ ಇಬ್ಬರು ಭಾರತೀಯರು ಸಾವು.!ಉಡುಪಿ: ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟುಗೆ ವೈದ್ಯಕೀಯ ಪರೀಕ್ಷೆ , ನ್ಯಾಯಾಂಗ ಬಂಧನಐಎಎಸ್ ಅಧಿಕಾರಿ ಮುದ್ರಾ ಗೈರೋಲಾ ಯಶಸ್ಸಿನ ಪಯಣದ ಕಥನಕಲ್ಲಂಗಡಿ ಬೀಜದಲ್ಲಿ ಆರೋಗ್ಯ ಪ್ರಯೋಜನಗಳು ಅಡಗಿದೆ- ಬೀಜಗಳನ್ನ ಎಸೆಯುವ ಮುನ್ನ ಅದರ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳಿ!!ವಚನ—ಕಲಕೇತಯ್ಯ !