ಕಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಪಂಚಾಯತಿ ಚುನಾವಣೆಯಲ್ಲಿ ಗಲಭೆ ಭುಗಿಲೆದ್ದಿದ್ದು, ಓರ್ವ ಅಧಿಕಾರಿ ಸೇರಿದಂತೆ 12 ಮಂದಿಯನ್ನು ಹತ್ಯೆ ಮಾಡಲಾಗಿದೆ.
ಪಶ್ಚಿಮ ಬಂಗಾಳದಲ್ಲಿ ಮೂರು ಹಂತದ ಪಂಚಾಯತ್ ಚುನಾವಣೆಗೆ ಮತದಾನ ನಡೆಯುತ್ತಿರುವಾಗ ಮಧ್ಯರಾತ್ರಿಯಿಂದ ಚುನಾವಣಾ ಸಂಬಂಧಿತ ಹಿಂಸಾಚಾರದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹತ್ಯೆಗೀಡಾದವರಲ್ಲಿ ಐವರು ಟಿಎಂಸಿ ಸದಸ್ಯರು, ಬಿಜೆಪಿ, ಸಿಪಿಐ (ಎಂ) ಮತ್ತು ಕಾಂಗ್ರೆಸ್ನ ತಲಾ ಒಬ್ಬ ಕಾರ್ಯಕರ್ತ ಮತ್ತು ಸ್ವತಂತ್ರ ಅಭ್ಯರ್ಥಿಯ ಬೆಂಬಲಿಗರು ಸೇರಿದ್ದಾರೆ.
https://bcsuddi.com/%e0%b2%96%e0%b2%b2%e0%b2%bf%e0%b2%b8%e0%b3%8d%e0%b2%a4%e0%b2%be%e0%b2%a8%e0%b2%bf-%e0%b2%89%e0%b2%97%e0%b3%8d%e0%b2%b0%e0%b2%b0-%e0%b2%ae%e0%b3%8b%e0%b2%b8%e0%b3%8d%e0%b2%9f%e0%b3%8d-%e0%b2%b5/
ಹಲವಾರು ಜನರು ಗಾಯಗೊಂಡಿದ್ದಾರೆ. ಕನಿಷ್ಠ ಎರಡು ಮತಗಟ್ಟೆಗಳಲ್ಲಿ ಮತಪೆಟ್ಟಿಗೆಗಳನ್ನು ನಾಶಪಡಿಸಲಾಗಿದೆ ಎಂದು ವರದಿಯಾಗಿದೆ. ರಾಜ್ಯದ ಗ್ರಾಮೀಣ ಪ್ರದೇಶದ 73,887 ಸ್ಥಾನಗಳಿಗೆ ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾಗಿದ್ದು, 5.67 ಕೋಟಿ ಜನರು ಸುಮಾರು 2.06 ಲಕ್ಷ ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಾಗುತ್ತದೆ. ಬೆಳಿಗ್ಗೆ 11 ಗಂಟೆ ವೇಳೆಗೆ ಶೇ.22.6ರಷ್ಟು ಮತದಾನವಾಗಿತ್ತು. ಕೂಚ್ ಬೆಹಾರ್ ಜಿಲ್ಲೆಯ ಫಲಿಮರಿ ಗ್ರಾಮ ಪಂಚಾಯಿತಿಯಲ್ಲಿ ಬಿಜೆಪಿ ಮತದಾನ ಏಜೆಂಟ್ ಮದಬ್ ಬಿಸ್ವಾಸ್ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.