LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪಾಳು ಬಿದ್ದ ಮನೆಯೊಂದರಲ್ಲಿ ಮೂರು ನಿಗೂಢ ಅಸ್ಥಿಪಂಜರ ಪತ್ತೆ : ಪೊಲೀಸರ ದೌಡು

ಚಿತ್ರದುರ್ಗ: ಚಿತ್ರದುರ್ಗದ ಪಾಳು ಬಿದ್ದ ಮನೆಯೊಂದರಲ್ಲಿ ಮೂರು ಅಸ್ಥಿಪಂಜರ ಪತ್ತೆಯಾಗಿದ್ದು, ಈ ನಿಗೂಢತೆ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

ಚಿತ್ರದುರ್ಗ ನಗರ ಹೊರವಲಯದ ಚಳ್ಳಕೆರೆ ಟೋಲ್ ಗೇಟ್ನ ಬಳಿಯಲ್ಲಿ ಇರುವ ಪಾಳು ಮನೆಯಲ್ಲಿ ಶವಗಳು ಸಂಪೂರ್ಣ ಕೊಳೆತು ಮೂಳೆ ಕಾಣುವ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಜಗನ್ನಾಥರೆಡ್ಡಿ ಎಂಬುವರಿಗೆ ಸೇರಿದ ಮನೆ ಇದಾಗಿದ್ದು ಮನೆ ಮುಂಭಾಗ ಜಗನ್ನಾಥರೆಡ್ಡಿ ಹೆಸರಿನ ಬೋರ್ಡ್ ನೇತಾಡುತ್ತಿದೆ.

ಚಿತ್ರದುರ್ಗ ತಾಲೂಕಿನ ದೊಡ್ಡ ಸಿದ್ದವ್ವನಹಳ್ಳಿಯವರಾದ ನಿವೃತ್ತ ಇಂಜಿನಿಯರ್ ಜಗನ್ನಾಥ ರೆಡ್ಡಿ ಅವರು ತನ್ನ ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದರು. ಸುಮಾರು 2 ಕೋಟಿ ಖರ್ಚು ಮಾಡಿ ಚಿಕಿತ್ಸೆ ಕೊಡಿಸಿದ್ದರಂತೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅರೋಗ್ಯ ಮತ್ತೊಷ್ಟು ಹದಗೆಟ್ಟಿತ್ತು. ಇದರಿಂದ ಬೇಸತ್ತು ಯಾರ ಮನೆಗೆ ಯಾರೇ ಬಂದರೂ ಬಾಗಿಲು ತೆಗೆಯದೆ ಕಿಟಕಿಯಲ್ಲಿ ಮಾತಾಡಿಸಿ ಕಳುಹಿಸಿತಿದ್ದರು ಎನ್ನಲಾಗಿದೆ.

ಮನೆಯ ಕೊಠಡಿ ಒಳಗಡೆ ಇರುವ ಮಂಚದ ಮೇಲೆ ಒಂದು ಅಸ್ಥಿಪಂಜರ, ನೆಲದ ಮೇಲೆ ಹಾಗೂ ಬಾಗಿಲು ಹಿಂದೆ ಅಸ್ಥಿ ಪಂಜರ ಕಂಡು ಬಂದಿದ್ದು, ಅಸ್ಥಿಪಂಜರ ಬಳಿ ಆಕ್ಸಿಜನ್ ಸಿಲಿಂಡರ್ ಕಂಡು ಬಂದಿವೆ. ಜಗನ್ನಾಥ ರೆಡ್ಡಿ, ಕೃಷ್ಣಾರೆಡ್ಡಿ, ಜಗನ್ನಾಥ ರೆಡ್ಡಿ ಪತ್ನಿಯ ಅಸ್ಥಿಪಂಜರಗಳು ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಕಾಯಿಲೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರಬಹುದೇ ಎಂಬ ಶಂಕೆಯೂ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಅನಿಲ್ ಕುಮಾರ್, ಸಿಪಿಐ ನಹಿಂ ಅಹಮದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನವೆಂಬರ್ 2022 ರಿಂದ ಯಾರಿಗೂ ಸಹ ಕಾಣದೆ ಇರುವುದು ಕಂಡುಬಂದಿರುತ್ತದೆ ನವೆಂಬರ್ ನಂತರದ ದಿನಗಳಲ್ಲಿ ಮನೆಯ ಸುತ್ತಮುತ್ತ ಸ್ವಲ್ಪ ದುರ್ವಾಸನೆ ಬಂದಂತಹ ಸ್ಥಿತಿಯಿತ್ತು ನಾವು ಯಾವುದೋ ಪ್ರಾಣಿ ಸತ್ತಿರುವ ವಾಸನೆ ಬರುತ್ತದೆ ಎಂದು ತಿಳಿದುಕೊಂಡಿದ್ದೆವು ಎಂದು ಸ್ಥಳೀಯರಿಂದ ಮಾಹಿತಿ ಲಭ್ಯವಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತನ್ನೆಲ್ಲಾ ಸೈನಿಕರನ್ನು ಭಾರತ ಹಿಂದಕ್ಕೆ ಕರೆಸಿಕೊಂಡಿದೆ: ಮಾಲ್ಡೀವ್ಸ್ ಸರ್ಕಾರ'ಖರ್ಗೆ ಅವರ ಆರೋಪ ಗೊಂದಲದ ಆರೋಪ'- ಚುನಾವಣಾ ಆಯೋಗ'ಇಬ್ಬರು ಪತ್ನಿಯರು ಇರುವ ಪುರುಷರಿಗೆ 2 ಲಕ್ಷ ರೂ'.- ಕಾಂಗ್ರೆಸ್‌ ಅಭ್ಯರ್ಥಿ ಗ್ಯಾರಂಟಿಸೈಬರ್ ವಂಚಕರಿಗೆ ಸಿಮ್ ಪೂರೈಸುತ್ತಿದ್ದ ಆರೋಪಿ ಅರೆಸ್ಟ್'ದೇವೇಗೌಡರು CBI ಅನ್ನು ಚೋರ್‌ ಬಚಾವೋ ಸಂಸ್ಥೆ ಎಂದು ಕರೆದಿದ್ದರು'- ಸಿಎಂ'ಉಪ್ಪು ತಿಂದವರು ನೀರು ಕುಡಿಯಲೇಬೇಕು'- ನಿಖಿಲ್ ಕುಮಾರಸ್ವಾಮಿಪೆನ್‌ಡ್ರೈವ್‌ ಪ್ರಕರಣ: ಕಾರ್ತಿಕ್, ದೇವರಾಜೇಗೌಡಗೆ ವಿಚಾರಣೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್ಸಿಎಂ ಅರವಿಂದ್​ ಕೇಜ್ರಿವಾಲ್​​ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನುಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲುಮಂತ್ರಿ ಮಾಲ್ ಗೆ ಮತ್ತೆ ಬಿಗ್ ಶಾಕ್- ಬಿಬಿಎಂಪಿಯಿಂದ ಬೀಗ!