LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪಿಎಸ್‌ಐ ಸಾವು ಪ್ರಕರಣ: ಯಾದಗಿರಿ ಕಾಂಗ್ರೆಸ್ ಶಾಸಕನ ವಿರುದ್ಧ ಕೇಸ್ ದಾಖಲು

ಯಾದಗಿರಿ : ನಗರದ ಸೈಬರ್ ಠಾಣೆ ಪಿಎಸ್‌ಐ ಪರಶುರಾಮ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಯಾದಗಿರಿ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ವಿರುದ್ಧ ಕಿರುಕುಳ, ಪ್ರಚೋದನೆ, ಜಾತಿ ನಿಂದನೆ ಆರೋಪದಡಿ ಕೇಸ್ ದಾಖಲಾಗಿದೆ.

ಶಾಸಕ ಚೆನ್ನಾರೆಡ್ಡಿ ಪಾಟೀಲ್, ತಮ್ಮ ಕ್ಷೇತ್ರದ ವ್ಯಾಪ್ತಿಯ ಠಾಣೆಗಳನ್ನು ಒಂದು ರೀತಿ ಹರಾಜಿಗೆ ಇಟ್ಟಿದ್ದರು. ಯಾರು ಹೆಚ್ಚು ಹಣ ನೀಡುತ್ತಾರೊ ಅವರಿಗೆ ವರ್ಗಾವಣೆ ಶಿಫಾರಸು ಪತ್ರ ನೀಡ್ತಿದ್ದರು. 4-5 ಪಿಎಸ್‌ಐಗಳ ನಡುವೆ ಪೈಪೋಟಿ ಸೃಷ್ಟಿಸಿ ಹೆಚ್ಚು ನೀಡಿದವರಿಗೆ ಪೋಸ್ಟಿಂಗ್ ಮಾಡಲಾಗುತ್ತಿತ್ತು. ಹಣ ಇಲ್ಲದ ಪಿಎಸ್‌ಐಗಳಿಗೆ ಪೋಸ್ಟಿಂಗ್ ಸಿಗುತ್ತಿರಲಿಲ್ಲ? 1 ವರ್ಷದ ಪೋಸ್ಟಿಂಗ್ ಪಡೆಯಲು 20-30 ಲಕ್ಷ ಬೇಡಿಕೆ ಇಡುತ್ತಿದ್ದರು. ಹಣ ನೀಡಿದರೂ ಜಾತಿಯ ಲೆಕ್ಕಾಚಾರ ಹಾಕುತ್ತಿದ್ದರು. ಯಾದಗಿರಿ ವ್ಯಾಪ್ತಿಯ 2-3 ಠಾಣೆಗಳಲ್ಲಿ ಶಾಸಕನಿಗೆ 20-30 ಲಕ್ಷ ನೀಡಿ ಪೋಸ್ಟಿಂಗ್ ಪಡೆದಿರುವ ಆರೋಪ ಕೇಳಿಬಂದಿದೆ.

ಸರ್ಕಾರ ಈಗಾಗಲೇ ಪಿಎಸ್‌ಐ ಪರಶುರಾಮ್ ಸಾವು ಪ್ರಕರಣವನ್ನು ಸಿಐಡಿಗೆ ವಹಿಸಿದ್ದು, ಪ್ರಕರಣದ ತನಿಖೆಗಾಗಿ ಸಿಐಡಿ ತಂಡ ಯಾದಗಿರಿಗೆ ಆಗಮಿಸಿದೆ. ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಇದೀಗ ಶಾಸಕರ ವಿರುದ್ಧ ಕೇಸ್ ದಾಖಲಾಗುವ ಮೂಲಕ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆಯಾಗಿದೆ.

ಪ್ರಕರಣವನ್ನ ಸಿಐಡಿ ತನಿಖೆಗೆ ನೀಡಿದ ಬೆನ್ನಲ್ಲೇ ಯಾದಗಿರಿಗೆ ಸಿಐಡಿ ಡಿವೈಎಸ್ಪಿ ಪುನೀತ ನೇತೃತ್ವದ ತಂಡ ಭೇಟಿ ಕೊಟ್ಟಿದೆ. ಯಾದಗಿರಿ ನಗರ ಪೊಲೀಸರಿಂದ ಕೇಸ್ ಫೈಲ್ ಪಡೆದು ಎಫ್‌ಐಆರ್ ಪ್ರತಿ, ಪಂಚನಾಮೆ ವರದಿ ಸೇರಿದಂತೆ ಮಾಹಿತಿ ಪಡೆದು ತನಿಖಾ ತಂಡ ತನಿಖೆ ಪ್ರಾರಂಭಿಸಲಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'NTPC' ಯಲ್ಲಿ 475 ಹುದ್ದೆಗಳಿಗೆ ಅರ್ಜಿ ಆಹ್ವಾನಕುಂಭಮೇಳದಲ್ಲಿ ಜೀವಂತ ಸಮಾಧಿಯಾದ ಪರಮಹಂಸ ಪೀಠಾಧೀಶ್ವರ ಶಿವಯೋಗಿ ಮೌನಿ ಮಹಾರಾಜರು !!ಇದೆ ಮೊದಲಬಾರಿಗೆ ಮದುವೆ ಸಮಾರಂಭಕ್ಕೆ ಸಜ್ಜಾಗುತ್ತಿದೆ ರಾಷ್ಟ್ರಪತಿ ಭವನ!!ಒಂದೇ ಒಂದು ಚುಂಬನಕ್ಕೆ 37 ರೀಟೇಕ್ ತೆಗೆದುಕೊಂಡ ನಟ - ಆ್ಯಕ್ಷನ್ ಕಟ್ ಹೇಳಿ ಸುಸ್ತಾದ ನಿರ್ದೇಶಕ!ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತ್ಯುಬಂಡುಕೋರರ ಗುಂಡಿನ ದಾಳಿಗೆ 18 ಸೈನಿಕರು ಮೃತ; 23 ಉಗ್ರರು ಹತಕಾರು ನಿಯಂತ್ರಣ ತಪ್ಪಿ ಕೊಳಕ್ಕೆ ಬಿದ್ದು ಇಬ್ಬರು ಹೈಕೋರ್ಟ್ ವಕೀಲರು ಸಾವು.!'ಮಧ್ಯಮ ವರ್ಗವು ಯಾವಾಗಲೂ ಪ್ರಧಾನಿ ಮೋದಿಯವರ ಹೃದಯದಲ್ಲಿದ್ದಾರೆ'- ಅಮಿತ್‌ ಶಾಐಎಎಸ್ ಸಂಜೀತಾ ಮೋಹಪಾತ್ರ ಯಶಸ್ಸಿನ ಪಯಣದ ಕಥನಬ್ಲಾಕ್‌ ಟೀ, ಬ್ಲಾಕ್‌ ಕಾಫಿ ಆರೋಗ್ಯಕ್ಕೆ ಉತ್ತಮ ಯಾವುದು..?