LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪಿಒಪಿ ಗಣೇಶ ಮೂರ್ತಿ ಮಾರುವಂತಿಲ್ಲ -ನಗರಸಭೆ ಪೌರಾಯುಕ್ತೆ ಎಂ.ರೇಣುಕಾ

 

ಚಿತ್ರದುರ್ಗ: ಪರಿಸರಕ್ಕೆ ಹಾನಿಕಾರಕವಾಗಿರುವ ಪಿಒಪಿ ಮತ್ತು ಲೋಹ ಮಿಶ್ರಿತ ಬಣ್ಣದಿಂದ ತಯಾರಿಸಿದ ವಿಗ್ರಹಗಳ ಬಳಕೆಯನ್ನು  ಸರ್ಕಾರ ನಿμÉೀಧಿಸಲಾಗಿದ್ದು, ಪರಿಸರಕ್ಕೆ ಹಾನಿಕಾರವಾಗುವ ಇಂತಹ ವಿಗ್ರಹಗಳ ಮಾರಾಟ ಹಾಗೂ ಬಳಕೆಗೆ ಅವಕಾಶವಿಲ್ಲ ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತರಾದ ಎಂ.ರೇಣುಕಾ ಹೇಳಿದರು

ಪಿಒಪಿ ಗಣೇಶ ವಿಗ್ರಹಗಳ ಮಾರಾಟ ಹಾಗೂ ಬಳಕೆ ಕುರಿತಂತೆ ಜಿಲ್ಲಾಧಿಕಾರಿಗಳು ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಬೆನ್ನಲ್ಲೇ ಚಿತ್ರದುರ್ಗ ನಗರಸಭೆಯ ಅಧಿಕಾರಿಗಳ ತಂಡ ಚಿತ್ರದುರ್ಗ ನಗರದ ವಿವಿಧ ಭಾಗಗಳಲ್ಲಿ ಭೇಟಿ ನೀಡಿ ಪರಸರ ಗಣೇಶೋತ್ಸವ ಹಿನ್ನೆಲೆಯಲ್ಲಿ ಮಣ್ಣಿನ ಗಣೇಶ ಮಾಡಿ, ಯಾವುದೇ ಕಾರಣದಿಂದಾಗಿ ಪಿಒಪಿ ಬಳಸಬೇಡಿ ಎಂದು ಜಾಗೃತಿ ಮೂಡಿಸುವ ಕೆಲಸ ಮಾಡಿದರು.

ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಎಲ್ಲಾ ಜನರಲ್ಲಿ ಅರಿವು ಮೂಡಿಸುವ ಕಾರ್ಯ ಮಾಡುತ್ತಿದ್ದು ಪಿಒಪಿ ಗಣೇಶ ವಿಗ್ರಹಗಳ ಮಾರಾಟ ಅಥವಾ ಬಳಕೆ ಕಂಡುಬಂದಲ್ಲಿ ಕೂಡಲೆ ಅದನ್ನು ವಶಪಡಿಸಿಕೊಳ್ಳಬೇಕು ಎಂದು ಪೌರಾಯುಕ್ತರಾದ ಎಂ ರೇಣುಕಾ ಅವರು ಹೇಳಿದರು.

ನಿರ್ದಿಷ್ಟ ಪ್ರದೇಶದಲ್ಲಿ ಸ್ಥಾಪಿಸಲಾಗುವ ಸಾರ್ವಜನಿಕ ಗಣಪತಿಗಳನ್ನು ವಿಲೇವಾರಿ ಮಾಡಲು ನಿರ್ದಿಷ್ಟ ಜಲಮೂಲಗಳನ್ನು ನಿಗದಿಪಡಿಸಲಾಗುತ್ತಿದ್ದು, ಗಣೇಶಮೂರ್ತಿ ವಿಸರ್ಜನೆ ಮಾಡುವ ಸ್ಥಳಗಳ ಕುರಿತು ಸ್ಥಳೀಯವಾಗಿ ಸಾರ್ವಜನಿಕರಿಗೆ ವ್ಯಾಪಕ ಪ್ರಚಾರ ನೀಡುತ್ತೇವೆ,  ಪರಿಸರಕ್ಕೆ ಹಾನಿಯುಂಟು ಮಾಡುವ ವಿಗ್ರಹಗಳನ್ನು ಜಲಮೂಲಗಳಲ್ಲಿ ವಿಸರ್ಜನೆಗೆ ಅವಕಾಶ ನೀಡುವುದಿಲ್ಲ ಎಂದರು.

ಈ ಸಂದರ್ಭದಲ್ಲಿ ಪರಿಸರ ಅಭಿಯಂತರ ಜಾಫರ್,  ರೆವಿನ್ಯೂ ಇನ್ಸ್‍ಪೆಕ್ಟರ್ ಸಿ.ಮೋಕ್ಷದಾಯಿನಿ, ಯೋಗೇಂದ್ರ, ಆರೋಗ್ಯ ನಿರೀಕ್ಷಕರಾದ ಭಾರತಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಪ್ರಕಾಶ್, ಉಪ ಪರಿಸರ ಅಧಿಕಾರಿಗಳಾದ ರಾಜೇಶ್, ವನ್ಯಜೀವಿ ಮತ್ತು ಪರಿಸರ ಸಂರಕ್ಷಣಾ ವೇದಿಕೆ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಅರಸ್  ಇದ್ದರು.

ಫೋಟೋ ವಿವರ: ಚಿತ್ರದುರ್ಗ ನಗರದ ವಿವಿಧೆಡೆ ಚಿತ್ರದುರ್ಗ ನಗರಸಭೆ ಪೌರಾಯುಕ್ತರಾದ ಎಂ.ರೇಣುಕಾ ಅವರ ನೇತೃತ್ವದಲ್ಲಿ ಅಧಿಕಾರಿಗಳು ಭೇಟಿ ನೀಡಿ ಪರಸರದ ಮಣ್ಣಿನ ಗಣೇಶ ಮಾಡಿ, ಪಿಒಪಿ ಬಳಸಬೇಡಿ ಎಂದು ಜಾಗೃತಿ ಮೂಡಿಸುವ ಕೆಲಸ ಮಾಡಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ - ನಾಲ್ಕು ಮಂದಿ ಮೃತ್ಯುಏರ್ ಗನ್, ಚಾಕು ಹಿಡಿದು ಪ್ರಾರ್ಥಮಿಕ ಶಾಲಾ ಮಕ್ಕಳ ಹೊಡೆದಾಟಕ್ಕೆ ಶಿಕ್ಷಕ ವರ್ಗ ತಲ್ಲಣ..!ಜನವರಿ ತಿಂಗಳಂತ್ಯಕ್ಕೆ ಬೆಂಗಳೂರಿನಲ್ಲಿ ಬ್ರಹತ್ಉದ್ಯೋಗ ಮೇಳ - ಮುಖ್ಯಮಂತ್ರಿ ಸಿದ್ದರಾಮಯ್ಯಹೊಸ ವರ್ಷಕ್ಕೆ ಎಣ್ಣೆ ಖರೀದಿ ನೆಪದಲ್ಲಿ ಸಾವಿರಾರು ಮೌಲ್ಯದ ಬಿಯರ್ ಕದ್ದು ಪರಾರಿ..!!ಸೂರ್ಯನಿಂದ ಪ್ರಬಲವಾದ ಸೌರ ಜ್ವಾಲೆ ಸ್ಪೋಟರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಭಾರೀ ಮಳೆ; ಹವಾಮಾನ ಇಲಾಖೆಯ ಎಚ್ಚರಿಕೆ..!'2024 ನೇ ವರ್ಷ ರಾಜ್ಯಕ್ಕೆ ಆಶಾದಾಯಕವಾಗಲಿದೆ' - ಮುಖ್ಯಮಂತ್ರಿ ಸಿದ್ದರಾಮಯ್ಯರಾಜ್ಯದಲ್ಲಿ ಕೊರೋನಾದಿಂದ ಒಬ್ಬರು ಸಾವು, 296 ಮಂದಿಗೆ ಪಾಸಿಟಿವ್ಹುಟ್ಟಿದ ನಕ್ಷತ್ರಗಳ ಪ್ರಕಾರ ನಿಮ್ಮ ಗುಣ ಸ್ವಭಾವ ಮದುವೆ ಯೋಗದ ಬಗ್ಗೆ ತಿಳಿದುಕೊಳ್ಳಿ!ಹುರುಳಿಕಾಳಿನಲ್ಲಿದೆ ತಿಂಗಳ ಋತುಸ್ರಾವಕ್ಕೆ ಮದ್ದು..! ಹುರುಳಿಕಾಳಿನ ಲಾಭ ಅರಿತಿದ್ದೀರಾ?