LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪೊಲೀಸರಿಗೆ ಮೊಬೈಲ್ ಅಥವಾ ಪಾಸ್‌ವರ್ಡ್‌ ನೀಡದಿರುವುದು ತನಿಖೆಗೆ ಅಸಹಕಾರವಲ್ಲ- ಹೈಕೋರ್ಟ್ ತೀರ್ಪು

ಆರೋಪಿಗಳು ತನಿಖಾ ಸಂಸ್ಥೆಗೆ ಮೊಬೈಲ್ ಫೋನ್ ಸಲ್ಲಿಸದೇ ಇರುವುದು ಅಸಹಕಾರ ಎಂದು ಕರೆಯಲಾಗದು ಎಂದು ಆಂಧ್ರ ಪ್ರದೇಶ ಹೈಕೋರ್ಟ್ ತೀರ್ಪು ನೀಡಿದೆ.

ಮಾಜಿ ಸಂಸತ್ ಸದಸ್ಯ ಎನ್. ಸುರೇಶ್ ಬಾಬು ಮತ್ತು ಉದ್ಯಮಿ ಅವುತ್ತು ಶ್ರೀನಿವಾಸ ರೆಡ್ಡಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಆಂಧ್ರ ಪ್ರದೇಶ ಹೈಕೋರ್ಟ್‌ನ ನ್ಯಾ. ಡಾ. ವಿ.ಆರ್.ಕೆ. ಕೃಪಾಸಾಗರ ಅವರಿದ್ದ ಏಕಸದಸ್ಯ ನ್ಯಾಯಪೀಠ ಆದೇಶ ಹೊರಡಿಸಿದೆ.

ಆರೋಪಿಗಳಿಗೆ ಸಂವಿಧಾನದ ವಿಧಿ 20(3) ಸ್ವಯಂ ದೋಷಾರೋಣೆ ವಿರುದ್ಧದ ಹಕ್ಕು ಅಡಿಯಲ್ಲಿ ರಕ್ಷಣೆ ಒದಗಿಸಲಾಗಿದೆ. ಈ ಕಾರಣದಿಂದ ಗ್ಯಾಜೆಟ್ ಆನ್‌ಲೈನ್ ಖಾತೆಗಳ ಪಾಸ್‌ವರ್ಡ್‌ ನೀಡುವಂತೆ ಪೊಲೀಸರು ಆರೋಪಿಗಳಿಗೆ ಒತ್ತಾಯಿಸುವಂತಿಲ್ಲ ಎಂದು ಹೈಕೋರ್ಟ್ ನ್ಯಾಯಪೀಠ ತನ್ನ ತೀರ್ಪಿನಲ್ಲಿ ಹೇಳಿದೆ.

ಸದ್ರಿ ಪ್ರಕರಣದಲ್ಲಿ ಆರೋಪಿಗಳು ತಮ್ಮ ಮೊಬೈಲ್ ಫೋನ್‌ಗಳನ್ನು ತನಿಖೆ ಹಿನ್ನೆಲೆಯಲ್ಲಿ ಪೊಲೀಸರಿಗೆ ಒಪ್ಪಿಸಿರಲಿಲ್ಲ. ಹೀಗಾಗಿ ಅವರಿಗೆ ಜಾಮೀನು ಮಂಜೂರು ಮಾಡಬಾರದು ಎಂದು ಅಭಿಯೋಜನೆಯ ಪರ ವಕೀಲರು ವಾದಿಸಿದ್ದರು. ಮೊಬೈಲ್ ಫೋನ್ ನೀಡದೇ ಇದ್ದ ಕಾರಣ ಪ್ರಕರಣದಲ್ಲಿ ವಾಟ್ಸ್ಯಾಪ್ ಸಂದೇಶಗಳನ್ನು ಸಂಗ್ರಹಿಸಲು ಮತ್ತು ಅಪರಾಧದ ಗೂಗಲ್ ಟೈಮ್ ಲೈನ್ ಸಂಗ್ರಹಿಸಲು ಪೊಲೀಸರಿಗೆ ಆಗಲಿಲ್ಲ ಎಂದು ವಾದಿಸಲಾಗಿತ್ತು.

ಆದರೆ, ಫೋನ್ ವಶಕ್ಕೆ ಪಡೆದುಕೊಳ್ಳಲಾಗಿಲ್ಲ ಎಂಬ ಕಾರಣಕ್ಕೆ ಅದನ್ನು ಹೊರತುಪಡಿಸಿ ಉಳಿದ ಎಲೆಕ್ಟ್ರಾನಿಕ್ ಸಾಕ್ಷ್ಯ ಪಡೆಯಲು ಹಿಂಜರಿಯುವಂತಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.

ಅರ್ಜಿದಾರರ ಉದ್ಯೋಗ, ನಿವಾಸ ಮತ್ತು ಇಷ್ಟು ವರ್ಷದಲ್ಲಿ ತನಿಖೆಗೆ ಲಭ್ಯ ಇರುವುದನ್ನು ಗಮನಿಸಿದರೆ, ಅವರು ಪೊಲೀಸರ ವಿಚಾರಣೆಯಿಂದ ತಪ್ಪಿಸುವ ಸಾಧ್ಯತೆ ಇಲ್ಲ ಎಂಬುದನ್ನು ಸೂಚಿಸುತ್ತದೆ ಎಂದು ನ್ಯಾಯಪೀಠ ಹೇಳಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇನ್ಮುಂದೆ ನ್ಯಾಯಾಂಗ ಸೇವೆಗೆ ಸೇರಲು ಕನಿಷ್ಠ 3 ವರ್ಷಗಳ ವಕೀಲ ವೃತ್ತಿ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶಧರ್ಮಸ್ಥಳದ ಆಕಾಂಕ್ಷ ಸಾವಿನ ಪ್ರಕರಣ: ಪ್ರೋಫೆಸರ್ ಬಂಧನ, ಮೃತದೇಹ ಮೇ.21ಕ್ಕೆಮತ್ತೊಂದು ಹೊಸ ನೋಟು ಎಂಟ್ರಿ : RBI ಮಹತ್ವದ ಘೋಷಣೆಚುನಾವಣಾ ರಾಜಕೀಯಕ್ಕೆ ಸಹಕಾರ ಸಚಿವ ಕೆ. ಎನ್‌ ರಾಜಣ್ಣ ನಿವೃತ್ತಿಪಿಎಸ್ಐ ನೇಮಕಾತಿಗೆ ಪೂರ್ವ ತರಬೇತಿಗಾಗಿ ಅರ್ಜಿ ಆಹ್ವಾನ…ಭಾರಿ ಮಳೆಗೆ ಕರ್ನಾಟಕದಲ್ಲಿ 4 ಸಾವು, ಬೆಂಗಳೂರಿನಲ್ಲಿ ಇನ್ನೂ 3 ದಿನ ಭಾರೀ ಮಳೆಧರ್ಮಸ್ಥಳದ ಆಕಾಂಕ್ಷ ಆತ್ಮಹತ್ಯೆ ಪ್ರಕರಣ: ಮದುವೆಯಾದ ಪ್ರೊಫೆಸರ್ ಜೊತೆಗಿನ ಪ್ರೇಮ ವೈಫಲ್ಯವೇ ಕಾರಣಮಂಗಳೂರು: ಸುಹಾಸ್ ಹತ್ಯೆಯ ಪ್ರಮುಖ ಆರೋಪಿಗೆ ಜೈಲಿನಲ್ಲಿ ಹಲ್ಲೆಗೆ ಯತ್ನಬೆಂಗಳೂರಿನಲ್ಲಿ 50ಕ್ಕೂ ಅಧಿಕ ಬಡಾವಣೆಗಳು ಜಲಾವೃತ : 4 ಮಂದಿ ಸಾವುಅಂಚಿನ ಮಾಡುವ ವಿಧಾನ ಸಾರ್ವಜನಿಕ ವಶೀಕರಣ.!