LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪ್ರತಿಭಾ ಕಾರಂಜಿಯಲ್ಲಿ ಭೂತದ ಕೋಲಕ್ಕೆ ಅವಕಾಶ -ವಿವಾದಕ್ಕೆ ಕಾರಣವಾದ ಶಿಕ್ಷಣ ಇಲಾಖೆಯ ಸುತ್ತೋಲೆ ..!

ಕಾರ್ಕಳ : ಈ ವರ್ಷ ಪ್ರತಿಭಾ ಕಾರಂಜಿ ದೊಡ್ಡ ಮಟ್ಟದಲ್ಲಿ ನಡೆಸಲು ಸಿದ್ಧತೆಗಳಾಗುತ್ತಿದ್ದು, ಶಿಕ್ಷಣ ಇಲಾಖೆಯು ಜೂ. 19ರಂದು ಸುತ್ತೋಲೆ ಹೊರಡಿಸಿ ಈ ವರ್ಷದ ಪ್ರತಿಭಾ ಕಾರಂಜಿಯ ದಿನಾಂಕವನ್ನು ಘೋಷಣೆ ಮಾಡಿದೆ. ಆದರೆ ಸುತ್ತೋಲೆಯಲ್ಲಿ ಜಾನಪದ ನೃತ್ಯ ವಿಭಾಗದಲ್ಲಿ ಭೂತದ ಕೋಲಕ್ಕೆ ಅವಕಾಶ ನೀಡಿರುವುದು ವಿವಾದಕ್ಕೆ ಕಾರಣವಾಗುವ ಸಾಧ್ಯತೆ ನಿಚ್ಚಳವಾಗಿ ಕಂಡುಬರುತ್ತಿದೆ.

ಜುಲೈ ತಿಂಗಳಲ್ಲಿ ಶಾಲಾ ಮಟ್ಟ, ಆಗಸ್ಟ್ ತಿಂಗಳಲ್ಲಿ ಕ್ಲಸ್ಟರ್ ಮಟ್ಟ, ಮುಂದೆ ಜಿಲ್ಲಾ ಮಟ್ಟ ಹಾಗೂ ರಾಜ್ಯಮಟ್ಟದಲ್ಲಿಯೂ ಸ್ಪರ್ಧೆಗೆ ಅವಕಾಶ ಕಲ್ಪಿಸಲಾಗಿದೆ. ಇದು ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಒಂದು ಉತ್ತಮ ವೇದಿಕೆಯಾಗಿದೆ.

https://bcsuddi.com/%e0%b2%b5%e0%b2%bf%e0%b2%b5%e0%b2%be%e0%b2%b9%e0%b2%b5%e0%b2%be%e0%b2%97%e0%b2%a6%e0%b2%b5%e0%b2%b0%e0%b2%bf%e0%b2%97%e0%b3%86-%e0%b2%b8%e0%b2%b0%e0%b2%95%e0%b2%be%e0%b2%b0%e0%b2%a6%e0%b2%bf%e0%b2%82/

ಜಾನಪದ ನೃತ್ಯವು ಸಮೂಹ ವಿಭಾಗವಾಗಿದ್ದು ಅದರಲ್ಲಿ ಬುಡಕಟ್ಟು, ಜಾನಪದ, ಪಾರಂಪರಿಕ ಕಲೆಗಳನ್ನು ಪ್ರದರ್ಶಿಸಬೇಕು ಎಂದು ಇಲಾಖೆ ಆದೇಶದಲ್ಲಿ ತಿಳಿಸಿದೆ. ಅಷ್ಟೇ ಹೇಳಿ ಮುಗಿಸಿದ್ದರೆ ವಿವಾದ ಆಗುತ್ತಿರಲಿಲ್ಲ. ಆದರೆ ಅದೇ ಸುತ್ತೋಲೆಯಲ್ಲಿ ಗೊರವರ ಕುಣಿತ, ವೀರಗಾಸೆ, ಡೊಳ್ಳು ಕುಣಿತ, ಯಕ್ಷಗಾನ ಇತ್ಯಾದಿ ಉದಾಹರಣೆಗಳನ್ನು ನೀಡಲಾಗಿದೆ. ಕೊನೆಯಲ್ಲಿ ಭೂತದ ಕೋಲ (ಭೂತದ ಕೋಲು ಎಂದು ಆದೇಶದಲ್ಲಿದೆ ?) ಕ್ಕೆ ಈ ಬಾರಿ ಅನುಮತಿ ನೀಡಲಾಗಿದೆ ಎಂಬ ಉಲ್ಲೇಖ ಇದೆ. ಇದು ತುಳುನಾಡಿನ ಜನರ ನಂಬಿಕೆಗಳಿಗೆ ನೋವು ಉಂಟುಮಾಡುವ ಸಂಗತಿಯಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಂಗಳೂರು: ಅನ್ಯಮತೀಯ ಕೇರಳ ಜೋಡಿಗಳ ಮೇಲೆ ನೈತಿಕ ಪೊಲೀಸ್ ಗಿರಿ - ಮೂವರು ಅರೆಸ್ಟ್4 ವರ್ಷದೊಳಗಿನ ಮಕ್ಕಳಿಗೆ ಶೀತದ ಔಷಧ ನೀಡುವ ಮುನ್ನ ಹುಷಾರ್‌ : ಈ ಔಷಧಗಳಿಗೆ ನಿಷೇಧ ಹೇರಿದ ಕೇಂದ್ರ ಸರಕಾರನಾಲ್ವರು ಉಗ್ರರರಿಂದ ಒಳನುಸುಳಲು ಯತ್ನ: ಓರ್ವ ಉಗ್ರನ ಹತ್ಯೆಜ.6ರಂದು ಸೌರ ಮಿಷನ್ ಆದಿತ್ಯ L1 ಪಾಯಿಂಟ್‌ಗೆ ಪ್ರವೇಶಿಸಲಿದೆ - ಸೋಮನಾಥ್Coconut Rice Recipe : ಚಿತ್ರಾನ್ನದಷ್ಟೇ ರುಚಿಕರವಾದ ತೆಂಗಿನಕಾಯಿ ರೈಸ್‌ ರೆಸಿಪಿ ಒಮ್ಮೆ ಟ್ರೈ ಮಾಡಿಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಪ್ರಕರಣ: ಮುಖ್ಯ ಶಿಕ್ಷಕಿಯ ಬಂಧನಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ವಾಪಸ್- ಬಿಜೆಪಿ ಮುಖಂಡರ ಆಕ್ರೋಶಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ : 3000 ಹುದ್ದೆಗಳಿಗೆ ಅರ್ಜಿ ಆಹ್ವಾನಮಾಂಸಾಹಾರ ಊಟದ ಜೊತೆ ಹಾಲು ಕುಡಿದ್ರೆ ಇಷ್ಟೆಲ್ಲಾ ಸಮಸ್ಯೆ ಆಗುತ್ತಾ..!ಶಾಲಾ ಕಾಲೇಜುಗಳಲ್ಲಿ ಹಿಜಬ್ ನಿಷೇಧ ವಾಪಾಸ್ – ಸಿಎಂ ಸಿದ್ದರಾಮಯ್ಯ