LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳ ಶರಣಾಗತಿಗೆ ಸೂಚಿಸಿದ ಗಡುವು ಅಂತ್ಯ

ಪುತ್ತೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಆರೋಪಿಗಳ ಶರಣಾಗತಿಗೆ ಸೂಚಿಸಿದ ಗಡುವು ಮುಗಿದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗಿನ ಅಬ್ದುಲ್‌ ನಾಸಿರ್‌, ಅಬ್ದುಲ್‌ ರೆಹಮಾನ್‌ ಮತ್ತು ಬೆಳ್ತಂಗಡಿಯ ನೌಷಾದ್‌ ಹಾಗೂ ಮತ್ತೆ ಐವರು ಸೇರಿ ಒಟ್ಟು 8 ಮಂದಿ ಶಂಕಿತ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಇನ್ನು ತುಫೈಲ್‌, ಮೊಹಮ್ಮದ್‌ ಮುಸ್ತಾಫ‌ ಸುಳಿವಿಗೆ ತಲಾ 5 ಲಕ್ಷ ರೂ. ಹಾಗೂ ಉಮ್ಮರ್‌ ಫಾರೂಕ್‌, ಅಬೂಬಕ್ಕರ್‌ ಸಿದ್ದಿಕ್‌ ಸುಳಿವು ನೀಡಿದಲ್ಲಿ ತಲಾ 2 ಲಕ್ಷ ರೂ. ಬಹುಮಾನವನ್ನು ಘೋಷಿಸಲಾಗಿದೆ.

ಜೂ.30ರೊಳಗೆ ತಲೆಮರೆಸಿಕೊಂಡಿರುವ ಆರೋಪಿಗಳು ಶರಣಾಗಬೇಕು, ಇಲ್ಲವೇ ಆರೋಪಿಗಳ ಮನೆ, ಆಸ್ತಿ ಮುಟ್ಟುಗೋಲು ಹಾಕುವುದಾಗಿ ಸೂಚನೆ ನೀಡಲಾಗಿತ್ತು. ಅದರೊಂದಿಗೆ ಧ್ವನಿವರ್ಧಕದ ಮೂಲಕ ಉದ್ಘೋಷಣೆ ಮಾಡಿ, ಆರೋಪಿಗಳ ಮನೆಗಳಲ್ಲೂ ಭಿತ್ತಿಪತ್ರ ಹಚ್ಚುವ ಮೂಲಕ ಮಾಹಿತಿ ನೀಡಲಾಗಿತ್ತು. ಆದರೆ ಆರೋಪಿಗಳು ಶರಣಾಗಿಲ್ಲ ಎಂದು ತಿಳಿದುಬಂದಿದೆ.

https://bcsuddi.com/%e0%b2%b8%e0%b2%82%e0%b2%b8%e0%b2%a4%e0%b3%8d-%e0%b2%ae%e0%b3%81%e0%b2%82%e0%b2%97%e0%b2%be%e0%b2%b0%e0%b3%81-%e0%b2%85%e0%b2%a7%e0%b2%bf%e0%b2%b5%e0%b3%87%e0%b2%b6%e0%b2%a8-%e0%b2%9c%e0%b3%81/

ಇನ್ನು ತಲೆಮರೆಸಿಕೊಂಡಿಕೊಂಡುವ ಆರೋಪಿಗಳ ಆಸ್ತಿ ಜಪ್ತಿ ಮಾಡಬಹುದು ಎನ್ನಲಾಗಿತ್ತು ಆದರೆ ಇದಕ್ಕೂ ಸಮಯ ತಗಲುತ್ತದೆ. ಆರೋಪಿಯ ಹೆಸರಿನಲ್ಲಿರುವ ಚರಾಸ್ತಿ ಹಾಗೂ ಸ್ಥಿರಾಸ್ತಿಗಳ ಮಾಹಿತಿಯನ್ನು ಎನ್‌ಐಎ ಅಧಿಕಾರಿಗಳು ಕಂದಾಯ ಇಲಾಖೆ, ಬ್ಯಾಂಕ್‌ಗಳು ಮತ್ತಿತರ ಮೂಲಗಳಿಂದ ಸಂಗ್ರಹಿಸಿ, ಆರೋಪಿಗಳ ಹೆಸರಿನಲ್ಲಿರುವ ಆಸ್ತಿಗಳ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿ, ಬಳಿಕ ಆರೋಪಿಯದ್ದೇ ಆಸ್ತಿ ಎಂದು ದೃಢೀಕರಣಗೊಂಡಲ್ಲಿ ಮುಟ್ಟುಗೋಲು ಹಾಕಿಕೊಂಡು ಸರಕಾರದ ವಶಕ್ಕೆ ಪಡೆಯಯಬಹುದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಂಗಳೂರು: ಅನ್ಯಮತೀಯ ಕೇರಳ ಜೋಡಿಗಳ ಮೇಲೆ ನೈತಿಕ ಪೊಲೀಸ್ ಗಿರಿ - ಮೂವರು ಅರೆಸ್ಟ್4 ವರ್ಷದೊಳಗಿನ ಮಕ್ಕಳಿಗೆ ಶೀತದ ಔಷಧ ನೀಡುವ ಮುನ್ನ ಹುಷಾರ್‌ : ಈ ಔಷಧಗಳಿಗೆ ನಿಷೇಧ ಹೇರಿದ ಕೇಂದ್ರ ಸರಕಾರನಾಲ್ವರು ಉಗ್ರರರಿಂದ ಒಳನುಸುಳಲು ಯತ್ನ: ಓರ್ವ ಉಗ್ರನ ಹತ್ಯೆಜ.6ರಂದು ಸೌರ ಮಿಷನ್ ಆದಿತ್ಯ L1 ಪಾಯಿಂಟ್‌ಗೆ ಪ್ರವೇಶಿಸಲಿದೆ - ಸೋಮನಾಥ್Coconut Rice Recipe : ಚಿತ್ರಾನ್ನದಷ್ಟೇ ರುಚಿಕರವಾದ ತೆಂಗಿನಕಾಯಿ ರೈಸ್‌ ರೆಸಿಪಿ ಒಮ್ಮೆ ಟ್ರೈ ಮಾಡಿಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಪ್ರಕರಣ: ಮುಖ್ಯ ಶಿಕ್ಷಕಿಯ ಬಂಧನಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ವಾಪಸ್- ಬಿಜೆಪಿ ಮುಖಂಡರ ಆಕ್ರೋಶಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ : 3000 ಹುದ್ದೆಗಳಿಗೆ ಅರ್ಜಿ ಆಹ್ವಾನಮಾಂಸಾಹಾರ ಊಟದ ಜೊತೆ ಹಾಲು ಕುಡಿದ್ರೆ ಇಷ್ಟೆಲ್ಲಾ ಸಮಸ್ಯೆ ಆಗುತ್ತಾ..!ಶಾಲಾ ಕಾಲೇಜುಗಳಲ್ಲಿ ಹಿಜಬ್ ನಿಷೇಧ ವಾಪಾಸ್ – ಸಿಎಂ ಸಿದ್ದರಾಮಯ್ಯ