LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಟ್ಟೆಯ ಮೇಲೆ ಸಿಲುಕಿದ್ದ ನೊಣದಿಂದ ಸಿಕ್ಕಿಬಿದ್ದ ಕೊಲೆ ಆರೋಪಿ

ಮಧ್ಯಪ್ರದೇಶ: ಒಂದು ನೊಣ ಆರೋಪಿಯನ್ನು ಹಿಡಿಯಲು ಪೊಲೀಸರಿಗೆ ಸಹಾಯ ಮಾಡಿದೆ. ಶಂಕಿತ ಯುವಕ ಧರಿಸಿದ್ದ ಬಟ್ಟೆಯ ಮೇಲೆ ಸಿಲುಕಿಕೊಂಡಿದ್ದ ನೊಣದಿಂದ ಮಧ್ಯಪ್ರದೇಶದ ಜಬಲ್‌ಪುರ ಜಿಲ್ಲೆಯಲ್ಲಿ ನಡೆದ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.

ಕೊಲೆಯಂತಹ ಅಪರಾಧ ಕೃತ್ಯವೆಸಗುವವರು ಸಾಮಾನ್ಯವಾಗಿ ಯಾವುದೇ ಕುರುಹು ಸಿಗದಂತೆ ನೋಡಿಕೊಳ್ಳುತ್ತಾರೆ. ಆದರೆ ಒಂದು ನೊಣ ಆರೋಪಿಯನ್ನು ಹಿಡಿಯಲು ಪೊಲೀಸರಿಗೆ ಸಹಾಯ ಮಾಡಿದೆ. ಶಂಕಿತ ಯುವಕ ಧರಿಸಿದ್ದ ಬಟ್ಟೆಯ ಮೇಲೆ ಸಿಲುಕಿಕೊಂಡಿದ್ದ ನೊಣದಿಂದ ಮಧ್ಯಪ್ರದೇಶದ ಜಬಲ್‌ಪುರ ಜಿಲ್ಲೆಯಲ್ಲಿ ನಡೆದ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.

ಆಸ್ತಿ, ಹಣದ ವಿವಾದದ ನಂತರ ಆರೋಪಿ ಧರಮ್​ ಠಾಕೂರ್ ಎಂಬಾತ ತನ್ನ ಚಿಕ್ಕಪ್ಪ ಮನೋಜ್ ಠಾಕೂರ್​ನನ್ನು ಹತ್ಯೆ ಮಾಡಿದ್ದ. ಆರೋಪಿ ಧರಮ್​ನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಮನೋಜ್ ಠಾಕೂರ್ ಕೆಲಸದ ನಿಮಿತ್ತ ಮನೆಯಿಂದ ಹೋದವರು ರಾತ್ರಿಯಾದರೂ ಹಿಂದಿರುಗಿರಲಿಲ್ಲ, ಅಕ್ಟೋಬರ್ 31 ರಂದು ದೇವೋರಿ ತಪ್ರಿಯಾ ಗ್ರಾಮದ ಕೃಷಿ ಭೂಮಿಯಲ್ಲಿ ಶವ ಪತ್ತೆಯಾಗಿತ್ತು. ಚಾರ್ಗಾವಾನ್ ಪ್ರದೇಶದ ಮಾರುಕಟ್ಟೆಯಲ್ಲಿ ಮೃತ ಮನೋಜ್ ಜತೆ ಕೊನೆಯದಾಗಿ ಕಾಣಿಸಿಕೊಂಡಿದ್ದು ಧರಮ್ ಎನ್ನುವುದು ತಿಳಿದುಬಂದಿತ್ತು. ಕೊಲೆಯಾದ ಸ್ಥಳಕ್ಕೆ ಬಂದಿದ್ದ ಆರೋಪಿಯ ಕಣ್ಣುಗಳು ಕೆಂಪಾಗಿದ್ದವು, ಆತನ ಎದೆಯ ಮೇಲೆ ಕೆಲವು ಗುರುತುಗಳಿದ್ದವು.

ಆಗ ಆತನ ಬಟ್ಟೆಯ ಮೇಲಿದ್ದ ನೊಣಗಳನ್ನು ಗಮನಿಸಿದಾಗ ಅನುಮಾನ ಮೂಡಿತ್ತು, ಬಳಿಕ ನೊಣವನ್ನು ಸರಿಯಾಗಿ ಪರಿಶೀಲಿಸಿದಾಗ ಅದರ ಮೇಲೆ ರಕ್ತದ ಕಲೆಗಳಿರುವುದು ಕಂಡುಬಂದಿತ್ತು. ಆರೋಪಿ ಕಪ್ಪು ಶರ್ಟ್​ ಧರಿಸಿದ್ದರಿಂದ ರಕ್ತದ ಕಲೆಗಳು ಕಾಣಿಸಿರಲಿಲ್ಲ. ಸ್ಥಳದಲ್ಲಿದ್ದ ಫೋರೆನ್ಸಿಕ್ ತಂಡವು ಆರೋಪಿಗಳ ಬಟ್ಟೆಗಳನ್ನು ಪರೀಕ್ಷಿಸಿದ್ದು, ಅವುಗಳ ಮೇಲೆ ರಕ್ತದ ಕಲೆಗಳಿರುವುದು ಖಚಿತವಾಯಿತು ಎಂದು ಅಧಿಕಾರಿ ಹೇಳಿದರು.



ಆರೋಪಿಯು ಆರಂಭದಲ್ಲಿ ನಿರಪರಾಧಿ ಎಂದು ಹೇಳಿಕೊಂಡಿದ್ದರೂ ನಂತರ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ಅವರು ಹೇಳಿದರು.

ಫೋರೆನ್ಸಿಕ್ ಲ್ಯಾಬ್ ತಂಡವು ದೇಹದ ಸಮೀಪವಿರುವ ಮರದ ಸಣ್ಣ ತುಂಡುಗಳಲ್ಲಿ ಕೆಲವು ರಕ್ತದ ಕಲೆಗಳನ್ನು ಪತ್ತೆಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಆರೋಪಿಯು ವ್ಯಕ್ತಿಗೆ ಮೊಳೆ ಇರುವ ವಸ್ತುವಿನಿಂದ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪೆಹಲ್ಗಾಮ್ನಲ್ಲಿ ಘಟನೆ ನಡೆದ ವೇಳೆ ಒಬ್ಬರೂ ಪೊಲೀಸ್ ಇರಲಿಲ್ಲ ಏಕೆ.?ಧರ್ಮಸ್ಥಳ ಪ್ರಕರಣ: ಸಾಮಾಜಿಕ ಹೋರಾಟಗಾರ ಜಯಂತ್ ಮತ್ತೊಂದು ದೂರು.!RSS ವಿರುದ್ಧ ದಾಳಿ ಮಾಡಿದ್ರೆ ಸಿದ್ದರಾಮಯ್ಯ ‘ಸಿಎಂ ಕುರ್ಚಿ’ ಉಳಿಯುವುದು ‘ಗ್ಯಾರಂಟಿ’!ಐದು ತಿಂಗಳ ಗರ್ಭಿಣಿ ಕೈದಿ ಆಸ್ಪತ್ರೆಯಲ್ಲಿ ಪೋಲೀಸರನ್ನು ತಳ್ಳಿ ಪರಾರಿಸ್ಯಾಂಡಲ್‌ವುಡ್ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು!ಕರ್ನಾಟಕದಲ್ಲಿ ದ್ವಿಭಾಷಾ ಮಾದರಿಯೊಂದಿಗೆ ಹೊಸ ಶಿಕ್ಷಣ ನೀತಿ ಜಾರಿಗೆಮಂಗಳೂರು: ಕಾರಿನಲ್ಲಿ ಬಂದು ಚಿನ್ನದ ವ್ಯಾಪಾರಿಯನ್ನು ಅಪಹರಿಸಿ ದರೋಡೆಮಡಿಕೇರಿ ರಾಜಾಸೀಟ್ ಗ್ಲಾಸ್ ಬ್ರಿಡ್ಜ್ ಯೋಜನೆ ಹಿಂಪಡೆದ ಸರ್ಕಾರಶ್ರೀಲಂಕಾ ಕ್ರಿಕೆಟಿಗನಿಗೆ 5 ವರ್ಷಗಳ ನಿಷೇಧ'ಉಕ್ರೇನ್‌ ಜೊತೆಗಿನ ಯುದ್ಧ ಕೊನೆಗೊಳಿಸದ ಹೊರತು ನಮ್ಮ ನಡುವೆ ಒಪ್ಪಂದವಿಲ್ಲ'- ಡೊನಾಲ್ಡ್ ಟ್ರಂಪ್‌