Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬ್ಯಾಂಕಿನಲ್ಲಿದ್ದ ಹಣ ಪಡೆಯಲು ಅಸ್ಥಿ ಪಂಜರ ತಂದ

ಕಿಯೋಂಜರ್ (ಒಡಿಶಾ): ಹಸಿವು ಮತ್ತು ಬಡತನ ಮನುಷ್ಯನನ್ನು ಎಂತಹ ಪರಿಸ್ಥಿತಿಗೆ ತಳ್ಳುತ್ತದೆ ಎನ್ನುವುದಕ್ಕೆ ಒಡಿಶಾದ ಕಿಯೋಂಜರ್ ಜಿಲ್ಲೆಯಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಮೃತಪಟ್ಟ ತನ್ನ ಅಕ್ಕನ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು ಪಡೆಯಲು, ವ್ಯಕ್ತಿಯೊಬ್ಬ ಅಕ್ಕನ ಅಸ್ಥಿಪಂಜರವನ್ನೇ ಹೆಗಲ ಮೇಲೆ ಹೊತ್ತು ಸುಡುವ ಬಿಸಿಲಿನಲ್ಲಿ 3 ಕಿಲೋಮೀಟರ್ ನಡೆದುಕೊಂಡು ಬ್ಯಾಂಕ್‌ಗೆ ಬಂದಿರುವ ಘಟನೆ ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ.
ಒಡಿಶಾದ ಕಿಯೋಂಜರ್ ಜಿಲ್ಲೆಯ ದಿಯಾನಾಲಿ ಗ್ರಾಮದ ನಿವಾಸಿ ಜಿತು ಮುಂಡಾ ಎಂಬವರ ಅಕ್ಕನಾದ ಕಾಕ್ರಾ ಮುಂಡಾ ಎರಡು ತಿಂಗಳ ಹಿಂದೆ ನಿಧನರಾಗಿದ್ದರು. ಆಕೆಯ ಪತಿ ಮತ್ತು ಮಗು ಾದಕ್ಕೂ ಮೊದಲೇ ಮೃತಪಟ್ಟಿದ್ದರಿಂದ, ಜಿತು ಅವರೇ ಅಕ್ಕನ ಏಕೈಕ ವಾರಸುದಾರರಾಗಿದ್ದರು. ಮಲ್ಲಿಪಾಸಿಯ ಒಡಿಶಾ ಗ್ರಾಮೀಣ ಬ್ಯಾಂಕ್‌ನಲ್ಲಿ ಕಾಕ್ರಾ ಅವರ ಖಾತೆಯಿದ್ದು, ಅದರಲ್ಲಿ ₹19,300 ಹಣವಿತ್ತು.

ತನ್ನ ಅಕ್ಕನ ಖಾತೆಯಲ್ಲಿದ್ದ ಹಣವನ್ನು ವಿತ್‌ಡ್ರಾ ಮಾಡಲು ಜಿತು ಬ್ಯಾಂಕ್‌ಗೆ ಹೋದಾಗ, ಮ್ಯಾನೇಜರ್ ಹಣ ನೀಡಲು ನಿರಾಕರಿಸಿದ್ದರು. “ಹಣ ಬೇಕಿದ್ದರೆ ಖಾತೆದಾರರು ಖುದ್ದಾಗಿ ಬರಬೇಕು ಅಥವಾ ಕಾನೂನುಬದ್ಧ ವಾರಸುದಾರರ ದಾಖಲೆಗಳನ್ನು (Succession Certificate) ಸಲ್ಲಿಸಬೇಕು” ಎಂದು ನಿಯಮ ಪಾಲನೆಗೆ ಪಟ್ಟು ಹಿಡಿದಿದ್ದರು. ಅನಕ್ಷರಸ್ಥ ಬುಡಕಟ್ಟು ವ್ಯಕ್ತಿಯಾಗಿದ್ದ ಜಿತುಗೆ ಮರಣ ಪ್ರಮಾಣಪತ್ರವಾಗಲಿ ಅಥವಾ ಕಾನೂನು ದಾಖಲೆಗಳ ಬಗ್ಗೆಯಾಗಲಿ ಯಾವುದೇ ಅರಿವಿರಲಿಲ್ಲ.
ಮಸಣದಿಂದ ಅಸ್ಥಿ ತೆಗೆದ ತಮ್ಮ:
ಹಲವು ಬಾರಿ ಅಲೆದಾಡಿ ಸುಸ್ತಾದ ಜಿತು, ಕೊನೆಗೆ ಸೋಮವಾರ ಗ್ರಾಮದ ಸ್ಮಶಾನಕ್ಕೆ ಹೋಗಿದ್ದಾರೆ. ಅಲ್ಲಿ ಹೂತುಹಾಕಿದ್ದ ಅಕ್ಕನ ಅಸ್ಥಿಪಂಜರವನ್ನು ಅಗೆದು ತೆಗೆದು, ಬಟ್ಟೆಯಲ್ಲಿ ಸುತ್ತಿಕೊಂಡು ಸುಡುವ ಬಿಸಿಲಿನಲ್ಲಿ 3 ಕಿ.ಮೀ ನಡೆದುಕೊಂಡು ಬ್ಯಾಂಕ್‌ಗೆ ತಲುಪಿದ್ದಾರೆ.

ಸ್ಥಳೀಯರ ಆಕ್ರೋಶ:
ಬ್ಯಾಂಕ್ ಮುಂಭಾಗ ಈ ದೃಶ್ಯ ಕಂಡ ಸ್ಥಳೀಯರು ಸ್ತಬ್ಧರಾಗಿದ್ದಾರೆ. ಕೆಲವರು ಕಣ್ಣೀರು ಹಾಕಿದರೆ, ಇನ್ನೂ ಕೆಲವರು ಬ್ಯಾಂಕ್ ಅಧಿಕಾರಿಗಳ ಮನುಷ್ಯತ್ವವಿಲ್ಲದ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಒಬ್ಬ ಬಡವನಿಗೆ ತನ್ನದೇ ಹಣ ಪಡೆಯಲು ಇಷ್ಟೊಂದು ಕಷ್ಟವೇ? ಬ್ಯಾಂಕ್ ಅಧಿಕಾರಿಗಳು ಸ್ಥಳೀಯ ಸರಪಂಚರ ಬಳಿ ವಿಚಾರಿಸಿ ಅಥವಾ ಸ್ಥಳಕ್ಕೆ ಭೇಟಿ ನೀಡಿ ಖಚಿತಪಡಿಸಿಕೊಳ್ಳಬಹುದಿತ್ತು. ಮಾನವೀಯತೆಗಿಂತ ಕಾಗದದ ದಾಖಲೆಗಳೇ ಮುಖ್ಯವಾಯಿತೇ?” ಎಂದು ಜನರು ಪ್ರಶ್ನಿಸಿದ್ದಾರೆ.
ಪೊಲೀಸರ ಮಧ್ಯಪ್ರವೇಶ:
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಜಿತು ಮುಂಡಾ ಅವರನ್ನು ಸಮಾಧಾನಪಡಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಈ ಪ್ರಕರಣವನ್ನು ಮಾನವೀಯತೆಯ ಆಧಾರದ ಮೇಲೆ ಪರಿಹರಿಸಲಾಗುವುದು ಎಂದು ಭರವಸೆ ನೀಡಿದ ಪೊಲೀಸರು, ಈ ಬಗ್ಗೆ ಬ್ಯಾಂಕ್‌ನಿಂದ ಸ್ಪಷ್ಟನೆ ಕೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ