LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬರಗಾಲ ಪರಿಹಾರ ನೀಡಿದ ಮೋದಿ ಸರ್ಕಾರ, ಕಾಂಗ್ರೆಸ್ ಸರ್ಕಾರ ತನ್ನ ಪಾಲಿನ ಡಬಲ್ ಪರಿಹಾರ ನೀಡಲಿ: ಆರ್.ಅಶೋಕ ಆಗ್ರಹ

ಬೆಂಗಳೂರು : ಬರಗಾಲದಿಂದ ಬಳಲಿದ ರಾಜ್ಯದ ಜನತೆಗೆ 3,454 ಕೋಟಿ ರೂ. ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನೀಡಿದ್ದು, ಇದರಲ್ಲಿ ಕಾಂಗ್ರೆಸ್ ಸರ್ಕಾರದ ಯಾವುದೇ ಪಾತ್ರವಿಲ್ಲ. ಈಗ ರಾಜ್ಯ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರ ನೀಡಿದಂತೆಯೇ ಡಬಲ್ ಪರಿಹಾರ ನೀಡಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.

ಮಲ್ಲೇಶ್ವರದ ಬಿಜೆಪಿ ‌ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಜಾನೆ ಖಾಲಿಯಾಗಿರುವುದರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರದ ಬಳಿ ಹಣವಿಲ್ಲ ಎಂಬುದು ಜಗಜ್ಜಾಹೀರಾಗಿದೆ. ಬರಗಾಲದ ಪರಿಹಾರಕ್ಕಾಗಿ ಸರಿಯಾದ ಮಾಹಿತಿ ನೀಡಲು ಕೂಡ ಸರ್ಕಾರ ವಿಳಂಬ ಮಾಡಿತ್ತು. ಕೋರ್ಟ್ ಆದೇಶವಾಗಿದ್ದರೆ ಕರ್ನಾಟಕಕ್ಕೆ ಮಾತ್ರ ಪರಿಹಾರ ಬರಬೇಕಿತ್ತು. ಆದರೆ ಕೇಂದ್ರ ಸರ್ಕಾರವೇ ಕ್ರಮ ವಹಿಸಿ ಪರಿಹಾರ ನೀಡಿದೆ‌‌. ಇದರಲ್ಲಿ ಕಾಂಗ್ರೆಸ್ ನ ಶ್ರಮ ಏನೂ ಇಲ್ಲ. ಚುನಾವಣಾ ಆಯೋಗ ಅನುಮತಿ ನೀಡಿರುವುದರಿಂದ ಮಾತ್ರ ಹಣ ಬಿಡುಗಡೆಯಾಗಿದೆ ಎಂದರು.

ಕಾಂಗ್ರೆಸ್ ಸರ್ಕಾರ ಬರಗಾಲದ ಪರಿಹಾರದ ಹಣವನ್ನು ಲೂಟಿ ಮಾಡಬಾರದು. ಇದರಲ್ಲೂ ಕೈ ಚಳಕ ಮಾಡಿ ದುಡ್ಡು ಹೊಡೆಯದಂತೆ ನಾವು ಕಾವಲು ಕಾಯುತ್ತೇವೆ‌. ಬರದಿಂದ ನೊಂದ ರೈತರ ಖಾತೆಗೆ ನೇರವಾಗಿ ಪರಿಹಾರ ನೀಡಬೇಕು. ಈವರೆಗೆ ಬರ ಪರಿಹಾರ ಬಂದಿಲ್ಲ ಎಂದು ಕಾಂಗ್ರೆಸ್ ಹೇಳುತ್ತಿತ್ತು. ಹಿಂದಿನ ಬಿಜೆಪಿ ಸರ್ಕಾರ ದುಪ್ಪಟ್ಟು ಪ್ರವಾಹ ಪರಿಹಾರ ನೀಡಿತ್ತು. ಈಗಲೂ ಸರ್ಕಾರ ತನ್ನ ಕಡೆಯಿಂದ ಡಬಲ್ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ಸರ್ಕಾರಕ್ಕೆ ಪರಿಹಾರದ ಬಗ್ಗೆ ಸಾಮಾನ್ಯ ಪ್ರಜ್ಞೆ ಹಾಗೂ ತಿಳಿವಳಿಕೆ ಇಲ್ಲ. ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಎಷ್ಟು ಹಣ ಬಿಡುಗಡೆ ಮಾಡಿತ್ತು ಎಂದು ತಿಳಿಸಲಿ‌. ಯಡಿಯೂರಪ್ಪ ಸಿಎಂ ಆಗಿದ್ದಾಗ ಕೇಂದ್ರದಲ್ಲಿ ಮನಮೋಹನ್ ಸಿಂಗ್ ಸರ್ಕಾರವೇ ಇತ್ತು‌‌. ಆಗಿನ ಪರಿಹಾರಕ್ಕೂ ಈಗ ನೀಡಿರುವ ಪರಿಹಾರಕ್ಕೂ ಜನರೇ ಹೋಲಿಕೆ ಮಾಡಲಿ‌‌. ವಿದ್ಯುತ್ ದರ, ಮಾರ್ಗಸೂಚಿ ದರ, ದತ್ತು ಪಡೆಯಲು ದರ ಹೀಗೆ ಎಲ್ಲದರಲ್ಲೂ ಸರ್ಕಾರ ದರ ಏರಿಕೆ ಮಾಡಿದೆ ಎಂದು ದೂರಿದರು.

ಮುಸ್ಲಿಂ ಓಲೈಕೆ

ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಕಾಂಗ್ರೆಸ್ ಸರ್ಕಾರ ಮುಸ್ಲಿಮರಿಗೆ ನೀಡಿ ಓಲೈಕೆ ರಾಜಕಾರಣ ಮಾಡಿದೆ. ಮುಸ್ಲಿಮರು ಹಲ್ಲೆ ಮಾಡಿದರೆ, ಪಾಕಿಸ್ತಾನ ಜಿಂದಾಬಾದ್ ಎಂದರೆ ಕ್ರಮ ಕೈಗೊಳ್ಳುವುದಿಲ್ಲ. ದೇಶದ ಸಂಪತ್ತಿನ ಹಕ್ಕು ಮುಸ್ಲಿಮರಿಗಿದೆ ಎಂದು ಮನಮೋಹನ್ ಸಿಂಗ್ ಹೇಳಿದ್ದರು. ಆದ್ದರಿಂದ ಹಿಂದುಳಿದ ವರ್ಗಗಳ ಮತ ಕೇಳುವ ನೈತಿಕತೆ ಕಾಂಗ್ರೆಸ್ ಗೆ ಇಲ್ಲ. ಅಂಬೇಡ್ಕರ್ ಬರೆದ ಸಂವಿಧಾನದಲ್ಲಿ ಧರ್ಮಾಧಾರಿತ ಮೀಸಲು ನೀಡಬಾರದು ಎಂದು ಹೇಳಲಾಗಿದೆ. ಆದರೆ ಇದನ್ನು ಮೀರಿ ಕಾಂಗ್ರೆಸ್ ಮೀಸಲು ನೀಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಡಿಬಿಟಿ ಮೂಲಕವೇ ನೀಡಿ

ರಾಜ್ಯ ಸರ್ಕಾರ ದುಡ್ಡು ಹೊಡೆಯಲು ಚೆಕ್ ಮೂಲಕ ಪರಿಹಾರ ನೀಡಬಾರದು‌. ಡಿಬಿಟಿ ಮೂಲಕವೇ ನೇರವಾಗಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಧರ್ಮ-ಜಾತಿ ಹೆಸರಲ್ಲಿ ಸಮಾಜ ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ : ಸಿ.ಎಂ.ಸಿದ್ದರಾಮಯ್ಯಅನಾಥ ಯುವತಿಗೆ ಧಾರೆಯೆರೆದ ಉಡುಪಿ ಜಿಲ್ಲಾಧಿಕಾರಿ..!ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ 1,130 ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಬೆಳ್ಳಂ ಬೆಳಿಗ್ಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಿಸಿಬಿ ಅಧಿಕಾರಿಗಳ ದಾಳಿಹಂಸರಾಜ್ ಭಾರದ್ವಾಜ್ ಮಾಡಿದ್ರೆ ತಪ್ಪಲ್ಲ, ದಲಿತ ರಾಜ್ಯಪಾಲ ಗೆಹ್ಲೋಟ್ ಮಾಡಿದ್ರೆ ತಪ್ಪಾ - ಸುನಿಲ್ ಕುಮಾರ್ ಪ್ರಶ್ನೆ ಎಲ್ಲಾ ಮಾದರಿಯ ಕ್ರಿಕೆಟ್ ಗೆ ಸ್ಟಾರ್‌ ಕ್ರಿಕೆಟಿಗ ಶಿಖರ್‌ಧವನ್‌ ನಿವೃತ್ತಿ ಘೋಷಣೆಮಂಗಳೂರಿನಲ್ಲಿ ಭಯಾನಕ ಗ್ಯಾಂಗ್ ರೇಪ್: ಅನ್ಯಕೋಮಿನ ಮೂವರು ಯುವಕರಿಂದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ..!ರುಚಿಕರವಾದ ಸೋರೆಕಾಯಿ ಪಾಯಸ ಮಾಡುವ ವಿಧಾನಕಿವಿ ಹಣ್ಣಿನ ವಿಶೇಷ ಗುಣಗಳು ನಮ್ಮ ಆರೋಗ್ಯಕ್ಕೆ ಹೇಗೆ ಸಹಾಯಕ ಗೊತ್ತೇ?ಮನೆಯಲ್ಲಿ ಪ್ರತಿಯೊಂದು ಸಣ್ಣ ಸಣ್ಣ ವಿಚಾರಕ್ಕೂ ಕೂಡ ಜಗಳ ಆಗುತ್ತಾ ಇದ್ದರೆ ಈ ರೀತಿಯ ಪರಿಹಾರ ಕ್ರಮವನ್ನ ಅನುಸರಿಸಿ.