LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಿಜೆಪಿ ಜೆಡಿಎಸ್ ಧರಣಿ ಬಗ್ಗೆ ಸ್ಪೀಕರ್ ಯುಟಿ ಖಾದರ್ ಖಡಕ್ ಸಂದೇಶ

ಬೆಂಗಳೂರು: ಮುಡಾ ಹಗರಣ ಸಂಬಂಧ ಚರ್ಚೆಗೆ ಅವಕಾಶ ನೀಡಬೇಕೆಂದು ಕೋರಿ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ವಿಧಾನಸಭೆಯಲ್ಲಿ ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ ಬಗ್ಗೆ ಸ್ಪೀಕರ್ ಯುಟಿ ಖಾದರ್ ಗುರುವಾರ ಮೌನಮುರಿದಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಸದನದ ನಿಯಮಾವಳಿ ಪ್ರಕಾರವೇ ಕಲಾಪ ನಡೆಸುತ್ತೇನೆ. ಸ್ಪೀಕರ್ ಆಗಿ ಕೆಟ್ಟ ಸಂಪ್ರದಾಯ ಮುಂದುವರಿಸಲ್ಲ ಎಂದು ಹೇಳಿದರು. ಆಡಳಿತ ಹಾಗೂ ವಿಪಕ್ಷದವರ ಎಲ್ಲಾ ಚರ್ಚೆಗೆ ಅವಕಾಶ ನೀಡಿದ್ದೇವೆ. ತನಿಖೆ ನಡೆಯುತ್ತಿರುವಾಗಲೇ ವಾಲ್ಮೀಕಿ ನಿಗಮ ಹಗರಣದ ಚರ್ಚೆ ನಡೆದಿದೆ. ಆ ಚರ್ಚೆಯಲ್ಲೇ ಸುಮಾರು ನಾಲ್ಕೈದು ದಿನ ಮುಗಿದು ಹೋಯಿತು. ಈಗ ಮುಡಾ ಪ್ರಕರಣದ ವಿಚಾರವಾಗಿ ಚರ್ಚೆಗೆ ಅವಕಾಶ ಕೇಳಿದ್ದಾರೆ. ಆದರೆ, ಇನ್ನೂ ಮಸೂದೆಗಳ ಮಂಡನೆ ಬಾಕಿ ಇವೆ. ಹೀಗೆಯೇ ಮುಂದುವರಿದರೆ ಕಷ್ಟವಾಗುತ್ತದೆ. ಸ್ಪೀಕರ್ ಆಗಿ ಕೆಟ್ಟ ಸಂಪ್ರದಾಯ ಮುಂದುವರಿಸಲ್ಲ. ನಿಯಮಗಳ ವಿರುದ್ಧ ನಾವು ನಡೆದುಕೊಳ್ಳಲ್ಲ ಎಂದು ಅವರು ಹೇಳಿದರು.​ಆರೋಪ ಪ್ರತ್ಯಾರೋಪ ಸಹಜ. ಆದರೆ, ಅಜೆಂಡಾ ಪ್ರಕಾರ ಸದನ ನಡೆಯಲಿದೆ ಎಂದು ಅವರು ಹೇಳಿದರು. ಮುಡಾ ಕುರಿತ ಚರ್ಚೆಗೆ ಪಟ್ಟು ಹಿಡಿದಿರುವ ಬಿಜೆಪಿ, ಜೆಡಿಎಸ್ ಶಾಸಕರು ಅಹೋರಾತ್ರಿ ಧರಣಿ ಮಾಡಿ ಗಮನ ಸೆಳೆದಿದ್ದಾರೆ.

 

ಚರ್ಚೆಗೆ ಅವಕಾಶ ನೀಡುವವರೆಗೂ ಧರಣಿ: ಅಶ್ವತ್ಥ್ ನಾರಾಯಣ
ಮುಡಾ ಹಗರಣ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು. ಸರ್ಕಾರ ಚರ್ಚೆಗೆ ಅವಕಾಶ ನೀಡುವವರೆಗೂ ಧರಣಿ ಮುಂದುವರಿಯಲಿದೆ. ಸದನ ಮುಕ್ತಾಯವಾಗುವವರೆಗೂ ಅಹೋರಾತ್ರಿ ಧರಣಿ ಮುಂದುವರಿಯಲಿದೆ ಎಂದು ವಿಧಾನಸೌಧದಲ್ಲಿ ಶಾಸಕ ಡಾ. ಅಶ್ವತ್ಥ್ ನಾರಾಯಣ ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳ; ವಿದ್ಯಾರ್ಥಿ ಸಾವುಮಹಾಕುಂಭಮೇಳ ಮಾಘೀ ಪೂರ್ಣಿಮೆಗೆ 'ವಾಹನ ರಹಿತ ವಲಯ' ವಿಶೇಷ ಸಂಚಾರ ಯೋಜನೆದ್ವಿತೀಯ ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ: ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಕೃಷಿಗೂ ಬಂತು AI ತಂತ್ರಜ್ಞಾನ- ಬೆಳೆ ನಿರ್ವಹಣೆಗೆ ಬಗ್ಗೆ ನೀಡಲಿದೆ ಮಾಹಿತಿಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರ ಬಂಧನಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್: ಠಾಣೆಗೆ ಕಲ್ಲು ತೂರಾಟ, ಲಾಠಿಚಾರ್ಜ್ – ಓರ್ವನ ಬಂಧನಮೊಡವೆ ಕಾಟ ನಿವಾರಿಸಲು ಬಾಳೆಹಣ್ಣು ಸಿಪ್ಪೆಯನ್ನು ಹೀಗೆ ಬಳಸಿ..!ಆಧಾರ್‌ ಇದ್ರೆ ಸಾಕು 50,000 ರೂ.ಗಳವರೆಗೆ ತ್ವರಿತ ಸಾಲರಾಜ್ಯದಲ್ಲಿ ಭರ್ಜರಿ ಉದ್ಯೋಗ: 40,000 ರೂ. ವೇತನದೆಹಲಿ : ಚುನಾವಣೆಯಲ್ಲಿ ಸೋಲು, INDIA blocನಲ್ಲಿ ಬಿರುಕು ವದಂತಿ…!