LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೆಂಗಳೂರು: ಬಿ ಫಾರಂ ಬರೆಯೋನು ನಾನು, ಸಹಿ ಹಾಕೋನು ನಾನು, ಕ್ಯಾಂಡಿಡೇಟು ನಾನು..!

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ಕದನದ ಅಖಾಡ ರಂಗು ಪಡೆದುಕೊಳ್ಳುತ್ತಿದೆ. ಮೈತ್ರಿ ನಾಯಕರು ಅಭ್ಯರ್ಥಿ ಆಯ್ಕೆ ಸಂಬಂಧ ದೆಹಲಿಯಲ್ಲಿ ಕೂತು ಸಭೆ ನಡೆಸುತ್ತಿದ್ದರೆ ಡಿಸಿಎಂ ಡಿಕೆಶಿ ಖುದ್ದು ಚನ್ನಪಟ್ಟಣ ಕ್ಷೇತ್ರದಲ್ಲಿ ಹೆಚ್ಚು ಓಡಾಟ ಶುರು ಮಾಡಿದ್ದಾರೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಉದ್ಯೋಗ ಮೇಳ ಸೇರಿದಂತೆ ವಿವಿಧ ಕಾರ್ಯಕ್ರಮ ಹಮ್ಮಿಕೊಂಡು ಆ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ. ದೆಹಲಿ ಮೈತ್ರಿ ನಾಯಕರು ಅಭ್ಯರ್ಥಿ ಆಯ್ಕೆ ಕುರಿತು ಸಭೆ ಮಾಡ್ತಿದ್ದಾರೆ. ಕಾಂಗ್ರೆಸ್ ನಿಂದ ಯಾರು ಅಭ್ಯರ್ಥಿ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಡಿಕೆಶಿ ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಎಂದು ಮತ್ತೆ ಹೇಳಿದ್ದಾರೆ. ನಾನೇ ಚನ್ನಪಟ್ಟಣಕ್ಕೆ ಅಭ್ಯರ್ಥಿ. ನಾನು ಬಿ ಫಾರಂ ಬರೆಯೋನು. ಸಹಿ ಹಾಕೋನು ನಾನು. ಕ್ಯಾಂಡಿಡೇಟ್ ನಾನು. ಯಾರೇ ನಿಂತರೂ ನನಗೆ ವೋಟ್ ಹಾಕೋದು..ನಾನು ಇದನ್ನ ಆನ್ ರೆಕಾರ್ಡ್ ನಲ್ಲಿ ಹೇಳ್ತಿದೀನಿ ನಾನೇ ಅಭ್ಯರ್ಥಿ ಎಂದರು.. ಸಿಪಿ ಯೋಗೇಶ್ವರ್ ತಮ್ಮನ್ನ ಸಂಪರ್ಕಿಸಿದ್ದಾರಾ ಅನ್ನೋ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ ನನ್ನನ್ನೂ ಯಾರು ಸಂಪರ್ಕ ಮಾಡಿಲ್ಲ. ಅವರು ಈಗಾಗಲೇ ಮೈತ್ರಿ ಪಕ್ಷದಲ್ಲಿ ಇದ್ದಾರೆ. ನಾನು ಅವರ ಪಕ್ಷದ ಬಗ್ಗೆ ಮಾತನಾಡಲ್ಲ ಎಂದರು.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಲ್ಲಂಗಡಿ ಬೀಜದಲ್ಲಿ ಆರೋಗ್ಯ ಪ್ರಯೋಜನಗಳು ಅಡಗಿದೆ- ಬೀಜಗಳನ್ನ ಎಸೆಯುವ ಮುನ್ನ ಅದರ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳಿ!!ವಚನ—ಕಲಕೇತಯ್ಯ !'ಕನ್ನಡಿಗರ ಋಣ ತೀರಿಸಲು ನಿರ್ಮಲಾ ಸೀತಾರಾಮನ್ ವಿಶೇಷ ಪ್ಯಾಕೇಜ್ ಘೋಷಿಸಲಿ'- ಪ್ರಿಯಾಂಕ್ ಖರ್ಗೆಅಮೆರಿಕದಲ್ಲಿ ಮನೆಗಳ ಮೇಲೆ ವಿಮಾನ ಪತನರೈಲ್ವೆ ನಿಲ್ದಾಣದೊಳಗೆ ನುಗ್ಗಿದ ಕಾರು - ತಪ್ಪಿದ ಭಾರೀ ಅನಾಹುತ'ಮಧ್ಯಮವರ್ಗದವರಿಗೆ ಸ್ನೇಹಪೂರಿತ ಬಜೆಟ್' - ಪ್ರಧಾನಿ ಮೋದಿಕಾರ್ಮಿಕರಿಗೆ ಗುಡ್‌ ನ್ಯೂಸ್‌: ಮದುವೆಗೆ ಸಿಗಲಿದೆ 60,000 ರೂ.ಸಹಾಯಧನರೇಷನ್‌ ಕಾರ್ಡ್‌ ಹೊಂದಿರುವವರಿಗೆ ಸರ್ಕಾರದಿಂದ ಭಾರೀ ಸೌಲಭ್ಯಗಳುಪತಂಜಲಿ ಬಾಬಾ ರಾಮ್‌ದೇವ್‌ ವಿರುದ್ದ ಜಾಮೀನು ರಹಿತ ಬಂಧನ ವಾರಂಟ್‌!!ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ವೃದ್ಧಿಮಾನ್ ಸಾಹಾ