LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೆಂಗಳೂರು : ಸ್ಯಾಂಡಲ್‌ವುಡ್‌ನಲ್ಲಿ ಮತ್ತೆ 'ಮೀಟೂ' ಸೌಂಡ್? : ತನಿಖೆಗೆ 153 ಜನರ ಮನವಿ

ಬೆಂಗಳೂರು : ಹಲವು ವರ್ಷಗಳ ಹಿಂದೆ ಸುದ್ದಿ ಆಗಿದ್ದ ಮೀಟೂ ವಿಷಯ ಈಗ ಮತ್ತೆ ಸದ್ದು ಮಾಡುತ್ತಿದೆ.. ಬೇರೆ ಬೇರೆ ಭಾಷೆಯ ಚಿತ್ರರಂಗದ ಹಲವು ನಟಿಯರು ತಮಗೆ ಆಗಿರುವ ಲೈಂಗಿಕ ದೌರ್ಜನ್ಯಗಳ ಬಗ್ಗೆ ಆರೋಪಿಸುತ್ತಿದ್ದಾರೆ.. ಹೇಮಾ ಕಮಿಟಿ ರಿಪೋರ್ಟ್​ ಪ್ರಕಟ ಆದ ಬಳಿಕ ತೆಲುಗು, ಕನ್ನಡ ಮುಂತಾದ ಚಿತ್ರರಂಗದಲ್ಲೂ ತನಿಖೆಗೆ ಒತ್ತಾಯ ಕೇಳಿಬಂದಿದೆ.

ಫೈರ್​ (ಫಿಲ್ಮ್​ ಇಂಡಸ್ಟ್ರೀ ಫಾರ್​ ರೈಟ್ಸ್​ ಆ್ಯಂಡ್​ ಇಕ್ವಾಲಿಡಿ) ಸಂಸ್ಥೆಯ ಮೂಲಕ 153 ಜನರು ಕನ್ನಡ ಚಿತ್ರರಂಗದಲ್ಲಿಯೂ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಭೇಟಿಯಾದ FIRE ಸಂಘಟನೆ ಕೇರಳ ಮಾದರಿ ತನಿಖೆಗೆ ಆಗ್ರಹಿಸಿದೆ. ಮೀಟೂ ವಿವಾದದ ಬಳಿಕ ಮಹಿಳೆಯರ ಸಮಸ್ಯೆಗಳ ಪರಿಹಾರಕ್ಕಾಗಿ ಈ ಹಿಂದೆ ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ FIRE ರಚನೆ ಮಾಡಲಾಗಿತ್ತು. ಇದರಲ್ಲಿ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ, ನಿರ್ದೇಶಕರಾದ ಕವಿತಾ ಲಂಕೇಶ್, ಪ್ರಿಯಾಂಕಾ ಉಪೇಂದ್ರ ಸೇರಿದಂತೆ ಸಾಕಷ್ಟು ನಟಿಯರು ಸದಸ್ಯರಾಗಿದ್ದರು. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡ ನಟ ಚೇತನ್ ‘ ಫೈರ್ - ಫಿಲಂ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಈಕ್ವಾಲಿಟಿ – 2017 ರಿಂದ ಲಿಂಗ-ಸಮಾನತೆಯ ಕನ್ನಡ ಚಲನಚಿತ್ರೋದ್ಯಮವನ್ನು ನಿರ್ಮಿಸಲು ಕೆಲಸ ಮಾಡಿದೆ. ಕನ್ನಡ ಚಲನಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಕಿರುಕುಳ ಸೇರಿದಂತೆ ಸಮಸ್ಯೆಗಳ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡುವ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಕರ್ನಾಟಕ ಸರ್ಕಾರವು ಸಮಿತಿಯನ್ನು ರಚಿಸಬೇಕೆಂದು ಒತ್ತಾಯಿಸುವ ನಮ್ಮ ಫೈರ್ ಅರ್ಜಿಗೆ ಇಂದು ಲಿಂಗ ನ್ಯಾಯದ 153 ಪ್ರತಿಪಾದಕರು ಸಹಿ ಹಾಕಿದ್ದಾರೆ ಎಂದು ಹೇಳಿದ್ದಾರೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾರು ನಿಯಂತ್ರಣ ತಪ್ಪಿ ಕೊಳಕ್ಕೆ ಬಿದ್ದು ಇಬ್ಬರು ಹೈಕೋರ್ಟ್ ವಕೀಲರು ಸಾವು.!'ಮಧ್ಯಮ ವರ್ಗವು ಯಾವಾಗಲೂ ಪ್ರಧಾನಿ ಮೋದಿಯವರ ಹೃದಯದಲ್ಲಿದ್ದಾರೆ'- ಅಮಿತ್‌ ಶಾಐಎಎಸ್ ಸಂಜೀತಾ ಮೋಹಪಾತ್ರ ಯಶಸ್ಸಿನ ಪಯಣದ ಕಥನಬ್ಲಾಕ್‌ ಟೀ, ಬ್ಲಾಕ್‌ ಕಾಫಿ ಆರೋಗ್ಯಕ್ಕೆ ಉತ್ತಮ ಯಾವುದು..?ಬೆಳಿಗ್ಗೆ ಎದ್ದ ತಕ್ಷಣ ಏನನ್ನು ನೋಡಬೇಕು, ಏನನ್ನು ನೋಡಬಾರದು?ವಚನ-ಮನಸಂದ ಮಾರಿತಂದೆ !ಶಿಕ್ಷಣ ವೃತ್ತಿ ಬಿಟ್ಟು ಬೇರೆ ವ್ಯವಹಾರ ತೊಡಗಿದ ಶಿಕ್ಷಕರಿಗೆ ಶಿಸ್ತು ಕ್ರಮ.!ನಿಮ್ಮ ಮನೆಯಲ್ಲಿ ನಿಮ್ಮ ಪತಿ ಅಥವಾ ಪತ್ನಿ ನೀವು ಹೇಳಿದ ಮಾತು ಕೇಳುತ್ತಿಲ್ವಾ ಈ ಒಂದು ಕಡ್ಡಿಯಿಂದ ಹೀಗೆ ಮಾಡಿ ಸಾಕು ಆಮೇಲೆ ನೀವು ಹೇಳಿದ್ದನ್ನು ಎಲ್ಲವನ್ನು ಕೂಡ ಕೇಳುತ್ತಾರೆ .!ಕೇಂದ್ರ ಬಜೆಟ್‌ ಬಗ್ಗೆ ರಾಹುಲ್‌ ಗಾಂಧಿ ಪ್ರತಿಕ್ರಿಯೆ!ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆ