ಬೆಳ್ತಂಗಡಿ: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ಐತಿಹಾಸಿಕ ಪ್ರವಾಸಿ ತಾಣ ಗಡಾಯಿಕಲ್ಲಿಗೆ ಚಾರಣ ತೆರಳುವುದನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.
https://bcsuddi.com/%e0%b2%b0%e0%b2%be%e0%b2%9c%e0%b3%8d%e0%b2%af-%e0%b2%ac%e0%b2%9c%e0%b3%86%e0%b2%9f%e0%b3%8d-2023-%e0%b2%85%e0%b2%b2%e0%b3%8d%e0%b2%aa%e0%b2%b8%e0%b2%82%e0%b2%96%e0%b3%8d%e0%b2%af%e0%b2%be/
ಧಾರಾಕಾರ ಮಳೆಯಿಂದಾಗಿ ಬಂಡೆಯಲ್ಲಿ ನೀರು ಹರಿಯುತ್ತಿದ್ದು, ಮೆಟ್ಟಿಲುಗಳಲ್ಲಿ ಪಾಚಿ ಬೆಳೆದು ಜಾರುವ ಅಪಾಯ ಇರುವುದರಿಂದ ಜು.7ರಿಂದ ಮುಂದಿನ ಆದೇಶದ ತನಕ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ವನ್ಯಜೀವಿ ವಿಭಾಗದ ಬೆಳ್ತಂಗಡಿ ವಲಯಾರಣ್ಯಧಿಕಾರಿ ಸ್ವಾತಿ ಅವರು ತಿಳಿಸಿದ್ದಾರೆ.