ಬೈಂದೂರು: ಮೆಸ್ಕಾಂ ಲೈನ್ ಮ್ಯಾನ್ ಲೋಕಾಯುಕ್ತ ಬಲೆಗೆ
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಲೋಕಾಯುಕ್ತ ಕಾರ್ಯಾಚರಣೆ ನಡೆದಿದ್ದು, ಬೈಂದೂರು ಮೆಸ್ಕಾಂ ಲೈನ್ ಮ್ಯಾನ್ ರಮೇಶ್ ಬಡಿಗೇರ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತ 2,000 ರುಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ವಿದ್ಯುತ್ ಕಂಬದ ಲೈನ್ ನಿಷ್ಕ್ರಿಯಗೊಳಿಸಲು ರಮೇಶ್ ಲಂಚ ಸ್ವೀಕರಿಸುತ್ತಿದ್ದ. ಮರ ಕಡಿಯುವ ಸಂದರ್ಭ ಲೈನ್ ಕಟ್ ಮಾಡಿಕೊಡುವಂತೆ ಕುಸುಮಾ ಎಂಬವರು ಮನವಿ ಮಾಡಿದ್ದರು. ಅವರಿಂದ ಲಂಚ ಪಡೆಯುತ್ತಿದ್ದಾಗ ಡಿವೈಎಸ್ ಪಿ ಪ್ರಕಾಶ್, ಇನ್ಸ್ ಪೆಕ್ಟರ್ ಜಯರಾಮ್ ಗೌಡ ಅವರ ತಂಡ ಕಾರ್ಯಾಚರಣೆ ನಡೆಸಿ ಆತನನ್ನು ವಶಕ್ಕೆ ಪಡೆದಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.