LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭತ್ತದ ಕಾಂಡ ಕೊರೆಯುವ ಕೀಟ ನಿರ್ವಹಣೆಗೆ ಹೊಸ ಮಾರ್ಗ



ಬಳ್ಳಾರಿ – ಜಾಗತಿಕ ಉದ್ಯಮವಾಗಿರುವ ಬಾಯರ್ (Bayer), ಕೃಷಿ ಮತ್ತು ಆರೋಗ್ಯ ರಕ್ಷಣೆಯ ಜೀವ ವಿಜ್ಞಾನ ಕ್ಷೇತ್ರಗಳಲ್ಲಿ ಪ್ರಮುಖ ಸಾಮರ್ಥ್ಯಗಳನ್ನು ಹೊಂದಿದ್ದು, ಭತ್ತದ ಬೆಳೆಗಾರರು ಕಾಂಡ ಕೊರೆಯುವ ಕೀಟಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಂತಾಗಲು ವಿನ್ಯಾಸಗೊಳಿಸಲಾದ ಬಿಕೋಟಾ (BICOTA) ಎಂಬ ಹೊಸ ಉತ್ಪನ್ನವನ್ನು ಬಿಡುಗಡೆ ಮಾಡಿರುವುದಾಗಿ ಘೋಷಿಸಿದೆ. ಬಾಯರ್ ಸಂಸ್ಥೆಯ ವಿಶೇಷ ನಾವೀನ್ಯದ ಸಂಯೋಜನೆಯಲ್ಲಿ ಈ ಉತ್ಪನ್ನವು ಹಾನಿಕಾರಕ ಕೀಟಗಳ ವಿರುದ್ಧ ಬಲವಾದ ರಕ್ಷಣೆ ನೀಡುತ್ತದೆ. ಭತ್ತ ಬೆಳೆಯುವ ಪ್ರಮುಖ ರಾಜ್ಯಗಳಾದ ಪಂಜಾಬ್, ಹರಿಯಾಣ, ಉತ್ತರಾಖಂಡ, ಉತ್ತರ ಪ್ರದೇಶದ ಪಶ್ಚಿಮ ಭಾಗ, ಪಶ್ಚಿಮ ಬಂಗಾಳ, ಛತ್ತೀಸ್‌ಗಢ, ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಬಿಕೋಟಾ ಉತ್ಪನ್ನ ಜೂನ್ 2025ರಿಂದ ಲಭ್ಯವಿರಲಿದೆ.



ಕಾಂಡಕೊರಕ ಕೀಟಗಳು ಭತ್ತದ ಬೇಸಾಯದಲ್ಲಿ ಗಮನಾರ್ಹ ಹಾನಿಗೆ ಕಾರಣವಾಗಿ, ಇಳುವರಿಯನ್ನು ಕಡಿಮೆ ಮಾಡುತ್ತವೆ. ಈ ಕೀಟಗಳು ಆಹಾರ ಸೇವನೆಯನ್ನು ನಿಲ್ಲಿಸಲು ಬಿಕೋಟಾ (BICOTA) ಕೀಟನಾಶಕವು ತ್ವರಿತವಾಗಿ ಕಾರ್ಯ ನಿರ್ವಹಿಸುತ್ತದೆ ಮತ್ತು ಬೆಳೆಗಳಿಗೆ ದೀರ್ಘಕಾಲ ರಕ್ಷಣೆ ನೀಡುತ್ತದೆ. ಕೇವಲ ಒಂದು ಸಲ ಬೆಳೆಯ ನೆಲದಲ್ಲಿ ಚಲ್ಲಿದರೆ, ಮಾರುಕಟ್ಟೆಯಲ್ಲಿ ಲಭ್ಯವಿರುವ ಇತರ ಕೀಟನಾಶಕಗಳಿಗಿಂತ ದೀರ್ಘಾವಧಿಯವರೆಗೆ ಹೆಚ್ಚಿನ ಹಾಗೂ ಪರಿಣಾಮಕಾರಿ ರಕ್ಷಣೆಯನ್ನು ಒದಗಿಸುತ್ತದೆ. ಜೊತೆಗೆ, ಬೇರು ಮತ್ತು ತೆಂಡೆಗಳ ಬೆಳವಣಿಗೆಯನ್ನೂ ಪ್ರಚೋದಿಸುತ್ತದೆ. ಬೆಳೆಯ ಸಮಗ್ರ ಆರೋಗ್ಯವನ್ನು ಸುಧಾರಿಸುತ್ತದೆ. ಬದಲಾಗುತ್ತಿರುವ ಹವಾಮಾನ ಪರಿಸ್ಥಿತಿಗಳ ನಡುವೆ ಕಾಂಡಕೊರಕ ಕೀಟದ ಬಾಧೆಯನ್ನು ನಿಯಂತ್ರಿಸುವ ಪ್ರಮುಖ ಸವಾಲಿಗೆ ಪರಿಹಾರವಾಗಿ, ಹೆಚ್ಚಿನ ಇಳುವರಿಯನ್ನು ಒದಗಿಸುತ್ತದೆ.



ಮೋಹನ್ ಬಾಬು, ಕ್ಲಸ್ಟರ್ ವಾಣಿಜ್ಯ ಮುಖ್ಯಸ್ಥರು, ಭಾರತ, ಬಾಂಗ್ಲಾದೇಶ & ಶ್ರೀಲಂಕಾ, ಸಸ್ಯ ವಿಜ್ಞಾನ ವಿಭಾಗ, ಬಾಯಾರ್., “ಬಾಯರ್ ತನ್ನ ನಾವೀನ್ಯಗಳ ಮೂಲಕ ರೈತರ ಜೀವನವನ್ನು ಸುಲಭಗೊಳಿಸಲು ಪ್ರಯತ್ನಿಸುತ್ತಿದೆ. ಬಿಕೋಟಾ (BICOTA) ಕೀಟನಾಶಕ ಮೂಲಕ, ಭತ್ತದ ಬೆಳೆಗಾರರು ತಮ್ಮ ಬೆಳೆಯನ್ನು ಪರಿಣಾಮಕಾರಿಯಾಗಿ ರಕ್ಷಿಸಬಹುದು. ಇದು ಸಮಯ ಮತ್ತು ಕಾರ್ಮಿಕರ ವೆಚ್ಚವನ್ನು ಉಳಿಸುತ್ತದೆ. ಇಳುವರಿ ಮತ್ತು ಆದಾಯವನ್ನು ವೃದ್ಧಿಸಲು ಸಹಾಯ ಮಾಡುವ ಭರವಸೆಯನ್ನು ನಾವು ಹೊಂದಿದ್ದೇವೆ” ಎಂದರು. 



ಬಿಕೋಟಾ (BICOTA) ಬಳಸಲು ಮತ್ತು ಪ್ರಯೋಜನಕಾರಿ ಕೀಟಗಳಿಗೆ ಸುರಕ್ಷಿತವಾಗಿದೆ. ಹೀಗಾಗಿ, ಅದು ರೈತರಿಗೆ ಆದರ್ಶ ಆಯ್ಕೆಯಾಗಿದೆ. ಹಾಗೆಯೇ, ಇದು ಸಮಗ್ರ ಕೀಟ ನಿರ್ವಹಣ (IPM) ಕ್ರಮಗಳಿಗೆ ಚೆನ್ನಾಗಿ ಹೊಂದಿಕೊಳ್ಳುತ್ತದೆ. ಹರಳಿನ ರೂಪದ ಇದರ ಸೂತ್ರೀಕರಣವು ಚೆಲ್ಲಲು ಅನುಕೂಲ ಮಾಡಿಕೊಡುತ್ತದೆ. ರೈತರು ತಮ್ಮ ಹೊಲಗಳಲ್ಲಿ ಪೂರ್ಣವಾಗಿ ಮತ್ತು ಬೇಗನೆ ಚೆಲ್ಲಲು ಸುಲಭವಾಗುತ್ತದೆ.



ಉತ್ಪನ್ನದ ಕುರಿತು ಇನ್ನಷ್ಟು ತಿಳಿದುಕೊಳ್ಳಲು, ದಯವಿಟ್ಟು Bayer FarmRise App ಗೆ ಭೇಟಿ ನೀಡಿ. https://go.bayer.com/FarmRise_Bayer_Bicota

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು