LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಭಾರತಕ್ಕೆ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಆಘಾತ, ಕುಸ್ತಿಯಿಂದ ಹೊರಬಿದ್ದ ವಿನೇಶ್ ಫೋಗಟ್‌! ಕಾರಣ ಏನು

Olympics 2024: ಭಾರತದ ಕನಸು ಭಗ್ನವಾಗಿದ್ದು, ಭಾರತಕ್ಕೆ ಒಲಿಂಪಿಕ್ಸ್ ಕ್ರೀಡಾಕೂಟದ ಕುಸ್ತಿ ವಿಭಾಗದಲ್ಲಿ ಚಿನ್ನದ ಪದಕ ಸಿಗಲಿದೆ ಎಂಬ ಕನಸು ಕನಸಾಗಿಯೇ ಉಳಿದಿದೆ. ಚಿನ್ನದ ಪದಕ ಬಿಡಿ ಈಗ ಯಾವುದೇ ಪದಕವನ್ನು ಕೂಡ ಗೆಲ್ಲದೆ ವಿನೇಶ್ ಫೋಗಟ್ ಅನರ್ಹರಾಗಿ ಹೊರ ಬಿದ್ದಿದ್ದಾರೆ. ಹಾಗಾದ್ರೆ ಕುಸ್ತಿಪಟು ವಿನೇಶ್ ಫೋಗಟ್ ಫೈನಲ್ಸ್‌ಗೆ ಆಯ್ಕೆ ಆಗಿದ್ದರೂ ಯಾವುದೇ ಪದಕವು ಸಿಗುತ್ತಿಲ್ಲ ಏಕೆ? ಬನ್ನಿ ತಿಳಿಯೋಣ.

Olympics 2024ರ ಕುಸ್ತಿ ವಿಭಾಗದಲ್ಲಿ ಫೈನಲ್ ಪ್ರವೇಶ ಮಾಡಿದ್ದ ವಿನೇಶ್ ಫೋಗಟ್ ಅವರು, ಭಾರತಕ್ಕೆ ಈ ಬಾರಿ ಚಿನ್ನದ ಪದಕ ಗೆಲ್ಲಿಸಿಕೊಡುವ ಹುಮ್ಮಸ್ಸಿನಲ್ಲಿ ಇದ್ದರು. 50 ಕೆಜಿ ಮಹಿಳಾ ಕುಸ್ತಿ ವಿಭಾಗದಲ್ಲಿ ವಿನೇಶ್ ಫೋಗಟ್ ಫೈನಲ್ಸ್ ಪ್ರವೇಶಿಸಿದ್ದು, ಭಾರತಕ್ಕೆ ಮತ್ತೊಂದು ಪದಕ ಈಗ ಕನ್ಫರ್ಮ್ ಆಗಿತ್ತು. ಆದರೆ ಇದೀಗ ಭೀಕರ ಆಘಾತ ನೀಡುವ ಸುದ್ದಿಯೊಂದು ಹೊರ ಬಿದ್ದಿದ್ದು, ವಿನೇಶ್ ಫೋಗಟ್ ಅವರು ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಿಂದ ಹೊರಗಡೆ ಬಿದ್ದಿದ್ದಾರೆ. ಹಾಗಾದ್ರೆ ದಿಢೀರ್ ವಿನೇಶ್ ಫೋಗಟ್ ಅವರು ಒಲಿಂಪಿಕ್ಸ್ ಕ್ರೀಡಾಕೂಟದಿಂದಲೇ ಹೊರ ಬೀಳಲು ಕಾರಣ ಏನು? ಮುಂದೆ ಓದಿ.

 

ವಿನೇಶ್ ಫೋಗಟ್‌ಗೆ ಭಾರಿ ಆಘಾತ
ಭಾರತದ ಕ್ರೀಡಾಲೋಕಕ್ಕೆ ಇಂದಿನ ದಿನ ಇತಿಹಾಸದಲ್ಲೇ ಮರೆಯಲು ಆಗದು ಎನ್ನಬಹುದು. ಅಂದಹಾಗೆ ಆಗಸ್ಟ್ 6 ಅಂದ್ರೆ ನಿನ್ನೆ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರು ವಿನೇಶ್ ಫೋಗಟ್. ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದಲೇ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ ವಿನೇಶ್ ಫೋಗಟ್ ಈಗ ಸ್ಪರ್ಧೆಯಿಂದಲೇ ಅನರ್ಹ ಆಗಿದ್ದಾರೆ.

 

ಇದಕ್ಕೆಲ್ಲ ಕಾರಣ ಅವರ ತೂಕದಲ್ಲಿ ಏರಿಕೆ ಆಗಿದ್ದು. ಅಂದಹಾಗೆ 50 ಕೆಜಿ ತೂಕ ವಿಭಾಗದ ಮಹಿಳಾ ಕುಸ್ತಿ ವಿಭಾಗದಲ್ಲಿ ಭಾಗವಹಿಸಿದ್ದ ವಿನೇಶ್ ಫೋಗಟ್ ಅವರ ತೂಕವು ಈಗ 100 ಗ್ರಾಂ ಹೆಚ್ಚಿರುವುದು ಕಂಡುಬಂದಿದೆ. ಇದೇ ಕಾರಣಕ್ಕೆ ಫೈನಲ್ ಪಂದ್ಯಕ್ಕೂ ಮುನ್ನ ನಡೆದ ವಿನೇಶ್ ಅವರ ತೂಕ ಪರೀಕ್ಷೆಯಲ್ಲಿ ಅವರ ತೂಕ ನಿಗದಿತ ಮಿತಿಗಿಂತಲೂ ಹೆಚ್ಚಾದ ಕಾರಣಕ್ಕೆ ಅವರನ್ನ ಅನರ್ಹ ಎಂದು ಘೋಷಣೆ ಮಾಡಲಾಗಿದೆ.

 

ಮೇಲ್ಮನವಿ ಸಲ್ಲಿಸುತ್ತಾ ಭಾರತ?
ಒಟ್ನಲ್ಲಿ ಭಾರತಕ್ಕೆ ಮತ್ತೊಮ್ಮೆ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರಿ ದೊಡ್ಡ ಆಘಾತ ಈಗ ಎದುರಾಗಿದೆ. ಅದರಲ್ಲೂ ಭಾರತೀಯ ಕುಸ್ತಿಪಟು ಒಬ್ಬರು ಮೊಟ್ಟಮೊದಲ ಬಾರಿಗೆ ಹೀಗೆ, ಕುಸ್ತಿ ವಿಭಾಗದಲ್ಲಿ ಭರ್ಜರಿ ಗೆಲುವು ಸಾಧಿಸಲಿದ್ದಾರೆ ಎಂಬ ನಿರೀಕ್ಷೆ ಕೂಡ ಹುಸಿಯಾಗಿದೆ. ಮತ್ತೊಂದ್ಕಡೆ ಭಾರತ ಕೂಡ ಈ ಘಟನೆಯನ್ನ ತುಂಬಾ ಆಕ್ರೋಶದಿಂದ ಸ್ವೀಕಾರ ಮಾಡಿದೆ. ಅಲ್ಲದೆ ಈ ಬಗ್ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಕೂಡ ದಟ್ಟವಾಗಿದೆ. ಈ ವಿಚಾರ ಇದೀಗ ಜಾಗತಿಕ ಕ್ರೀಡಾ ಲೋಕದಲ್ಲೂ ಭಾರಿ ದೊಡ್ಡ ಚರ್ಚೆಗೆ ವೇದಿಕೆ ಒದಗಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಲಯಾಳಂನ ಖ್ಯಾತ ನಿರ್ದೇಶಕ ಹೃದಯಾಘಾತದಿಂದ ನಿಧನ.!ಅಮೆರಿಕದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಬಳಿಕ ತವರಿಗೆ ಮರಳಿದ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌76ನೇ ಗಣರಾಜ್ಯೋತ್ಸವ ಸಂಭ್ರಮ; ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ವಾಸ್ತು ಎಂಬ ಶಬ್ದ ಕೇಳಿದಾಗ ಕೆಲವರಿಗೆ ಅಲರ್ಜಿ ಕೆಲವರು ಪಡೆದಿದ್ದಾರೆ ಅದರಿಂದ ಎನರ್ಜಿ.?ಎಎಸ್ಐ ಮಗಳು ರೂಪಲ್ ರಾಣಾ ಐಎಎಸ್ ಅಧಿಕಾರಿಯಾದ ಯಶಸ್ಸಿನ ಕಥೆ76ನೇ ಗಣರಾಜ್ಯೋತ್ಸವ ಸಂಭ್ರಮ : ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿಬೆಂಗಳೂರು : ರಾಜ್ಯದ 9 ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರಕಟಊಟದ ನಂತರ ವೀಳ್ಯದೆಲೆ ತಿನ್ನುವುದರಿಂದ ವಿಶೇಷ ಆರೋಗ್ಯ ಲಾಭಗಳು...ಮಂಗಳೂರಿನಲ್ಲಿ ನಡೆದ ಟೇಕ್ವಾಂಡೋ ಸ್ಟೇಟ್ ಗೇಮ್ಸ್ನಲ್ಲಿ ಬೆಳ್ಳಿಪದಕ.!ವಚನ.: -ಮಾದಾರ ಚೆನ್ನಯ್ಯ !