LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಭಾರತದಿಂದ ಕಲಿಯುವುದು ಸಾಕಷ್ಟಿದೆ ಎಂದ ರಷ್ಯಾ ಅಧ್ಯಕ್ಷ ಪುಟಿನ್ – ಪ್ರಧಾನಿ ಮೋದಿ ಕಾರ್ಯ ವೈಖರಿಗೂ ಮೆಚ್ಚುಗೆ

ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮೇಕ್ ಇಂಡಿಯಾ ಯೋಜನೆಯನ್ನು ಶ್ಲಾಘಿಸಿದ್ದಾರೆ. ದೇಶೀಯವಾಗಿ ತಯಾರಿಸಿದ ಉತ್ಪನ್ನಗಳ ಮಹತ್ವವನ್ನು ಮೋದಿ ಒತ್ತಿ ಹೇಳಿದ್ದಾರೆ ಮತ್ತು ಅವರ ನಾಯಕತ್ವದಲ್ಲಿ ಭಾರತ ಸಕರಾತ್ಮಕ ನೀತಿಗಳನ್ನು ಅಳವಡಿಸಿಕೊಳ್ಳುತ್ತಿದೆ ಎನ್ನುವುದಕ್ಕೆ ಇದು ಉತ್ತಮ ಉದಾಹರಣೆ ಎಂದು ಪುಟಿನ್ ಹೇಳಿದ್ದಾರೆ.

ಪುಟಿನ್ ಹೇಳಿದ್ದೇನು?


8ನೇ ಈಸ್ಟರ್ನ್ ಎಕಾನಮಿಕ್ ಫಾರಂ(EEF)ನಲ್ಲಿ ಮಾತನಾಡಿದ ಅವರು, ಈ ಹಿಂದೆ ನಾವು ದೇಶೀಯವಾಗಿ ತಯಾರಿಸಿದ ಕಾರು ಹೊಂದಿರಲಿಲ್ಲ. ಆದರೆ ಈಗ ತಯಾರಿಸುತ್ತಿದ್ದೇವೆ. ನಾವು ಕೆಲವೊಂದು ವಿಚಾರದಲ್ಲಿ ನಮ್ಮ ಪಾಲುದಾರ ದೇಶಗಳ ನೀತಿಯನ್ನು ಅನುಸರಿಸಬೇಕು. ಉದಾಹರಣೆಗೆ ಭಾರತ. ಭಾರತ ಇದೀಗ ದೇಶೀಯ ನಿರ್ಮಿತ ವಸ್ತುಗಳ ಮೇಲೆ ಗಮನ ಕೇಂದ್ರೀಕರಿಸಿದೆ. ಮೇಕ್ ಇಂಡಿಯಾ ಯೋಜನೆಯನ್ನು ಪ್ರೋತ್ಸಾಹಿಸಲು ಮೋದಿ ಕಾರ್ಯಪ್ರವೃತ್ತರಾಗಿದ್ದಾರೆ ಎಂದು ಪುಟಿನ್ ಮೆಚ್ಚುಗೆ ಸೂಚಿಸಿದ್ದಾರೆ.

ನಮ್ಮಲ್ಲಿ ದೇಶೀಯವಾಗಿ ತಯಾರಾದ ವಾಹನಗಳಿವೆ. ಅವು ಕಾರ್ಯಕ್ಷಮತೆಯಲ್ಲಿ ಉತ್ತಮವಾಗಿದ್ದು, ಅವನ್ನು ಹೆಚ್ಚಾಗಿ ಬಳಸಬೇಕು. ಇದು ಡಬ್ಲ್ಯುಟಿಒ ಒಪ್ಪಂದದ ಉಲ್ಲಂಘನೆಯಾಗುವುದಿಲ್ಲ. ಅಧಿಕಾರಿಗಳು ದೇಶೀಯ ನಿರ್ಮಿತ ವಾಹನ ಉಪಯೋಗಿಸುವಂತಾಗಬೇಕು ಎಂದು ಅಬಿಪ್ರಾಯಪಟ್ಟರು.

ಇತ್ತೀಚೆಗೆ ದಿಲ್ಲಿಯಲ್ಲಿ ಮುಕ್ತಾಯಗೊಂಡ ಜಿ-20 ಶೃಂಗಸಭೆಯಲ್ಲಿ ನಿರ್ಣಯವಾದ ಭಾರತ-ಮಧ್ಯಪ್ರಾಚ್ಯ-ಯುರೋಪ್ ಎಕಾನಾಮಿಕ್ ಕಾರಿಡಾರ್ (IMEC) ಬಗ್ಗೆಯೂ ಮಾತನಾಡಿದ ಪುಟಿನ್, ಇದರಿಂದ ರಷ್ಯಾಕ್ಕೆ ಯಾವ ರೀತಿಯಿಂದಲೂ ತೊಂದರೆ ಇಲ್ಲ ಎಂದು ಪ್ರತಿಪಾದಿಸಿದರು.




ನನ್ನ ಪ್ರಕಾರ ಈ ಒಪ್ಪಂದಿಂದ ನಮ್ಮ ದೇಶಕ್ಕೆ ಅನುಕೂಲವೇ ಆಗಲಿದೆ. ಇದು ಲಾಜಿಸ್ಟಿಕ್ ಅಭಿವೃದ್ದಿಪಡಿಸಲು ನೆರವಾಗಲಿದೆ. ಈ ಯೋಜನೆಗಾಗಿ ಹಲವು ವರ್ಷಗಳಿಂದ ಚರ್ಚೆ ನಡೆಯುತ್ತಿದೆ ಎಂದು ಪುಟಿನ್ ತಿಳಿಸಿದ್ದಾರೆ.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಪ್ರತಿ ಮನೆಗಳಿಗೆ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ ವಿತರಣೆ: ಶರಣ್ ಪಂಪ್‌ವೆಲ್ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ - ನಾಲ್ಕು ಮಂದಿ ಮೃತ್ಯುಏರ್ ಗನ್, ಚಾಕು ಹಿಡಿದು ಪ್ರಾರ್ಥಮಿಕ ಶಾಲಾ ಮಕ್ಕಳ ಹೊಡೆದಾಟಕ್ಕೆ ಶಿಕ್ಷಕ ವರ್ಗ ತಲ್ಲಣ..!ಜನವರಿ ತಿಂಗಳಂತ್ಯಕ್ಕೆ ಬೆಂಗಳೂರಿನಲ್ಲಿ ಬ್ರಹತ್ಉದ್ಯೋಗ ಮೇಳ - ಮುಖ್ಯಮಂತ್ರಿ ಸಿದ್ದರಾಮಯ್ಯಹೊಸ ವರ್ಷಕ್ಕೆ ಎಣ್ಣೆ ಖರೀದಿ ನೆಪದಲ್ಲಿ ಸಾವಿರಾರು ಮೌಲ್ಯದ ಬಿಯರ್ ಕದ್ದು ಪರಾರಿ..!!ಸೂರ್ಯನಿಂದ ಪ್ರಬಲವಾದ ಸೌರ ಜ್ವಾಲೆ ಸ್ಪೋಟರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಭಾರೀ ಮಳೆ; ಹವಾಮಾನ ಇಲಾಖೆಯ ಎಚ್ಚರಿಕೆ..!'2024 ನೇ ವರ್ಷ ರಾಜ್ಯಕ್ಕೆ ಆಶಾದಾಯಕವಾಗಲಿದೆ' - ಮುಖ್ಯಮಂತ್ರಿ ಸಿದ್ದರಾಮಯ್ಯರಾಜ್ಯದಲ್ಲಿ ಕೊರೋನಾದಿಂದ ಒಬ್ಬರು ಸಾವು, 296 ಮಂದಿಗೆ ಪಾಸಿಟಿವ್ಹುಟ್ಟಿದ ನಕ್ಷತ್ರಗಳ ಪ್ರಕಾರ ನಿಮ್ಮ ಗುಣ ಸ್ವಭಾವ ಮದುವೆ ಯೋಗದ ಬಗ್ಗೆ ತಿಳಿದುಕೊಳ್ಳಿ!