ಭಾರತ ತಂಡದ ಮುಖ್ಯ ಕೋಚ್ ಹುದ್ದೆಗೆ ರಾಹುಲ್ ದ್ರಾವಿಡ್ ಏಕೆ ಮರು ಅರ್ಜಿ ಸಲ್ಲಿಸಲಿಲ್ಲ ಗೊತ್ತಾ?
ನವದೆಹಲಿ: ಭಾರತ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ ಕೊನೆಗೊಂಡಿದೆ. ಭಾರತ ತಂಡ ಟಿ20 ವಿಶ್ವಕಪ್ ಗೆಲ್ಲುವುದರೊಂದಿಗೆ ತಂಡದೊಂದಿಗೆ ದ್ರಾವಿಡ್ ಪಯಣ ಕೊನೆಗೊಂಡಿತು. ಆದರೆ ಅವರು ಯಾಕೆ ಈ ಹುದ್ದೆಯಲ್ಲಿ ಮುಂದುವರಿಯಲು ಮರು ಅರ್ಜಿ ಸಲ್ಲಿಸಲಿಲ್ಲ ಎನ್ನುವುದಕ್ಕೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಕಾರಣ ಬಿಚ್ಚಿಟ್ಟಿದ್ದಾರೆ. ಭಾರತ ತಂಡದ ಮುಖ್ಯ ಕೋಚ್ ಹುದ್ದೆಗೆ ಮರು ಅರ್ಜಿ ಸಲ್ಲಿಸದಿರಲು ರಾಹುಲ್ ದ್ರಾವಿಡ್ ನಿರ್ಧಾರದ ಹಿಂದಿನ ಕಾರಣವನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಬಹಿರಂಗಪಡಿಸಿದರು. "ಕುಟುಂಬದ ಬದ್ಧತೆಯಿಂದಾಗಿ ರಾಹುಲ್ ದ್ರಾವಿಡ್ ಅವರು ಭಾರತ ತಂಡದ ಮುಖ್ಯ ಕೋಚ್ ಹುದ್ದೆ ತ್ಯಜಿಸಲು ಬಯಸುತ್ತಿರುವುದಾಗಿ ಅವರು ನನಗೆ ಹೇಳಿದರು. ಅವರ ನಿರ್ಧಾರವನ್ನು ನಾವು ಗೌರವಿಸುತ್ತೇವೆ. ಅವರನ್ನು ವಿಸ್ತರಿಸಲು ಒತ್ತಾಯಿಸಲು ನಾನು ಬಯಸುವುದಿಲ್ಲ ಎಂದು ಹೇಳಿದರು. ಇನ್ನು ಕೋಚ್ ಮತ್ತು ಆಯ್ಕೆದಾರರ ನೇಮಕವನ್ನು ಶೀಘ್ರದಲ್ಲೇ ಮಾಡಲಾಗುವುದು ಎಂದು ಶಾ ಹೇಳಿದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.