LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಭ್ರಷ್ಟ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ'- ಬಿಜೆಪಿ ಕಿಡಿ

ಬೆಂಗಳೂರು: ಮುಡಾ ಹಗರಣ ಖಂಡಿಸಿ ಪ್ರತಿಭಟನೆ ನಡೆಸಲು ಮೈಸೂರಿಗೆ ತೆರಳುತ್ತಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇದಕ್ಕೆ ಬಿಜೆಪಿ ಕಿಡಿ ಕಾರಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಭ್ರಷ್ಟ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಕಿಡಿಕಾರಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಾಗ್ದಾಳಿ ನಡೆಸಿರುವ ಬಿಜೆಪಿ, ಮುಡಾ ಹಗರಣ ಖಂಡಿಸಿ, ಮೈಸೂರಿನಲ್ಲಿ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ಸಭೆಗೆ ತೆರಳುತ್ತಿದ್ದ ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ ಹಾಗೂ ಪಕ್ಷದ ಸಂಸದರು, ಶಾಸಕರು, ಮಾಜಿ ಸಂಸದರು, ಮಾಜಿ ಶಾಸಕರು, ಪಕ್ಷದ ಹಿರಿಯ ನಾಯಕರು ಹಾಗೂ ಕಾರ್ಯಕರ್ತರನ್ನು ಬೆಂಗಳೂರಿನಲ್ಲೇ ರಣಹೇಡಿ ಕಾಂಗ್ರೆಸ್ ಸರ್ಕಾರ ಬಂಧಿಸಿದೆ. ಮಾತೆತ್ತಿದರೆ ಸಂವಿಧಾನ ರಕ್ಷಣೆ, ಅಭಿವ್ಯಕ್ತಿ ಸ್ವಾತಂತ್ರ್ಯವೆಂದು ಬಡಾಯಿಕೊಚ್ಚಿಕೊಳ್ಳುವ ಸಿಎಂ ಸಿದ್ದರಾಮಯ್ಯನವರು ತಮ್ಮ ಕುರ್ಚಿ ಉಳಿಸಿಕೊಳ್ಳಲು, ವಿಪಕ್ಷಗಳ ಹೋರಾಟ ಹತ್ತಿಕ್ಕುವ ಮೂಲಕ ಸರ್ವಾಧಿಕಾರಿ ನಡೆ ಪ್ರದರ್ಶನ ಮಾಡಿದ್ದಾರೆ’ ಎಂದು ಹೇಳಿದೆ.

ಮುಡಾ ಹಗರಣದಲ್ಲಿ ತಮ್ಮ ಪಾತ್ರವಿರುವುದನ್ನು ಒಪ್ಪಿಕೊಳ್ಳದ ಸಿಎಂ ಸಿದ್ದರಾಮಯ್ಯನವರು, ಕಾಂಗ್ರೆಸ್ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ವಿರುದ್ಧ ಹೋರಾಟಕ್ಕಿಳಿದಿರುವ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ಹತ್ತಿಕ್ಕುವ ಮೂಲಕ ಪ್ರಜಾಪ್ರಭುತ್ವ ಹಾಗೂ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ ಎಂದು ಬಿಜೆಪಿ ತಿಳಿಸಿದೆ.

ದೇಶದ ಜನರ ದಾರಿ ತಪ್ಪಿಸಲು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಕೈಯಲ್ಲಿ ಸಂವಿಧಾನ ಪ್ರತಿ ಪ್ರದರ್ಶನ ಮಾಡುತ್ತಾರೆ. ಶ್ರೇಷ್ಠ ಸಂವಿಧಾನವೇ ವಿಪಕ್ಷಗಳಿಗೆ ಅನ್ಯಾಯದ ವಿರುದ್ಧ ಪ್ರತಿಭಟಿಸುವ, ಹೋರಾಟ ನಡೆಸುವ ಸ್ವಾತಂತ್ರ್ಯ ನೀಡಿದೆ ಎಂಬ ಅರಿವಿಲ್ಲ. ಸಂವಿಧಾನ ವಿರೋಧಿ ಸಿದ್ದರಾಮಯ್ಯನವರೇ, ತಮ್ಮ ಸರ್ವಾಧಿಕಾರಿ ನಡೆಗೆ ರಾಜ್ಯದ ಜನರು ತಕ್ಕ ಪಾಠ ಕಲಿಸುವುದು ಶತಸಿದ್ಧ. ನೀವು ಹಾಗೂ ನಿಮ್ಮ ಸಂಪುಟದ ಭ್ರಷ್ಟ ಸಚಿವರುಗಳು ರಾಜೀನಾಮೆ ನೀಡಿ ಮನೆಗೆ ಹೋಗುವ ಕಾಲ ಸನ್ನಿಹಿತವಾಗುತ್ತಿದೆ ಎಂದು ಪೋಸ್ಟ್ ಮಾಡಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'NTPC' ಯಲ್ಲಿ 475 ಹುದ್ದೆಗಳಿಗೆ ಅರ್ಜಿ ಆಹ್ವಾನಕುಂಭಮೇಳದಲ್ಲಿ ಜೀವಂತ ಸಮಾಧಿಯಾದ ಪರಮಹಂಸ ಪೀಠಾಧೀಶ್ವರ ಶಿವಯೋಗಿ ಮೌನಿ ಮಹಾರಾಜರು !!ಇದೆ ಮೊದಲಬಾರಿಗೆ ಮದುವೆ ಸಮಾರಂಭಕ್ಕೆ ಸಜ್ಜಾಗುತ್ತಿದೆ ರಾಷ್ಟ್ರಪತಿ ಭವನ!!ಒಂದೇ ಒಂದು ಚುಂಬನಕ್ಕೆ 37 ರೀಟೇಕ್ ತೆಗೆದುಕೊಂಡ ನಟ - ಆ್ಯಕ್ಷನ್ ಕಟ್ ಹೇಳಿ ಸುಸ್ತಾದ ನಿರ್ದೇಶಕ!ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತ್ಯುಬಂಡುಕೋರರ ಗುಂಡಿನ ದಾಳಿಗೆ 18 ಸೈನಿಕರು ಮೃತ; 23 ಉಗ್ರರು ಹತಕಾರು ನಿಯಂತ್ರಣ ತಪ್ಪಿ ಕೊಳಕ್ಕೆ ಬಿದ್ದು ಇಬ್ಬರು ಹೈಕೋರ್ಟ್ ವಕೀಲರು ಸಾವು.!'ಮಧ್ಯಮ ವರ್ಗವು ಯಾವಾಗಲೂ ಪ್ರಧಾನಿ ಮೋದಿಯವರ ಹೃದಯದಲ್ಲಿದ್ದಾರೆ'- ಅಮಿತ್‌ ಶಾಐಎಎಸ್ ಸಂಜೀತಾ ಮೋಹಪಾತ್ರ ಯಶಸ್ಸಿನ ಪಯಣದ ಕಥನಬ್ಲಾಕ್‌ ಟೀ, ಬ್ಲಾಕ್‌ ಕಾಫಿ ಆರೋಗ್ಯಕ್ಕೆ ಉತ್ತಮ ಯಾವುದು..?