ಅನ್ಯಕೋಮಿನ ಯುವಕರಿಂದ ಕಾರ್ಕಳದಲ್ಲಿ ಭಯಾನಕ ಗ್ಯಾಂಗ್ ರೇಪ್ ನಡೆದಿದ್ದು ಈ ಘಟನೆ ಸಮಾಜದಲ್ಲಿ ಆತಂಕಕ್ಕೆ ಕಾರಣ ಆಗಿದೆ. ಕಾರ್ಕಳ ಅಯ್ಯಪ್ಪ ನಗರ ಬಳಿ ಕಾಡಿನಲ್ಲಿ ಯುವತಿಗೆ ಮತ್ತು ಬರುವ ವಸ್ತು ನೀಡಿ ಗ್ಯಾಂಗ್ ರೇಪ್ ಮಾಡಲಾಗಿದ್ದು ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಯುವತಿಯನ್ನು ಕಾರ್ಕಳ ಸರಕಾರಿ ಆಸ್ಪತ್ರೆ ಗೆ ದಾಖಲಿಸಲಾಗಿದೆ. ಯುವತಿ ಪ್ರಜ್ಞಾ ಹೀನ ಸ್ಥಿತಿ ಯಲ್ಲಿ ಇದ್ದು 4 ಮಂದಿ ಈ ಕೃತ್ಯದಲ್ಲಿ ತೊಡಗಿದ್ದು ಇದರಲ್ಲಿ ಅಲ್ತಾಫ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಕಿ ಗ್ಯಾಂಗ್ ರೇಪ್ ಮಾಡಿದವರ ಬಗ್ಗೆ ಮಾಹಿತಿ ಲಭ್ಯ ಆಗಬೇಕಿದೆ.
ಅನ್ಯಮತೀಯ ವ್ಯಕ್ತಿಗಳಿಂದ ಈ ಘಟನೆ ನಡೆದಿದೆ. ಹಿಂದೂ ಸಂಘಟನೆಗಳು ಈಕೃತ್ಯದ ಬಗ್ಗೆ ಆಕ್ರೋಶವನ್ನು ಹೊರಹಾಕಿದ್ದು ನಾಳೆಯೊಳಗೆ ಆರೋಪಿಗಳನ್ನು ಬಂಧಿಸದಿದ್ದಲ್ಲಿ ನ್ಯಾಯಕ್ಕಾಗಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕುವುದಾಗಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ