LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಂಗಳೂರು: ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ..!!

ದಕ್ಷಿಣ ಕನ್ನಡ  ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತನೊಬ್ಬ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ ಸಂಬಂಧ ಇದೀಗ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಫಿಸಿಕ್ಸ್ ಉಪನ್ಯಾಸಕ ನರೇಂದ್ರ, ಬಯಾಲಜಿ ಉಪನ್ಯಾಸಕ ಸಂದೀಪ್ ಹಾಗೂ ಅವರ ಗೆಳೆಯ ಅನೂಪ್ ಎಂದು ಗುರುತಿಸಲಾಗಿದೆ.

ಫಿಸಿಕ್ಸ್ ಉಪನ್ಯಾಸಕ ನರೇಂದ್ರ ನೋಟ್ಸ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿ ಜತೆ ಹತ್ತಿರವಾಗಿದ್ದ. ಬಳಿಕ ಹಂತ ಹಂತವಾಗಿ ಚಾಟ್ ಮಾಡುವುದು, ನೋಟ್ಸ್ ನೀಡುವುದು ಮಾಡಿದ್ದ. ಹಾಗೆಯೇ ವಿದ್ಯಾರ್ಥಿನಿ ಜತೆ ಸಲುಗೆ ಬೆಳೆಸಿಕೊಂಡಿದ್ದ ಉಪನ್ಯಾಸಕ, ಆಕೆ ಬೆಂಗಳೂರಿಗೆ ಬಂದ ನಂತರವೂ ಚಾಟ್ ಮಾಡುವುದು, ನೋಟ್ಸ್ ನೀಡುವುದನ್ನು ಮುಂದುವರಿಸಿದ್ದ. ಅದೇ ನೆಪದಲ್ಲಿ ಮಾರತಹಳ್ಳಿಯ ಗೆಳೆಯನ ರೂಮ್​​ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ಅಷ್ಟೇ ಅಲ್ಲದೆ, ವಿಚಾರ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದ.

ಉಪನ್ಯಾಸಕ ನರೇಂದ್ರ ದುಷ್ಕೃತ್ಯ ಎಸಗಿದ ಬಳಿಕ ಬಯಾಲಜಿ ಉಪನ್ಯಾಸಕ ಸಂದೀಪ್ ಸಹ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಆ ಸಂದರ್ಭದಲ್ಲಿ ಆಕೆ ವಿರೋಧ ವ್ಯಕ್ತಪಡಿಸಿದ್ದಳು. ಆಗ, ‘ನೀನು ನರೇಂದ್ರನ ಜೊತೆಗೆ ಇರುವ ಫೋಟೊ ಹಾಗೂ ವಿಡಿಯೋ ತನ್ನ ಬಳಿ ಇದೆ. ಅದನ್ನು ಕಾಲೇಜಿನಲ್ಲಿ ಎಲ್ಲರಿಗೂ ಗೊತ್ತಾಗುವಂತೆ ಮಾಡುವೆ’ ಎಂದು ಬ್ಲ್ಯಾಕ್​ಮೇಲ್ ಮಾಡಿದ್ದ ಸಂದೀಪ್, ಅತ್ಯಾಚಾರ ಎಸಗಿದ್ದ.

ವಿದ್ಯಾರ್ಥಿನಿ ಮೇಲೆ ಸಂದೀಪ್ ಅತ್ಯಾಚಾರ ಎಸಗಿದ ರೂಮ್ ಅನೂಪ್​ ಎಂಬಾತನದ್ದಾಗಿತ್ತು. ಘಟನೆ ಬೆನ್ನಲ್ಲೇ ವಿದ್ಯಾರ್ಥಿನಿಯನ್ನು ಸಂಪರ್ಕಿಸಿದ್ದ ಅನೂಪ್, ‘ನೀನು ನನ್ನ ರೂಮ್​ಗೆ ಬಂದಿರುವುದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ನನ್ನ ರೂಮ್​​ನಲ್ಲಿ ಸಿಸಿಟಿವಿ ಇದೆ’ ಎಂದು ಬೆದರಿಕೆ ಹಾಕಿದ್ದ. ಬಳಿಕ ಆತನಿಂದಲೂ ಯುವತಿ ಮೇಲೆ ಅತ್ಯಾಚಾರ ನಡೆದಿದೆ.

ಉಪನ್ಯಾಸಕರನ್ನು ಎದುರಿಸಲು ಸಾಧ್ಯವಾಗದೆ ಆರಂಭದಲ್ಲಿ ಸುಮ್ಮನಿದ್ದ ವಿದ್ಯಾರ್ಥಿನಿ, ನಂತರ ಸಮಸ್ಯೆ ಹೆಚ್ಚಾಗಲು ಆರಂಭವಾದಾಗ ಕೃತ್ಯದ ಬಗ್ಗೆ ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ಪೊಷಕರು ಆಕೆಯನ್ನು ಮಹಿಳಾ ಆಯೋಗಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಆಕೆಗೆ ಕೌನ್ಸೆಲಿಂಗ್ ಮಾಡಿ ಪೊಲೀಸರಿಗೆ ದೂರು ಕೊಡಿಸಿದ್ದಾರೆ.

ಸದ್ಯ ಮೂವರು ಆರೋಪಿಗಳನ್ನು ಬಂಧಿಸಿರುವ ಮಾರತಹಳ್ಳಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಉಪನ್ಯಾಸಕರು ಈ ಹಿಂದೆಯೂ ಕೆಲವು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಮಾಡಿ ಯಾರಿಗೂ ಹೇಳದಂತೆ ಬೆದರಿಕೆ ಹಾಕಿರುವ ಅನುಮಾನ ವ್ಯಕ್ತವಾಗಿದ್ದು, ಈ ಕುರಿತು ತನಿಖೆ ನಡೆಯತ್ತಿದೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026