LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ಭಾರಿ ಬೆಂಕಿ ಅವಘಡ- ಹೊತ್ತಿ ಉರಿದ 2 ವಾಹನ

ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿಯಾಗಿವೆ.

ಇಂದು ಬುಧವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದೆ. ಇಲ್ಲಿನ ಟಿಕೆಟ್ ಕೌಂಟರ್ ಬಳಿಯ ವರ್ಕ್ ಶಾಪ್ ನಲ್ಲಿ ಚಾರ್ಜ್ ಗೆ ಹಾಕಿದ್ದ ಒಂದು ಎಲೆಕ್ಟ್ರಿಕ್ ವಾಹನದಲ್ಲಿ ಸಾರ್ಟ್ ಸರ್ಕಿಟ್ ನಿಂದ ಬೆಂಕಿ ಅವಘಡ ಸಂಭವಿಸಿದ್ದು ಇದರಿಂದ ಹೊತ್ತಿದ್ದ ಬೆಂಕಿ ವ್ಯಾಪಿಸಿ ಪಕ್ಕದಲ್ಲಿದ್ದ ಮತ್ತೊಂದು ವಾಹನವನ್ನೂ ಸುಟ್ಟು ಹಾಕಿದೆ.  ಒಟ್ಟು ಎರಡು ವಾಹನಗಳು ಸಂಪೂರ್ಣ ಭಸ್ಮವಾಗಿದೆ. ಪಾರ್ಕಿಂಗ್ ಸ್ಥಳದಲ್ಲಿ ಹತ್ತಕ್ಕೂ ಅಧಿಕ  ಎಲೆಕ್ಟ್ರಿಕ್ ವಾಹನಗಳಿದ್ದರೂ  ಅದೃಷ್ಟವಶಾತ್ ಭಾರೀ ದೊಡ್ಡ ಅನಾಹುತ ತಪ್ಪಿದೆ. ಎರಡು ವಾಹನಗಳು ಹೊತ್ತಿ ಉರಿಯುತ್ತಿದ್ದರೂ  ಅಗ್ನಿ ಶಾಮಕ ದಳ ಕ್ಲಪ್ತ ಸಮಯಕ್ಕೆ ಸ್ಥಳಕ್ಕೆ ಆಗಮಿಸಿರಲಿಲ್ಲ ಎಂಬ ಆರೋಪ ಕೂಡ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಪಿಲಿಕುಳದ ಸಿಬ್ಬಂದಿಗಳೇ ಧಾವಿಸಿ ಬಂದು ಬೆಂಕಿ ನಂದಿಸುವ ಕಾರ್ಯ ನಡೆಸಿದ್ದರು.  ಘಟನಾ ಸ್ಥಳಕ್ಕೆ ಕಾವೂರು ಠಾಣೆ, ಮಂಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
05-06-2025 ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.!--ಆಯ್ದಕ್ಕಿ ಮಾರಯ್ಯ ಅವರ ವಚನ….!ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಸಿ.ಟಿ.ರವಿ ಆರೋಪ.!ರಾಜ್ಯಸಭೆ ಮತ್ತು ಲೋಕಸಭೆ ಎರಡೂ ಜುಲೈ 21 ರಿಂದ ಮುಂಗಾರು ಅಧಿವೇಶನ.!ಚಾಂಪಿಯನ್ ಆಗಿರುವ ರಾಯಲ್ ಚಾಲೆಂಜರ್ಸ್ ತಂಡಕ್ಕೆ ಸರಕಾರದಿಂದ ಅದ್ದೂರಿ ಸ್ವಾಗತ.!ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿ ಕಾಲ್ ತುಳಿತ 6 ಮಂದಿ ಸಾವು.!ಸುರಭಿ ಗೌತಮ್‌ ಯಶಸ್ಸಿನ ಕಥೆ ಕೇಳಿದ್ರೆ ಆಶ್ಚರ್ಯ ಪಡುತ್ತೀರ.?ಆರ್‌ಸಿಬಿ ಪಡೆ ಚೊಚ್ಚಲ ಬಾರಿ ಟ್ರೋಫಿ.! ಇಂದು ಬೆಂಗಳೂರಿನಲ್ಲಿ ವಿಕ್ಷರಿ ಪರೇಡ್ಮನೆಯಲ್ಲಿ ಅಶಾಂತಿ, ಕಿರಿ ಕಿರಿ, ನೆಮ್ಮದಿ ಇಲ್ಲದೆ ಇರುವುದು ಹಾಗೂ ವಾಸ್ತು ದೋಷಕ್ಕೆ ಸರಳ ಯಂತ್ರ ಪರಿಹಾರ.!ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮಕ್ಕೆ ನೂತನ ಅಧ್ಯಕ್ಷರಾಗಿ ಬಸವಮೂರ್ತಿ ಮಾದಾರ ಚೆನ್ನಯ್ಯ ಶ್ರೀ.!