LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಂಗಳೂರು: ಮಹಜರು ವೇಳೆ 'ಚಡ್ಡಿಗ್ಯಾಂಗ್' ಆರೋಪಿಗಳು ಪರಾರಿಗೆ ಯತ್ನ - ಇಬ್ಬರಿಗೆ ಗುಂಡೇಟು

ಮಂಗಳೂರು: ಸ್ಥಳ ಮಹಜರು ನಡೆಸಲು ಚಡ್ಡಿಗ್ಯಾಂಗ್‌ನ ಆರೋಪಗಳನ್ನು ಕೊಂಡೊಯ್ಯುತ್ತಿದ್ದ ವೇಳೆ ಪರಾರಿಗೆ ಯತ್ನಿಸಿದ ಇಬ್ಬರು ಆರೋಪಿಗಳಿಗೆ ಪೊಲೀಸರು ಗುಂಡಿಕ್ಕಿರುವ ಘಟನೆ ನಗರದ ಮುಲ್ಕಿ ಸಮೀಪದ ಪಡು ಪಣಂಬೂರು ಬಳಿ ನಡೆದಿದೆ. ಮಂಗಳವಾರ ನಸುಕಿನ ವೇಳೆ ಚಡ್ಡಿಗ್ಯಾಂಗ್‌ನ ನಾಲ್ವರಿದ್ದ ತಂಡ ಮಂಗಳೂರಿನ ಕೋಟೆಕಣಿಯ ಮನೆಯೊಂದಕ್ಕೆ ನುಗ್ಗಿ ದಂಪತಿಯನ್ನು ಬೆದರಿಸಿ 14ಲಕ್ಷ ಮೌಲ್ಯದ ಸೊತ್ತು ದರೋಡೆ ಮಾಡಿ ಪರಾರಿಯಾಗಿತ್ತು. ಬಳಿಕ ಕಾರನ್ನು ಮುಲ್ಕಿ ಬಳಿ ತೊರೆದು, ಕೆಎಸ್ಆರ್‌ಟಿಸಿ ಬಸ್‌ನಲ್ಲಿ ಮತ್ತೆ ಮಂಗಳೂರಿಗೆ ಬಂದು ಬೆಂಗಳೂರಿಗೆ ಪರಾರಿಯಾಗಲೆತ್ನಿಸಿತ್ತು. ಅಷ್ಟರಲ್ಲಿ ಅಲರ್ಟ್ ಆದ ಪೊಲೀಸರು ಸಕಲೇಶಪುರ ಮಾರ್ಗದಲ್ಲಿದ್ದ ಬಸ್‌ಅನ್ನು ತಡೆದು ನಿಲ್ಲಿಸಿ ಬಂಧಿಸಿತ್ತು. ಅದರಂತೆ ಇಂದು ಸ್ಥಳ ಮಹಜರು ನಡೆಸಲು ಮಂಗಳೂರಿನಿಂದ ಆರೋಪಿಗಳನ್ನು ಮುಲ್ಕಿ ಕಡೆಗೆ ಪೊಲೀಸರು ಕರೆದೊಯ್ಯುತ್ತಿದ್ದರು. ಈ ವೇಳೆ ರಾಜು ಸಿಂಗ್ವಾನಿಯ(24) ಹಾಗೂ ಬಾಲಿ(22) ಎಂಬಿಬ್ಬರು ಆರೋಪಿಗಳು ಪೊಲೀಸರನ್ನು ತಳ್ಳಿ ಎಸ್ಕೇಪ್ ಆಗಲು ಯತ್ನಿಸಿದ್ದಾರೆ. ಆಗ ಪೊಲೀಸರು ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ, ಬಳಿಕ ಇಬ್ಬರ ಕಾಲಿಗೆ ಗುಂಡಿಕ್ಕಿದ್ದಾರೆ. ಸದ್ಯ ಗಾಯಾಳು ಆರೋಪಿಗಳನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿಗಳು ತಳ್ಳಿರುವ ಪರಿಣಾಮ ಇಬ್ಬರು ಪೊಲೀಸರಿಗೂ ಗಾಯವಾಗಿದ್ದು, ಅವರನ್ನು ನಗರದ ಎ‌.ಜೆ.ಆಸ್ಪತ್ರೆಗೆ ದಾಖಲಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RSS ನೋಂದಣಿ ಯಾಕಾಗಿಲ್ಲ? ಖಡಕ್​ ಉತ್ತರ ಕೊಟ್ರು ಮೋಹನ್ ಭಾಗವತ್ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ – ಹುಬ್ಬಳ್ಳಿ ಜಂಕ್ಷನ್‌ಗೆ ಗಿನ್ನೆಸ್ ದಾಖಲೆ ಗೌರವ!ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನ; ಕೊಲೆ ಆರೋಪಿಯ ಕಾಲಿಗೆ ಗುಂಡೇಟು'ವಂದೇ ಭಾರತ್ ಮೇಲ್ದರ್ಜೆಗೆ ಕ್ರಮ; 1,300 ರೈಲು ನಿಲ್ದಾಣಗಳ ಪುನರ್ನಿರ್ಮಾಣ'- ಸಚಿವ ಅಶ್ವಿನಿ ವೈಷ್ಣವ್ಆರೋಗ್ಯ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಈ ಜ್ಯೂಸ್ಇಷ್ಟು ಕಡಿಮೆ ಬಟ್ಟೆ ಹಾಕಿದ್ರೆ ಅತ್ಯಾಚಾರ ಮಾಡ್ತೀನಿ: ಮಹಿಳೆಗೆ ಆಟೋ ಚಾಲಕನ ಬೆದರಿಕೆ!ನೊಬೆಲ್ ಪ್ರಶಸ್ತಿ ವಿಜೇತ ಅಮೆರಿಕನ್ ವಿಜ್ಞಾನಿ ಜೇಮ್ಸ್ ವಾಟ್ಸನ್ ವಿಧಿವಶಶಾಂತಿ ಮಾತುಕತೆ ವಿಫಲ: 'ನಾವು ಯುದ್ಧಕ್ಕೆ ಸಿದ್ಧ'- ಪಾಕ್‌ಗೆ ಅಫ್ಘಾನ್ ಖಡಕ್ ವಾರ್ನಿಂಗ್ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: 'ಉಸ್ತುವಾರಿ ವಿರುದ್ಧ ಕ್ರಮ'- ಪರಮೇಶ್ವರ್ ಕಿಡಿಹೆಲ್ಮೆಟ್ ಧರಿಸದೆ ಹೋದ ಸ್ಕೂಟರ್ ಸವಾರ: 20 ಲಕ್ಷ ದಂಡ – ರಶೀದಿ ನೋಡಿ ಸವಾರ ಶಾಕ್