ಮಂಗಳೂರು: ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ - 6ಕೋಟಿಯ ಎಂಡಿಎಂಎನೊಂದಿಗೆ ನೈಜೀರಿಯಾ ಪ್ರಜೆ ಸೆರೆ
ಮಂಗಳೂರು: ಮಂಗಳೂರು ನಗರ ಸೇರಿದಂತೆ ಇತರ ರಾಜ್ಯಗಳಿಗೆ ಎಂಡಿಎಂಎ ಮಾದಕದ್ರವ್ಯ ಪೂರೈಕೆ ಮಾಡುತ್ತಿದ್ದ ನೈಜಿರಿಯಾ ಪ್ರಜೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ 6 ಕೋಟಿ ಮೌಲ್ಯದ 6.300 ಕೆಜಿ ಎಂಡಿಎಂಎಯನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಬೆಂಗಳೂರಿನ ದೊಮ್ಮಸಂದ್ರದ ವಿವೇಕಾನಂದ ನಗರದಲ್ಲಿ ವಾಸವಿರುವ ಪೀಟರ್ ಇಕೆಡಿ ಬೆಲೊನ್ವು(38) ಎಂಬ ನೈಜೀರಿಯಾ ಪ್ರಜೆ ಬಂಧಿತ ಆರೋಪಿ ಸೆಪ್ಟೆಂಬರ್ 29ರಂದು ನಗರದ ಪಂಪ್ವೆಲ್ ಬಳಿ ಎಂಡಿಎಂಎ ಮಾದಕದ್ರವ್ಯವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ತೊಕ್ಕೊಟ್ಟು, ಪರ್ಮನ್ಬೂರು ನಿವಾಸಿ ಹೈದರ್ ಅಲಿ(51) ಎಂಬಾತನನ್ನು ಬಂಧಿಸಿ 75,000ರೂ. ಮೌಲ್ಯದ 15ಗ್ರಾಂ ಎಂಡಿಎಂಎಯನ್ನು ವಶಪಡಿಸಿಕೊಂಡಿದ್ದರು. ಪ್ರಕರಣದ ತನಿಖೆಯನ್ನು ಮಂಗಳೂರು ಸಿಸಿಬಿ ಘಟಕಕ್ಕೆ ಹಸ್ತಾಂತರಿಸಲಾಗಿತ್ತು. ಸಿಸಿಬಿ ಪೊಲೀಸರು ಮಾದಕದ್ರವ್ಯ ಪೂರೈಕೆ ಮಾಡುವ ಡ್ರಗ್ಸ್ ಪೆಡ್ಲರ್ಗಳ ಹಿಂದೆ ಬಿದ್ದು ತನಿಖೆ ಕೈಗೊಂಡಿದ್ದರು. ಆಗ ಮಾದಕದ್ರವ್ಯ ಪೂರೈಕೆ ಮಾಡುವ ವ್ಯಕ್ತಿ ಬೆಂಗಳೂರಿನಲ್ಲಿ ವಾಸ್ತವ್ಯವಿರುವ ನೈಜೀರಿಯಾ ದೇಶದ ಪ್ರಜೆ ಎಂದು ತಿಳಿದುಬಂದಿದೆ. ಅದರಂತೆ ಸಿಸಿಬಿ ಪೊಲೀಸರು ಬೆಂಗಳೂರು ನಗರದ ದೊಮ್ಮಸಂದ್ರ ವಿವೇಕಾನಂದ ನಗರದ ಬಾಡಿಗೆ ಮನೆಗೆ ದಾಳಿ ನಡೆಸಿ ಮಾದಕವಸ್ತು ಹೊಂದಿದ್ದ ನೈಜೀರಿಯಾ ಪ್ರಜೆಯನ್ನು ಬಂಧಿಸಿದ್ದಾರೆ. ಈ ವೇಳೆ ಆತನ ಮನೆಯಲ್ಲಿ ದಾಸ್ತಾನು ಇರಿಸಿದ್ದ ಒಟ್ಟು 6 ಕೋಟಿ ರೂ. ಮೌಲ್ಯದ 6.310 ಕೆಜಿ ಎಂಡಿಎಂಎ, 3 ಮೊಬೈಲ್ ಫೋನ್ಗಳು, ಡಿಜಿಟಲ್ ತೂಕ ಮಾಪಕ, ಒಟ್ಟು 35 ಎಟಿಎಂ/ಡೆಬಿಟ್ ಕಾರ್ಡ್ ಗಳು, 17 ಇನ್ ಆ್ಯಕ್ಟಿವ್ ಸಿಮ್ಕಾರ್ಡ್ಗಳು, 10 ವಿವಿಧ ಬ್ಯಾಂಕ್ಗಳ ಅಕೌಂಟ್ ಬುಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 6,00,63,500 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.