LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

 ಮಂಗಳೂರು: ಹಿರಿಯ ರಂಗನಿರ್ದೇಶಕ ‘ಗುಡ್ಡದ ಭೂತ’ದ ಸೃಷ್ಟಿಕರ್ತ ಸದಾನಂದ ಸುವರ್ಣ ನಿಧನ

ಮಂಗಳೂರು: ಹಿರಿಯ ರಂಗನಿರ್ದೇಶಕ ಹಾಗೂ ರಾಷ್ಟ್ರಪ್ರಶಸ್ತಿ ಸಿನಿಮಾ ನಿರ್ಮಾಪಕ, ನಿರ್ದೇಶಕ ಸದಾನಂದ ಸುವರ್ಣ (93) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾಗಿದ್ದಾರೆ. ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ನಾಳೆ ಮಧ್ಯಾಹ್ನ 1ರಿಂದ 3ರವರೆಗೆ ಪುರಭವನದಲ್ಲಿ ವ್ಯವಸ್ಥೆ ಮಾಡಲಾಗುವುದು. ಬಳಿಕ ಅವರ ಬಯಕೆಯಂತೆ ದೇಹದಾನವನ್ನು ಮಾಡಲಾಗುವುದು ಎಂದು ಮೂಲಗಳಿಂದ ತಿಳಿದು ಬಂದಿದೆ. ಕನ್ನಡದಲ್ಲಿ ಅತ್ಯಂತ ಯಶಸ್ವಿ ರಂಗಭೂಮಿ ನಿರ್ದೇಶಕರಾಗಿ ನೂರಾರು ನಾಟಕಗಳನ್ನು ನಿರ್ದೇಶಿಸಿದ ಇವರು ಕೋರ್ಟ್‌ಮಾರ್ಷಲ್, ಉರುಳು, ಮಳೆನಿಲ್ಲುವವರೆಗೆ, ಗುಡ್ಡದ ಭೂತ, ಸುಳಿ ಮುಂತಾದವು ಪ್ರಯೋಗಾತ್ಮಕ, ಸದಭಿರುಚಿಯ ನಾಟಕಗಳು. ಸದಾನಂದ ಸುವರ್ಣ ಅವರು ಗಿರೀಶ್ ಕಾಸರವಳ್ಳಿಯವರ ಘಟಶ್ರಾದ್ಧ ಸಿನಿಮಾಕ್ಕೆ ನಿರ್ಮಾಪಕರಾಗುವ ಮೂಲಕ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದವರು. ಈ ಸಿನಿಮಾಕ್ಕೆ ಅತ್ಯುತ್ತಮ ಸಿನಿಮಾವೆಂದು ಸ್ವರ್ಣಕಮಲ ಪ್ರಶಸ್ತಿ ಲಭಿಸಿತ್ತು. ಬಳಿಕ ಕಾಸರವಳ್ಳಿಯವರ ತಬರನ ಕತೆ, ಮನೆ, ಕ್ರೌರ‌್ಯ ಮುಂತಾದ ಸಿನಿಮಾಗಳಿಗೆ ಕಾರ್ಯನಿರ್ವಾಹಕ ನಿರ್ಮಾಪಕರಾಗಿ ಅನುವಭವ ಪಡೆದವರು. ಬಳಿಕ ಕುಬಿ ಮತ್ತು ಇಯಾಲ ಎಂಬ ಸದಭಿರುಚಿಯ ಚಿತ್ರ ನಿರ್ದೇಶಿಸಿ ಉತ್ತಮ ನಿರ್ದೇಶಕ ಪ್ರಶಸ್ತಿ ಪಡೆದರು. ಈ ಸಿನಿಮಾಕ್ಕೆ ನಾಲ್ಕು ಪ್ರಶಸ್ತಿ ಬಂದಿತ್ತು. ಬಳಿಕ ಇವರು ನಿರ್ದೇಶಿಸಿದ ಗುಡ್ಡದ ಭೂತ ಟೆಲಿಚಿತ್ರ ಜನಮನ್ನಣೆ ಗಳಿಸಿದ್ದು ಮಾತ್ರವಲ್ಲದೆ ಉತ್ತಮ ಧಾರಾವಾಹಿ ಪ್ರಶಸ್ತಿಯನ್ನು ಪಡೆದಿತ್ತು. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯವರಾದ ಸದಾನಂದ ಸುವರ್ಣ ಮುಂಬಯಿಯಲ್ಲಿ ಹೈಸ್ಕೂಲ್ ಶಿಕ್ಷಣ ಪಡೆದವರು. ಅಲ್ಲಿ ರಾತ್ರಿಪ್ರೌಢಶಾಲೆಯಲ್ಲಿ ಅಧ್ಯಾಪಕರಾಗಿ 5ವರ್ಷ ಕೆಲಸ ಮಾಡಿ, 3 ದಶಕಗಳ ಕಾಲ ಬಣ್ಣದ ವ್ಯಾಪಾರಿಯಾಗಿದ್ದರು. ಬಳಿಕ ನಾಟಕ ರಚನೆ, ನಟನೆ, ನಿರ್ದೇಶನದಲ್ಲಿ ಐದು ದಶಕಗಳ ಕಾಲ ಶ್ರಮಿಸಿದ ಅವರು ಮುಂಬೈ ತೊರೆದು ಮಂಗಳೂರಿನಲ್ಲಿ ನೆಲೆಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಿಂದೂ ಧರ್ಮ ಎಂದರೆ ಯಾರನ್ನೂ ಬಲವಂತವಾಗಿ ಜೈ ಶ್ರೀ ರಾಮ್ ಎಂದು ಹೇಳುವಂತೆ ಒತ್ತಾಯಿಸುವುದಲ್ಲ: ತರೂರ್ಮಹಾ ಕುಂಭ ಮೇಳದಲ್ಲಿ 'ಅಮೃತ ಸ್ನಾನ' ಕ್ಕಾಗಿ 'ಆಪರೇಷನ್ ಇಲೆವೆನ್'ಸಂಗೀತ ಕಾರ್ಯಕ್ರಮದಲ್ಲೇ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲುನ್ಯಾಕ್ ಗ್ರೇಡ್ ಕೊಡಲು ಲಂಚ ಪಡೆದ ವಿವಿ ಪ್ರಾಧ್ಯಾಪಕಿ ಬಂಧನಕಾಲೇಜು ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿ ಶಿಶುವನ್ನು ಕಸದ ಬುಟ್ಟಿಯಲ್ಲಿ ಬಚ್ಚಿಟ್ಟು ಕ್ಲಾಸಿಗೆ ಹಾಜರ್!ವಸಂತ ಪಂಚಮಿಯ ಪವಿತ್ರ ದಿನ- ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ 3ನೇ ಅಮೃತಸ್ನಾನಐರ್ಲೆಂಡ್‌ನಲ್ಲಿ ಕಾರು ಅಪಘಾತದಲ್ಲಿ ಇಬ್ಬರು ಭಾರತೀಯರು ಸಾವು.!ಉಡುಪಿ: ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟುಗೆ ವೈದ್ಯಕೀಯ ಪರೀಕ್ಷೆ , ನ್ಯಾಯಾಂಗ ಬಂಧನಐಎಎಸ್ ಅಧಿಕಾರಿ ಮುದ್ರಾ ಗೈರೋಲಾ ಯಶಸ್ಸಿನ ಪಯಣದ ಕಥನಕಲ್ಲಂಗಡಿ ಬೀಜದಲ್ಲಿ ಆರೋಗ್ಯ ಪ್ರಯೋಜನಗಳು ಅಡಗಿದೆ- ಬೀಜಗಳನ್ನ ಎಸೆಯುವ ಮುನ್ನ ಅದರ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳಿ!!