ಮಗನ ಅಂತಿಮ ದರ್ಶನಕ್ಕೆ ಬಿಡದ ಅಧಿಕಾರಿಗಳು - ಜೀವ ಬಿಟ್ಟ ತಂದೆ
ಚಂಡೀಗಢ: ವಿದ್ಯುತ್ ಅವಘಡದಿಂದ ಮೃತಪಟ್ಟ ಮಗನ ಅಂತಿಮ ದರ್ಶನಕ್ಕೆ ಅವಕಾಶ ನೀಡ ಜಿಎಸ್ಟಿ ಅಧಿಕಾರಿಗಳು ತಂದೆಯ ಸಾವಿಗೆ ಕಾರಣರಾಗಿದ್ದಾರೆ! ಬಲ್ಬೀರ್ ಸಿಂಗ್ ಎಂಬಾತರೇ ಮೃತಪಟ್ಟ ದುರ್ದೈವಿ. ಟ್ರಕ್ ಚಾಲಕರಾದ ಇವರು ಸರಕುಗಳನ್ನು ತಲುಪಿಸಲು ಕಾನ್ಪುರ ನಗರಕ್ಕೆ ತೆರಳಿದ್ದಾರೆ. ವಾಪಸ್ ಬರುವಾಗ ಅವರ ಮಗ ಮಹೇಶ್ ಎಂಬಾತ ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಸುದ್ದಿ ಬಂದಿದೆ. ಸುದ್ದಿ ತಿಳಿದು ಕೂಡಲೇ ಅವರು ತಮ್ಮ ಊರು ಪಂಜಾಬ್ನ ಲೂಧಿಯಾನ ಸಮೀಪದ ಅಸ್ಲಾಮ್ಗಂಜ್ಗೆ ತೆರಳಲು ಮುಂದಾಗಿದ್ದಾರೆ. ಆದರೆ ಇದೇ ವೇಳೆ ಅವರನ್ನು ಟ್ರಕ್ ಸಮೇತ ತಡೆದ ರಾಜ್ಯ ಜಿಎಸ್ಟಿ ಅಧಿಕಾರಿಗಳು ಬಲ್ಬೀರ್ ಸಿಂಗ್ ಅವರನ್ನು ವಶಕ್ಕೆ ಪಡೆದಿದ್ದಾರೆ. ತನ್ನ ಮಗ ಮೃತಪಟ್ಟಿದ್ದು ಕೂಡಲೇ ಊರಿಗೆ ಹೋಗಬೇಕಿದೆ ಎಂದು ತಿಳಿಸಿದರೂ ಅಧಿಕಾರಿಗಳು ಹೋಗಲು ಅನುಮತಿಸಿಲ್ಲ. ನಂತರ ಅಧಿಕಾರಿಗಳು ಬಲ್ಬೀರ್ ಸಿಂಗ್ ಅವರನ್ನು ಮಧ್ಯರಾತ್ರಿ ವೇಳೆ ತಮ್ಮ ಕಚೇರಿಗೆ ಕರೆದೊಯ್ದಿದ್ದಾರೆ. ದುರ್ದೈವ ಎಂಬಂತೆ ಮಗನ ಸಾವಿನ ಆಘಾತದಲ್ಲಿದ್ದ ಬಲ್ಬೀರ್ ಸಿಂಗ್ ಜಿಎಸ್ಟಿ ಕಚೇರಿಯಲ್ಲಿ ಮೃತಪಟ್ಟಿದ್ದಾರೆ. ಇತ್ತ ತಂದೆಯೂ ನಿಧನರಾದ ಸುದ್ದಿ ತಿಳಿದ ಬಲ್ಬೀರ್ ಅವರ ಹಿರಿಯ ಮಗ ಗೋವಿಂದ್ ತಕ್ಷಣ ಕಾನ್ಪುರಕ್ಕೆ ಬಂದಿದ್ದಾರೆ. ತನ್ನ ತಂದೆಯ ಶವ ಕಂಡು ರೋಧಿಸಿದ್ದಾರೆ. ತಮ್ಮ ಕುಟುಂಬ ಸರ್ವನಾಶವಾಗಿದೆ. ಇದಕ್ಕೆ ಜಿಎಸ್ಟಿ ಅಧಿಕಾರಿಗಳೇ ಕಾರಣ. ಇವರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ ಎಂದು ಗೋವಿಂದ್ ಮಾಧ್ಯಮದ ಮುಂದೆ ಹೇಳಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.