ಮಠದ ಹಣಕಾಸು ದುರುಪಯೋಗ ಪ್ರಕರಣ: ಎಸ್.ಕೆ. ಬಸವರಾಜನ್ ಆರೋಪದಿಂದ ಮುಕ್ತ.!
ಚಿತ್ರದುರ್ಗ : ಚಿತ್ರದುರ್ಗ ಮುರುಘರಾಜೇಂದ್ರ ಮಠದ ಹಣಕಾಸು ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ವಂಚನೆ ಆರೋಪದಿಂದ ಮಾಜಿ ಶಾಸಕರಾಗಿರುವ ಬಸವರಾಜನ್ ಅವರು ಮುಕ್ತರಾಗಿದ್ದಾರೆ..!
ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ನಿನ್ನೆ ಎಸ್. ಕೆ.ಬಸವರಾಜನ್ ಅವರನ್ನು ವಂಚನೆ ಆರೋಪದಿಂದ ಖುಲಾಸೆಗೊಳಿಸಿ ಆದೇಶ ಹೊರಡಿಸಿದೆ.
ಮುರಘಾ ಮಠದ ಎಸ್.ಜೆಎಂ ಕೋ-ಆಪರೇಟಿವ್ ಸುಸೈಟಿ ಹಣದಿಂದ ಆಸ್ತಿ ಖರೀದಿ ಮಾಡಿದ್ದಾರೆ ಎಂದು ಆರೋಪಿ ಬಸವರಾಜನ್ ವಿರುದ್ಧ ದೂರು ನೀಡಲಾಗಿತ್ತು. ಮಠದ ಪರವಾಗಿ ವಿಜಯಕುಮಾರ್ ಎನ್ನುವರು 2013ರ ಆಗಷ್ಟ್ 16ರಂದು ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಈ ಪ್ರಕರಣವನ್ನು ಕೋರ್ಟ್ ವಜಾ ಮಾಡಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.