LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಾನವ- ವನ್ಯಪ್ರಾಣಿ ಸಂಘರ್ಷ ತಡೆಗೆ ವೈಜ್ಞಾನಿಕ ಕ್ರಮ-ಅರಣ್ಯ ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು:ಇತ್ತೀಚೆಗೆ ರಾಜ್ಯದಲ್ಲಿ ಹೆಚ್ಚಾಗಿರುವ ಮಾನವ ವನ್ಯಪ್ರಾಣಿ ಸಂಘರ್ಷ ಹೆಚ್ಚಳವಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವನ್ಯಪ್ರಾಣಿಗಳು ನಾಡಿಗೆ ಬರದಂತೆ ತಡೆಗಟ್ಟಲು ವೈಜ್ಞಾನಿಕ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಅವರು ಇಂದು ಮಾನವ- ವನ್ಯಪ್ರಾಣಿ ಸಂಘರ್ಷ ಕುರಿತು ಅರಣ್ಯ ಸಚಿವರು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು.

ಕಳೆದ 15 ದಿನಗಳಲ್ಲಿ 11 ಜನರು ಆನೆ ದಾಳಿಯಿಂದ ಮೃತಪಟ್ಟಿದ್ದು, ನಿನ್ನೆ ನಾಗರಹೊಳೆ ಅರಣ್ಯ ಪ್ರದೇಶದ ಹೆಗ್ಗಡೆದೇವನಕೋಟೆ ತಾಲ್ಲೂಕಿನ ಕಲ್ಲಹಟ್ಟಿ ಗ್ರಾಮದಲ್ಲಿ ಕೃಷ್ಣ ನಾಯಕ್‌ ಎಂಬ 10 ವರ್ಷದ ಬಾಲಕನನ್ನು ಹುಲಿ ಎತ್ತೊಯ್ದಿರುವ ಕುರಿತು ಆತಂಕ ವ್ಯಕ್ತಪಡಿಸಿದರು.

ಅರಣ್ಯ ಇಲಾಖೆಯ ಅಧಿಕಾರಿಗಳು ಇಂತಹ ಘಟನೆಗಳು ಸಂಭವಿಸದಂತೆ ಕಟ್ಟೆಚ್ಚರ ವಹಿಸಲು ಸೂಚಿಸಿದರು.ಹಾಸನದಲ್ಲಿ ಆನೆಗಳ ಅರಿವಳಿಕೆ ತಜ್ಞ ವೆಂಕಟೇಶ್‌ ಅವರು ಆನೆ ತುಳಿತಕ್ಕೆ ಬಲಿ ಆಗಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿ, ಗಾಯಾಳು ಆನೆಗೆ ಚಿಕಿತ್ಸೆ ನೀಡುವಾಗ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿತ್ತೇ ಎಂದು ಖಾರವಾಗಿ ಪ್ರಶ್ನಿಸಿದ ಮುಖ್ಯಮಂತ್ರಿಗಳು ಹಾಸನ ಡಿ.ಎಫ್.ಓ. ಗೆ ಕಾರಣ ಕೇಳಿ ನೋಟಿಸ್‌ ನೀಡುವಂತೆ ನಿರ್ದೇಶನ ನೀಡಿದರು.

ಆನೆಗಳು ಜನವಸತಿಗಳತ್ತ ಬರುವುದನ್ನು ತಡೆಯಲು ರೈಲ್ವೆ ಹಳಿಯ ತಡೆಗೋಡೆ ನಿರ್ಮಿಸಲು ಈ ವರ್ಷ 100 ಕೋಟಿ ಒದಗಿಸಲಾಗಿದೆ. ಇದರಲ್ಲಿ ಹಳೆ ಬಾಕಿ 54 ಕೋಟಿ ರೂ. ಪಾವತಿಸಬೇಕಾಗಿದೆ. ಉಳಿದ ಮೊತ್ತದಲ್ಲಿ ಕೇವಲ 50 ಕಿ.ಮೀ. ತಡೆಗೋಡೆ ನಿರ್ಮಿಸಲು ಸಾಧ್ಯವೆಂದ ಸಚಿವ ಈಶ್ವರ ಖಂಡ್ರೆ, ಹೆಚ್ಚುವರಿ ಅನುದಾನ ಒದಗಿಸಲು ಮನವಿ ಮಾಡಿದರು.

ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು ಹಳೆ ಬಾಕಿ 54 ಕೋಟಿ ರೂ. ಜೊತೆಗೆ 100 ಕೋಟಿ ರೂ.ಗಳನ್ನು ಈ ವರ್ಷ ವೆಚ್ಚ ಮಾಡುವಂತೆ ತಿಳಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜನವರಿಯಲ್ಲಿ ಭಾರತ್ ಜೋಡೋ ಯಾತ್ರೆ 2.0..?Indian Navy Recruitment 2023: ಭಾರತೀಯ ನೌಕಾಪಡೆಯ 910 ಸೀನಿಯರ್ ಡ್ರಾಫ್ಟ್‌ಮ್ಯಾನ್ ಹುದ್ದೆಗಳಿಗೆ ಇಂದೇ ಅರ್ಜಿಯನ್ನು ಸಲ್ಲಿಸಿ.ಸಾಂತಾ ಕ್ಲಾಸ್ ಉಡುಪಿನಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ ಪ್ರಧಾನಿ ಮೋದಿ...!ನ್ಯಾಯಕ್ಕಾಗಿ ಠಾಣೆಗೆ ಬಂದ ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ - ಪಿಎಸ್ಐ ಅಮಾನತುSSLC, PUC ಹಾಗೂ Diploma ವನ್ನು ಓದಿದವರಿಗೆ ನ್ಯಾಯಾಲಯದಲ್ಲಿ ಹುದ್ದೆಗಳು..! ಇಂದೇ ಅರ್ಜಿಯನ್ನು ಸಲ್ಲಿಸಿಚಳಿಗಾಲದಲ್ಲಿ ಈ ಆಹಾರಗಳ ಸೇವನೆಯನ್ನು ಮಾತ್ರ ಎಂದಿಗೂ ಮರೆಯಬಾರದು..!ಹೆತ್ತ ತಾಯಿಯನ್ನೇ ಹಿಗ್ಗಾಮುಗ್ಗಾ ಥಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿದ ಪಾಪಿ ಪುತ್ರಮನೆಯ ಉತ್ತರ ದಿಕ್ಕಿನಲ್ಲಿ ಈ ವಸ್ತುಗಳನ್ನು ಇಟ್ಟರೆ ಧನ ಸಂಪತ್ತು ವೃದ್ಧಿಯಾಗಿ ಶ್ರೀಮಂತರಾಗುವ ಯೋಗ ಬರುತ್ತದೆ!ಸರ್ಕಾರ ಜಾತಿ ಗಣತಿಯ ಅಂಕಿ-ಅಂಶ ಬಿಡುಗಡೆ ಮಾಡಬಾರದು: ಶಾಮನೂರು ಶಿವಶಂಕರಪ್ಪ.!ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ : ಜಗದೀಶ್ ಶೆಟ್ಟರ್.!