ಮೀನುಗಾರಿಕೆ ಇಲಾಖೆ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಚಿತ್ರದುರ್ಗ: ಮೀನುಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಜಿಲ್ಲಾವಲಯ ಮತ್ತು ರಾಜ್ಯವಲಯ ಯೋಜನೆಯಡಿ ಫಲಾನಭವಿ ಆಧಾರಿತ ಯೋಜನೆಗಳಾದ ಬಾವಿ ಮತ್ತು ಹೊಂಡಗಳಿಗೆ ಉಚಿತ ಮೀನುಮರಿ ಸರಬರಾಜು, ಮೀನುಮರಿ ಖರೀದಿಗೆ ಸಹಾಯ, ಮೀನು ಮಾರಾಟಕ್ಕೆ ದ್ವಿಚಕ್ರ ವಾಹನ ಖರೀದಿಗೆ ಸಹಾಯ, ಮೀನುಗಾರಿಕೆ ಸಲಕರಣೆ ಕಿಟ್ಟು ಪಡೆಯಲು ಸಹಾಯ ಇತ್ಯಾದಿ ಯೋಜನೆಗಳಲ್ಲಿ ಪ್ರಯೋಜನ ಪಡೆಯಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಗತ್ಯ ದಾಖಲಾತಿಗಳೊಂದಿಗೆ ತಾಲ್ಲೂಕುಮಟ್ಟದ ಕಚೇರಿಗೆ, ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 30 ಅರ್ಜಿ ಸಲ್ಲಿಸಲು ಕಡೆಯ ದಿನ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.